• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿವೃತ್ತಿಯ ಹೊತ್ತಿನಲ್ಲಿ ಅಶ್ವಿನ್ ಸ್ಲಿಪ್ ನಲ್ಲಿ ನಿಲ್ಲುತ್ತಿದ್ದ ನಾಲ್ವರನ್ನು ಸ್ಮರಿಸಿದ್ದು ಯಾಕೆ?

Tulunadu News Posted On December 18, 2024
0


0
Shares
  • Share On Facebook
  • Tweet It

ಭಾರತೀಯ ಆಫ್ ಸ್ಪಿನರ್ ಆರ್ ಅಶ್ವಿನ್ ಅವರು ಬಾರ್ಡರ್ – ಗವಾಸ್ಕರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಮಧ್ಯದಲ್ಲಿಯೆ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಾಟಗಳಿಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷ ಪ್ರಾಯದ ಅಶ್ವಿನ್ ಅವರ ಸಡನ್ ನಿರ್ಧಾರ ಕ್ರಿಕೆಟ್ ಅಭಿಮಾನಿಗಳಿಗೆ ಆಶ್ಚರ್ಯ ತಂದಿದೆ.

ಮೂರನೇ ಟೆಸ್ಟ್ ಪಂದ್ಯಾಟ ಮುಗಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾತನಾಡಿದ ಅಶ್ವಿನ್ ಇನ್ನು ಮುಂದೆ ಎಲ್ಲಾ ರೀತಿಯ ಕ್ರಿಕೆಟ್ ಪಂದ್ಯಾಟಗಳಿಂದ ತಾವು ನಿವೃತ್ತರಾಗುವುದಾಗಿ ಘೋಷಿಸಿದರು. ಅವರು ಒಟ್ಟು 106 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಅದರಲ್ಲಿ ಒಟ್ಟು 537 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಆಸ್ಟ್ರೇಲಿಯಾದ ಗಬ್ಬಾದಲ್ಲಿ ಭಾರತ ತಂಡದ ಕಪ್ತಾನ ರೋಹಿತ್ ಶರ್ಮಾ ಅವರೊಂದಿಗೆ ಸುದ್ದಿಗೋಷ್ಟಿ ನಡೆಸಿ ತಮ್ಮ ನಿವೃತ್ತಿ ವಿಷಯವನ್ನು ಅವರು ಸ್ಪಷ್ಟಪಡಿಸಿದ್ದರು. ಸರಣಿಯ ಆರಂಭದಲ್ಲಿಯೇ ತಮಗೆ ಈ ಬಗ್ಗೆ ಸುಳಿವು ಇದ್ದಿರುವುದಾಗಿ ರೋಹಿತ್ ಕೂಡ ತಿಳಿಸಿದರು.

ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಮುಕ್ತಾಯ ಕಂಡ ಬಳಿಕ ಆರ್ ಅಶ್ವಿನ್ ಈ ವಿಷಯ ತಿಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರೋಹಿತ್ ಶರ್ಮಾ, ಮುಂದಿನ ಪಂದ್ಯಗಳಿಗೆ ಅಶ್ವಿನ್ ಭಾರತ ತಂಡದಲ್ಲಿ ಮುಂದುವರೆಯುವುದಿಲ್ಲ, ಅವರು ಡಿಸೆಂಬರ್ 19 ರಂದು ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿಸಿದರು. ” ಕ್ರಿಕೆಟಿನ ಎಲ್ಲಾ ರೀತಿಯ ಫಾರ್ಮೆಟ್ ಗಳಿಂದ ನಿವೃತ್ತಿ ಹೊಂದುತ್ತಿದ್ದೇನೆ. ನನ್ನಲ್ಲಿ ಒಂದಿಷ್ಟು ಕ್ರಿಕೆಟ್ ಉಳಿದಿದೆ ಎಂದು ನನಗೆ ಅನಿಸಿದೆ. ಅದನ್ನು ಬೇಕಾದರೆ ಕ್ಲಬ್ ಮಟ್ಟದ ಕ್ರಿಕೆಟ್ ನಲ್ಲಿ ಪ್ರದರ್ಶಿಸಬಹುದು. ಆದರೆ ಭಾರತದ ರಾಷ್ಟ್ರೀಯ ಪಂದ್ಯಾಟಕ್ಕೆ ಸಂಬಂಧಪಟ್ಟಂತೆ ಇದು ನನ್ನ ಅಂತಿಮ ಪಂದ್ಯ. ನಾನು ಭಾರತ ತಂಡದಲ್ಲಿ ಆಡುವಾಗ ಸಾಕಷ್ಟು ಸಂತೋಷವನ್ನು ಅನುಭವಿಸಿದ್ದೇನೆ. ರೋಹಿತ್ ಹಾಗೂ ಹಲವು ಸಹ ಆಟಗಾರರೊಂದಿಗೆ ಕಳೆದ ರಸನಿಮಿಷಗಳನ್ನು ಯಾವತ್ತೂ ಮರೆಯಲು ಆಗುವುದಿಲ್ಲ” ಎಂದು ಹೇಳಿದರು.

” ಖಂಡಿತವಾಗಿಯೂ ಅನೇಕರಿಗೆ ಧನ್ಯವಾದ ಹೇಳಲೇಬೇಕಾಗಿದೆ. ಆದರೆ ಮೊದಲಿಗೆ ಬಿಸಿಸಿಐ ಹಾಗೂ ಉಳಿದ ಆಟಗಾರರಿಗೆ ಮೊದಲಿಗೆ ಧನ್ಯವಾದ ಅರ್ಪಿಸುತ್ತೇನೆ. ರೋಹಿತ್, ವಿರಾಟ್, ಅಂಜಿಕ್ಯಾ, ಪೂಜಾರ ಇವರೆಲ್ಲಾ ಸ್ಲಿಪ್ ನಲ್ಲಿ ನಿಂತು ನನ್ನ ಕ್ಯಾಚುಗಳನ್ನು ಹಿಡಿದ ಕಾರಣ ನನಗೆ ಇಷ್ಟೊಂದು ವಿಕೆಟ್ ಕಬಳಿಸಲು ಸಾಧ್ಯವಾಯಿತು” ಅಶ್ವಿನ್ ತಮ್ಮ ಕಠಿಣ ಸ್ಪರ್ಧಿಯಾಗಿದ್ದ ಆಸ್ಟ್ರೇಲಿಯನ್ ಆಟಗಾರರಿಗೂ ಇದೇ ಸಂದರ್ಭದಲ್ಲಿ ಧನ್ಯವಾದ ಅರ್ಪಿಸಿದರು. ಮಳೆಯಿಂದ ಡ್ರಾನಲ್ಲಿ ಮುಕ್ತಾಯಗೊಂಡ ಮೂರನೇ ಟೆಸ್ಟ್ ಪಂದ್ಯದ ಸಮಯದಲ್ಲಿ ಡ್ರೆಸ್ಸಿಂಗ್ ರೂಂನಲ್ಲಿ ವಿರಾಟ್ ಕೊಹ್ಲಿಯನ್ನು ಆಲಿಂಗಿಸಿಕೊಂಡು ಧನ್ಯವಾದ ಅರ್ಪಿಸಿದ ಅಶ್ವಿನ್ ಅವರ ಈ ನಡೆ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅವರ ಸುಧೀರ್ಘ ಮಾತುಕತೆಯನ್ನು ನೋಡಿದವರಿಗೆ ಅಶ್ವಿನ್ ನಿವೃತ್ತಿ ಹೊಂದುವ ಬಗ್ಗೆ ಸಂಶಯ ಮೂಡಿತ್ತು. ಅದನ್ನು ನಿಜವಾಗಿದೆ

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search