• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇಂದ್ರದಲ್ಲಿ ಮೋದಿ – ಅದಾನಿ ಟೀ ಶರ್ಟ್ , ತೆಲಂಗಾಣದಲ್ಲಿ ಕಾಂಗ್ರೆಸ್ ಸಿಎಂ – ಅದಾನಿ ಟೀ ಶರ್ಟ್ ವಿವಾದ!

Tulunadu News Posted On December 10, 2024
0


0
Shares
  • Share On Facebook
  • Tweet It

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಆಗಾಗ್ಗೆ ಮೋದಿ ಹಾಗೂ ಅದಾನಿ ವಿಷಯದಲ್ಲಿ ಆರೋಪ, ಟೀಕೆ, ವ್ಯಂಗ್ಯ ಹೀಗೆ ಮಾಡುತ್ತಲೇ ಬರುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಎರಡು ದಿನಗಳ ಹಿಂದಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಸಂಸತ್ ಭವನದ ಹೊರಗೆ ಪ್ರತಿಭಟನೆಯಲ್ಲಿ ತಮ್ಮ ಟೀಶರ್ಟ್ ನ ಬೆನ್ನಿನ ಭಾಗದಲ್ಲಿ ಮೋದಿ ಅದಾನಿ ಏಕ್ ಹೇ, ಅದಾನಿ ಸೇಫ್ ಹೇ ಎನ್ನುವ ಶಬ್ದಗಳನ್ನು ಬರೆದ ಸ್ಟಿಕ್ಕರ್ ಅಂಟಿಸಿಕೊಂಡು ಪ್ರತಿಭಟಿಸುತ್ತಿದ್ದರು. ಅವರ ಜೊತೆಯಲ್ಲಿ ಇದ್ದವರು ಕೂಡ ಹಾಗೆ ಮಾಡಿದ್ದರು. ಈ ಮೂಲಕ ಮೋದಿಯವರ ‘ಏಕ್ ಹೇ ತೋ ಸೇಫ್ ಹೇ’ ಎಂಬ ಘೋಷಣಾ ವಾಕ್ಯವನ್ನು ಹಂಗಿಸುವಂತೆ ಪ್ರತಿಭಟನಾ ರಣತಂತ್ರವನ್ನು ಹೆಣೆದಿದ್ದರು.

ದೆಹಲಿಯಲ್ಲಿ ಅದಾನಿಯವರನ್ನು ತೆಗಳುವ ಕಾಂಗ್ರೆಸ್ ಪಕ್ಷ ತಾನು ಅಧಿಕಾರದಲ್ಲಿರುವ ತೆಲಂಗಾಣದಲ್ಲಿ ಬೇರೆಯದ್ದೇ ರೀತಿಯ ರಾಜಕೀಯವನ್ನು ಮಾಡುತ್ತಿದೆ. ಅಲ್ಲಿ ಮುಖ್ಯಮಂತ್ರಿಯಾಗಿರುವ ಕಾಂಗ್ರೆಸ್ಸಿನ ರೇವಂತ್ ರೆಡ್ಡಿ ಇದೇ ಅದಾನಿಯವರೊಂದಿಗೆ ಒಪ್ಪಂದವನ್ನು ಮಾಡಿಕೊಂಡು ರಾಜ್ಯದಲ್ಲಿ ಬಂಡವಾಳ ತಂದಿದ್ದಾರೆ. ಇದನ್ನು ಬಿಆರ್ ಎಸ್ ಶಾಸಕರಾದ ಕೆಟಿಆರ್ ಅವರು ವಿರೋಧಿಸಿ ಅದಾನಿ ಹಾಗೂ ರೇವಂತ್ ರೆಡ್ಡಿ ಜೊತೆಗಿರುವ ಫೋಟೋ ಧರಿಸಿ ವಿಧಾನಸೌಧದ ಒಳಗೆ ಪ್ರವೇಶಿಸಲು ಹೊರಟಾಗ ಪೊಲೀಸರು ಅವರನ್ನು ತಡೆದಿದ್ದಾರೆ.

ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಲುವುಗಳು ವ್ಯತಿರಿಕ್ತವಾಗಿವೆ. ಕೇಂದ್ರದ ಮುಖಂಡರು ಅದಾನಿಯನ್ನು ಕಂಡರೆ ಉರಿದುಬೀಳುತ್ತಾರೆ. ಅಂಬಾನಿಯವರನ್ನು ಕಂಡರೆ ಮೈಮೇಲೆ ಆವೇಶ ಬಂದವರಂತೆ ಆಡುತ್ತಾರೆ. ಆದರೆ ಅದೇ ಕಾಂಗ್ರೆಸ್ಸಿಗರು ಮುಖಂಡರು ಅದಾನಿಯವರ ಮಗ ಅನಂತ್ ಹಾಗೂ ರಾಧಿಕಾ ಮರ್ಚೆಂಟ್ ಮದುವೆಗೆ ಹೋಗಿ ಭಾಗವಹಿಸಿ ಎಂಜಾಯ್ ಮಾಡಿದ್ದಾರೆ. ಆಗ ಅವರಿಗೆ ಅಂಬಾನಿ ವಿರೋಧಿಯಲ್ಲ. ಅದೇ ಚುನಾವಣಾ ಪ್ರಚಾರ ಸಭೆಗಳಲ್ಲಿ, ಸಂಸತ್ತಿನಲ್ಲಿ ಮೋದಿ, ಅದಾನಿ, ಅಂಬಾನಿಯನ್ನು ಟೀಕಿಸದಿದ್ದರೆ ರಾಹುಲ್ ಹಾಗೂ ಪ್ರಿಯಾಂಕಾ ಅವರಿಗೆ ಆ ಕಾರ್ಯಕ್ರಮ ಅಪೂರ್ಣವೆನಿಸುತ್ತದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಪುತ್ರ ಕೆಟಿ ರಾಮರಾವ್ ಮಾತ್ರ ಇದೇ ವಿಷಯವನ್ನು ಅಸ್ತ್ರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ಹಾಗಾದರೆ ತೆಲಂಗಾಣದ ಸಿಎಂ ರೆಡ್ಡಿ ತಾವು ಕಾಂಗ್ರೆಸ್ ಹೈಕಮಾಂಡಿಗೆ ಬಿಸಿತುಪ್ಪ ಆಗುತ್ತೇನೆ ಎಂದು ಗೊತ್ತಿದ್ದರೂ ಅದಾನಿಯವರೊಂದಿಗೆ ಒಪ್ಪಂದ ಮಾಡಿಕೊಂಡ್ರಾ ಅಥವಾ ಅವರಿಗೆ ಅದು ಅನಿವಾರ್ಯವಾಗಿತ್ತಾ?

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search