• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಂಬಳಕ್ಕೆ ಕ್ರೀಡಾ ಇಲಾಖೆ ಮಾನ್ಯತೆ ಕೊಡಲು ಯಾವಾಗ ಮನಸ್ಸು ಮಾಡಲಿದೆ ?

Tulunadu News Posted On December 10, 2024


  • Share On Facebook
  • Tweet It

ಕ್ರೀಡಾ ಇಲಾಖೆ ಮಾನ್ಯತೆಯ ನಿರೀಕ್ಷೆಯಲ್ಲಿ ಕರಾವಳಿ “ಕಂಬಳ’ “ಕಂಬಳ ರಾಜ್ಯ ಅಸೋಸಿಯೇಶನ್ ರಚನೆ: ಮಾನ್ಯತೆ ಪ್ರಕ್ರಿಯೆ ಬಹುತೇಕ ಪೂರ್ಣ

ಮಂಗಳೂರು: ಕರಾವಳಿಯ ಜನಪ್ರಿಯ ಹಾಗೂ ಸಾಹಸ ಕ್ರೀಡೆ ಕಂಬಳವನ್ನು ಶಿಸ್ತುಬದ್ಧವಾಗಿ ಪ್ರವಾಸೋದ್ಯಮಕ್ಕೆ ಉತ್ತೇಜನವಾಗುವಂತೆ ಕೈಗೊಳ್ಳಲು “ಕಂಬಳ ರಾಜ್ಯ ಅಸೋಸಿಯೇಶನ್’ ರಚಿಸಿ ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ಮಾನ್ಯತೆ ಪಡೆಯುವ ಪ್ರಕ್ರಿಯೆಗೆ ರಾಜ್ಯ ಸರಕಾರ ಹಸುರು ನಿಶಾನೆ ತೋರಿಸಿದೆ.

ಈ ಸಂಬಂಧ ಅಂತಿಮ ಒಪ್ಪಿಗೆಯನ್ನು ನಿರೀಕ್ಷಿಸಲಾಗುತ್ತಿದ್ದು, ಕಂಬಳ ಜಿಲ್ಲಾ ಸಮಿತಿಯು ವಿಶೇಷ’ ಮಹಾಸಭೆ ಕರೆದು ಚರ್ಚಿಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ವರದಿಯಲ್ಲಿ ತಿಳಿಸಿದೆ. ಜತೆಗೆ ಸಮಿತಿಯ ಮುಂದಿನ ಪದಾಧಿಕಾರಿಗಳ ಆಯ್ಕೆಯನ್ನೂ ನಡೆಸುವುದಾಗಿ ತಿಳಿಸಿದೆ. ಕಂಬಳಕ್ಕೆ ಇನ್ನಷ್ಟು ಶಕ್ತಿ ತುಂಬಿ ಕ್ರೀಡೆಯ ಮನ್ನಣೆ ನೀಡುವುದು, ಪ್ರವಾಸಿಗರನ್ನು ಅಕರ್ಷಿಸುವ ಹಿನ್ನೆಲೆಯಲ್ಲಿ ಸರಕಾರವು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ ಪಡೆದು ರಾಜ್ಯ ಕಂಬಳ ಅಸೋಸಿಯೇಶನ್ ರಚಿಸುವ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಸಹಕಾರ ಸಂಘಗಳ ಉಪನಿಬಂಧಕರಡಿ ಕಂಬಳ ರಾಜ್ಯ ಅಸೋಸಿಯೇಶನ್ ನೋಂದಣಿ ಮಾಡಲಾಗಿದೆ. ಇದಲ್ಲದೆ ರಾಷ್ಟ್ರೀಯ ಕ್ರೀಡಾ ಇಲಾಖೆ ಮಾನ್ಯತೆ ಪಡೆಯಲು ರಾಷ್ಟ್ರೀಯ ಕಂಬಳ ಫೆಡರೇಶನ್ ನೋಂದಣಿ ಮಾಡುವ ಪ್ರಯತ್ನವೂ ಚಾಲ್ತಿಯಲ್ಲಿದೆ.

