• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಂಬಳಕ್ಕೆ ಕ್ರೀಡಾ ಇಲಾಖೆ ಮಾನ್ಯತೆ ಕೊಡಲು ಯಾವಾಗ ಮನಸ್ಸು ಮಾಡಲಿದೆ ?

Tulunadu News Posted On December 10, 2024
0


0
Shares
  • Share On Facebook
  • Tweet It

ಕ್ರೀಡಾ ಇಲಾಖೆ ಮಾನ್ಯತೆಯ ನಿರೀಕ್ಷೆಯಲ್ಲಿ ಕರಾವಳಿ “ಕಂಬಳ’ “ಕಂಬಳ ರಾಜ್ಯ ಅಸೋಸಿಯೇಶನ್ ರಚನೆ: ಮಾನ್ಯತೆ ಪ್ರಕ್ರಿಯೆ ಬಹುತೇಕ ಪೂರ್ಣ

ಮಂಗಳೂರು: ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ಪಡೆಯುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸುರು ನಿಶಾನೆ ತೋರಿಸಿದೆ.

ಈ ಸಂಬಂಧ ಅಂತಿಮ ಒಪ್ಪಿಗೆಯನ್ನು ನಿರೀಕ್ಷಿಸಲಾಗುತ್ತಿದ್ದು, ಕಂಬಳ ಜಿಲ್ಲಾ ಸಮಿತಿಯು ವಿಶೇಷ’ ಮಹಾಸಭೆ ಕರೆದು ಚರ್ಚಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ವರದಿಯಲ್ಲಿ ತಿಳಿಸಿದೆ. ಜತೆಗೆ ಸಮಿತಿಯ ಮುಂದಿನ ಪದಾಧಿಕಾರಿಗಳ ಆಯ್ಕೆಯನ್ನೂ ನಡೆಸುವುದಾಗಿ ತಿಳಿಸಿದೆ. ಕಂಬಳಕ್ಕೆ ಇನ್ನಷ್ಟು ಶಕ್ತಿ ತುಂಬಿ ಕ್ರೀಡೆಯ ಮನ್ನಣೆ ನೀಡುವುದು, ಪ್ರವಾಸಿಗರನ್ನು ಅಕರ್ಷಿಸುವ ಹಿನ್ನೆಲೆಯಲ್ಲಿ ಸರಕಾರವು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ ಪಡೆದು ರಾಜ್ಯ ಕಂಬಳ ಅಸೋಸಿಯೇಶನ್ ರಚಿಸುವ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಸಹಕಾರ ಸಂಘಗಳ ಉಪನಿಬಂಧಕರಡಿ ಕಂಬಳ ರಾಜ್ಯ ಅಸೋಸಿಯೇಶನ್ ನೋಂದಣಿ ಮಾಡಲಾಗಿದೆ. ಇದಲ್ಲದೆ ರಾಷ್ಟ್ರೀಯ ಕ್ರೀಡಾ ಇಲಾಖೆ ಮಾನ್ಯತೆ ಪಡೆಯಲು ರಾಷ್ಟ್ರೀಯ ಕಂಬಳ ಫೆಡರೇಶನ್ ನೋಂದಣಿ ಮಾಡುವ ಪ್ರಯತ್ನವೂ ಚಾಲ್ತಿಯಲ್ಲಿದೆ.

ರಾಜ್ಯ ಕಂಬಳ ಸಮಿತಿಯು ಒಂದು ವರ್ಷದ ಲೆಕ್ಕಪತ್ರ ವರದಿ ಮಂಡಿಸಿದ್ದು ಸರ್ವಾನುಮತದಿಂದ ಆಯ್ಕೆ ಮಾಡಿದ ಪದಾಧಿಕಾರಿಗಳ ಪಟ್ಟಿ, ಬೈಲಾ ಪ್ರತಿಯನ್ನೂ ಸಲ್ಲಿಸಲಾಗಿದೆ. ಇದರ ಪರಾಮರ್ಶೆ ಬಳಿಕ ಕ್ರೀಡಾ ಇಲಾಖೆಯಿಂದ ಮಾನ್ಯತೆ ದೊರಕುವ ನಿರೀಕ್ಷೆಯಲ್ಲಿದೆ.

“ಕಂಬಳ ರಾಜ್ಯ ಅಸೋಸಿಯೇಶನ್ಗೆ ಸರಕಾರದ ಮಾನ್ಯತೆ ದೊರಕಿದ ಬಳಿಕ ಕಂಬಳಕ್ಕೆ ಸರಕಾರದಿಂದ ವಿಶೇಷ ಪ್ರೋತ್ಸಾಹ, ಅನುದಾನ ದೊರಕಬಹುದು. ಪ್ರವಾಸೋದ್ಯಮ ಹಾಗೂ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಇನ್ನಷ್ಟು ವೈಭವದಿಂದ ಉತ್ಸವಗಳನ್ನು ಹಮ್ಮಿಕೊಳ್ಳಬಹುದು. ರಾಜ್ಯ ಮಟ್ಟದ ಪ್ರಶಸ್ತಿ ನೀಡುವ ಸಂದರ್ಭ ಕಂಬಳದ ಕೋಣ ಓಡಿಸುವವರನ್ನೂ ಕ್ರೀಡಾಳುಗಳಂತೆ ಪರಿಗಣಿಸುವಂತೆ ಮಾಡುವ ಉದ್ದೇಶವಿದೆ.

ಅಸೋಸಿಯೇಶನ್‌ಗೆ ಕ್ರೀಡಾ ಇಲಾಖೆ ಮಾನ್ಯತೆ ದೊರಕಿದ ಬಳಿಕ ಎಲ್ಲ ಜಿಲ್ಲಾ ಹಾಗೂ ಸ್ಥಳೀಯ ಕಂಬಳ ಸಮಿತಿಗಳನ್ನು ರಾಜ್ಯಮಟ್ಟದ ಅಸೋಸಿಯೇಶನ್‌ನಲ್ಲಿ ನೋಂದಾಯಿಸಿ ಪ್ರತ್ಯೇಕ ಬೈಲಾ ರಚಿಸಿ ಸ್ಥಳೀಯ ಕಂಬಳ ಸಮಿತಿಗಳಿಗೆ ಹಣ ಬಿಡುಗಡೆ ಮಾಡಬಹುದು ಎಂಬ ಲೆಕ್ಕಾಚಾರವೂ ಇದೆ.

ಕಂಬಳಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದೆ.
ಅನಾದಿ ಕಾಲದ ಸಂಪ್ರದಾಯ ಕಂಬಳ (ದೈವಾರಾಧನೆಯೊಂದಿಗೆ) ಆಧುನಿಕ ಕಂಬಳ ಹಾಗೂ ಒಂಟಿ ಕೆರೆ ಕಂಬಳಗಳು ನಡೆಯುತ್ತಿವೆ.

ತರಬೇತಿ ಪಡೆದ 150 ಯುವ ಓಟಗಾರರಿದ್ದಾರೆ.

ಸುಮಾರು 500ಕ್ಕೂ ಅಧಿಕ ಮಂದಿ ಕೋಣಗಳ ಸೇವೆ ಹಾಗೂ ಕಂಬಳದಲ್ಲಿ ದುಡಿಯುವ ವರ್ಗವಿದೆ.

ಸುಮಾರು 25 ಜೋಡುಕೆರೆ ಕಂಬಳ ನಡೆಯುತ್ತಿದೆ.

ಒಂದು ಕಂಬಳಕ್ಕೆ 30ರಿಂದ 40 ಲಕ್ಷ ರೂ. ಖರ್ಚು ಇದೆ..

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search