• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದಲ್ಲಿ ಮೋದಿ – ಅದಾನಿ ಟೀ ಶರ್ಟ್ , ತೆಲಂಗಾಣದಲ್ಲಿ ಕಾಂಗ್ರೆಸ್ ಸಿಎಂ – ಅದಾನಿ ಟೀ ಶರ್ಟ್ ವಿವಾದ!

Tulunadu News Posted On December 10, 2024
0


0
Shares
  • Share On Facebook
  • Tweet It

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಗಾಗ್ಗೆ ಮೋದಿ ಹಾಗೂ ಅದಾನಿ ವಿಷಯದಲ್ಲಿ ಆರೋಪ, ಟೀಕೆ, ವ್ಯಂಗ್ಯ ಹೀಗೆ ಮಾಡುತ್ತಲೇ ಬರುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಎರಡು ದಿನಗಳ ಹಿಂದಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸಂಸತ್ ಭವನದ ಹೊರಗೆ ಪ್ರತಿಭಟನೆಯಲ್ಲಿ ತಮ್ಮ ಟೀಶರ್ಟ್ ನ ಬೆನ್ನಿನ ಭಾಗದಲ್ಲಿ ಮೋದಿ ಅದಾನಿ ಏಕ್ ಹೇ, ಅದಾನಿ ಸೇಫ್ ಹೇ ಎನ್ನುವ ಶಬ್ದಗಳನ್ನು ಬರೆದ ಸ್ಟಿಕ್ಕರ್ ಅಂಟಿಸಿಕೊಂಡು ಪ್ರತಿಭಟಿಸುತ್ತಿದ್ದರು. ಅವರ ಜೊತೆಯಲ್ಲಿ ಇದ್ದವರು ಕೂಡ ಹಾಗೆ ಮಾಡಿದ್ದರು. ಈ ಮೂಲಕ ಮೋದಿಯವರ ‘ಏಕ್ ಹೇ ತೋ ಸೇಫ್ ಹೇ’ ಎಂಬ ಘೋಷಣಾ ವಾಕ್ಯವನ್ನು ಹಂಗಿಸುವಂತೆ ಪ್ರತಿಭಟನಾ ರಣತಂತ್ರವನ್ನು ಹೆಣೆದಿದ್ದರು.

ದೆಹಲಿಯಲ್ಲಿ ಅದಾನಿಯವರನ್ನು ತೆಗಳುವ ಕಾಂಗ್ರೆಸ್ ಪಕ್ಷ ತಾನು ಅಧಿಕಾರದಲ್ಲಿರುವ ತೆಲಂಗಾಣದಲ್ಲಿ ಬೇರೆಯದ್ದೇ ರೀತಿಯ ರಾಜಕೀಯವನ್ನು ಮಾಡುತ್ತಿದೆ. ಅಲ್ಲಿ ಮುಖ್ಯಮಂತ್ರಿಯಾಗಿರುವ ಕಾಂಗ್ರೆಸ್ಸಿನ ರೇವಂತ್ ರೆಡ್ಡಿ ಇದೇ ಅದಾನಿಯವರೊಂದಿಗೆ ಒಪ್ಪಂದವನ್ನು ಮಾಡಿಕೊಂಡು ರಾಜ್ಯದಲ್ಲಿ ಬಂಡವಾಳ ತಂದಿದ್ದಾರೆ. ಇದನ್ನು ಬಿಆರ್ ಎಸ್ ಶಾಸಕರಾದ ಕೆಟಿಆರ್ ಅವರು ವಿರೋಧಿಸಿ ಅದಾನಿ ಹಾಗೂ ರೇವಂತ್ ರೆಡ್ಡಿ ಜೊತೆಗಿರುವ ಫೋಟೋ ಧರಿಸಿ ವಿಧಾನಸೌಧದ ಒಳಗೆ ಪ್ರವೇಶಿಸಲು ಹೊರಟಾಗ ಪೊಲೀಸರು ಅವರನ್ನು ತಡೆದಿದ್ದಾರೆ.

ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಲುವುಗಳು ವ್ಯತಿರಿಕ್ತವಾಗಿವೆ. ಕೇಂದ್ರದ ಮುಖಂಡರು ಅದಾನಿಯನ್ನು ಕಂಡರೆ ಉರಿದುಬೀಳುತ್ತಾರೆ. ಅಂಬಾನಿಯವರನ್ನು ಕಂಡರೆ ಮೈಮೇಲೆ ಆವೇಶ ಬಂದವರಂತೆ ಆಡುತ್ತಾರೆ. ಆದರೆ ಅದೇ ಕಾಂಗ್ರೆಸ್ಸಿಗರು ಮುಖಂಡರು ಅದಾನಿಯವರ ಮಗ ಅನಂತ್ ಹಾಗೂ ರಾಧಿಕಾ ಮರ್ಚೆಂಟ್ ಮದುವೆಗೆ ಹೋಗಿ ಭಾಗವಹಿಸಿ ಎಂಜಾಯ್ ಮಾಡಿದ್ದಾರೆ. ಆಗ ಅವರಿಗೆ ಅಂಬಾನಿ ವಿರೋಧಿಯಲ್ಲ. ಅದೇ ಚುನಾವಣಾ ಪ್ರಚಾರ ಸಭೆಗಳಲ್ಲಿ, ಸಂಸತ್ತಿನಲ್ಲಿ ಮೋದಿ, ಅದಾನಿ, ಅಂಬಾನಿಯನ್ನು ಟೀಕಿಸದಿದ್ದರೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿಗೆ ಆ ಕಾರ್ಯಕ್ರಮ ಅಪೂರ್ಣವೆನಿಸುತ್ತದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರ ಕೆಟಿ ರಾಮರಾವ್ ಮಾತ್ರ ಇದೇ ವಿಷಯವನ್ನು ಅಸ್ತ್ರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಹಾಗಾದರೆ ತೆಲಂಗಾಣದ ಸಿಎಂ ರೆಡ್ಡಿ ತಾವು ಕಾಂಗ್ರೆಸ್ ಹೈಕಮಾಂಡಿಗೆ ಬಿಸಿತುಪ್ಪ ಆಗುತ್ತೇನೆ ಎಂದು ಗೊತ್ತಿದ್ದರೂ ಅದಾನಿಯವರೊಂದಿಗೆ ಒಪ್ಪಂದ ಮಾಡಿಕೊಂಡ್ರಾ ಅಥವಾ ಅವರಿಗೆ ಅದು ಅನಿವಾರ್ಯವಾಗಿತ್ತಾ?

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search