ರಾಜ್ಯ ಕಂಬಳ ಸಮಿತಿಯು ಒಂದು ವರ್ಷದ ಲೆಕ್ಕಪತ್ರ ವರದಿ ಮಂಡಿಸಿದ್ದು ಸರ್ವಾನುಮತದಿಂದ ಆಯ್ಕೆ ಮಾಡಿದ ಪದಾಧಿಕಾರಿಗಳ ಪಟ್ಟಿ, ಬೈಲಾ ಪ್ರತಿಯನ್ನೂ ಸಲ್ಲಿಸಲಾಗಿದೆ. ಇದರ ಪರಾಮರ್ಶೆ ಬಳಿಕ ಕ್ರೀಡಾ ಇಲಾಖೆಯಿಂದ ಮಾನ್ಯತೆ ದೊರಕುವ ನಿರೀಕ್ಷೆಯಲ್ಲಿದೆ.

“ಕಂಬಳ ರಾಜ್ಯ ಅಸೋಸಿಯೇಶನ್ಗೆ ಸರಕಾರದ ಮಾನ್ಯತೆ ದೊರಕಿದ ಬಳಿಕ ಕಂಬಳಕ್ಕೆ ಸರಕಾರದಿಂದ ವಿಶೇಷ ಪ್ರೋತ್ಸಾಹ, ಅನುದಾನ ದೊರಕಬಹುದು. ಪ್ರವಾಸೋದ್ಯಮ ಹಾಗೂ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಇನ್ನಷ್ಟು ವೈಭವದಿಂದ ಉತ್ಸವಗಳನ್ನು ಹಮ್ಮಿಕೊಳ್ಳಬಹುದು. ರಾಜ್ಯ ಮಟ್ಟದ ಪ್ರಶಸ್ತಿ ನೀಡುವ ಸಂದರ್ಭ ಕಂಬಳದ ಕೋಣ ಓಡಿಸುವವರನ್ನೂ ಕ್ರೀಡಾಳುಗಳಂತೆ ಪರಿಗಣಿಸುವಂತೆ ಮಾಡುವ ಉದ್ದೇಶವಿದೆ.

ಅಸೋಸಿಯೇಶನ್‌ಗೆ ಕ್ರೀಡಾ ಇಲಾಖೆ ಮಾನ್ಯತೆ ದೊರಕಿದ ಬಳಿಕ ಎಲ್ಲ ಜಿಲ್ಲಾ ಹಾಗೂ ಸ್ಥಳೀಯ ಕಂಬಳ ಸಮಿತಿಗಳನ್ನು ರಾಜ್ಯಮಟ್ಟದ ಅಸೋಸಿಯೇಶನ್‌ನಲ್ಲಿ ನೋಂದಾಯಿಸಿ ಪ್ರತ್ಯೇಕ ಬೈಲಾ ರಚಿಸಿ ಸ್ಥಳೀಯ ಕಂಬಳ ಸಮಿತಿಗಳಿಗೆ ಹಣ ಬಿಡುಗಡೆ ಮಾಡಬಹುದು ಎಂಬ ಲೆಕ್ಕಾಚಾರವೂ ಇದೆ.

ಕಂಬಳಕ್ಕೆ ಸುಮಾರು 800 ವರ್ಷಗಳ ಇತಿಹಾಸವಿದೆ.
ಅನಾದಿ ಕಾಲದ ಸಂಪ್ರದಾಯ ಕಂಬಳ (ದೈವಾರಾಧನೆಯೊಂದಿಗೆ) ಆಧುನಿಕ ಕಂಬಳ ಹಾಗೂ ಒಂಟಿ ಕೆರೆ ಕಂಬಳಗಳು ನಡೆಯುತ್ತಿವೆ.

ತರಬೇತಿ ಪಡೆದ 150 ಯುವ ಓಟಗಾರರಿದ್ದಾರೆ.

ಸುಮಾರು 500ಕ್ಕೂ ಅಧಿಕ ಮಂದಿ ಕೋಣಗಳ ಸೇವೆ ಹಾಗೂ ಕಂಬಳದಲ್ಲಿ ದುಡಿಯುವ ವರ್ಗವಿದೆ.

ಸುಮಾರು 25 ಜೋಡುಕೆರೆ ಕಂಬಳ ನಡೆಯುತ್ತಿದೆ.

ಒಂದು ಕಂಬಳಕ್ಕೆ 30ರಿಂದ 40 ಲಕ್ಷ ರೂ. ಖರ್ಚು ಇದೆ..

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search