• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈ ಶ್ರೀರಾಮ್ ಎನ್ನುವುದು ಅಪರಾಧವೇ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್!

Tulunadu News Posted On December 18, 2024
0


0
Shares
  • Share On Facebook
  • Tweet It

ಮಸೀದಿಯ ಆವರಣದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದು ಶಿಕ್ಷಾರ್ಹ ಅಪರಾಧವೇ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಇಬ್ಬರು ವ್ಯಕ್ತಿಗಳು ಮಸೀದಿಯ ಆವರಣಕ್ಕೆ ತೆರಳಿ ಜೈ ಶ್ರೀರಾಮ್ ಎಂದು ಕೂಗಿದ್ದ ವಿಷಯದಲ್ಲಿ ಪ್ರಕರಣ ದಾಖಲಾಗಿ ಇಬ್ಬರನ್ನು ಬಂಧಿಸಲಾಗಿತ್ತು. ಈ ಕೇಸನ್ನು ಮಾನ್ಯ ಉಚ್ಚ ನ್ಯಾಯಾಲಯ ವಜಾಗೊಳಿಸಿತ್ತು.

ಅದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರು ಈ ಬಗ್ಗೆ ” ಅವರು ಒಂದು ಧರ್ಮದ ಘೋಷಣೆಗಳನ್ನು ಕೂಗಿದ್ದಿರಬಹುದು. ಆದರೆ ಅದು ಅಪರಾಧದ ವ್ಯಾಪ್ತಿ ಹೇಗೆ ಬರುತ್ತದೆ?” ಎಂದು ಪ್ರಶ್ನಿಸಿದರು. ಇಬ್ಬರು ನ್ಯಾಯಮೂರ್ತಿಗಳ ಪೀಠದಲ್ಲಿದ್ದ ಇನ್ನೊಬ್ಬರು ನ್ಯಾಯಮೂರ್ತಿಗಳೆಂದರೆ ಜಸ್ಟೀಸ್ ಸಂದೀಪ್ ಮೆಹ್ತಾ.

ಹಿರಿಯ ವಕೀಲ ದೇವದತ್ತ ಕಾಮತ್ ತಮ್ಮ ವಾದ ಮಂಡಿಸುತ್ತಾ, ಬೇರೆ ಮತ ಧರ್ಮದ ಕೇಂದ್ರದಲ್ಲಿ ಆ ಧರ್ಮದಲ್ಲದವರು ತಮ್ಮ ಧರ್ಮದ ಘೋಷಣೆಗಳನ್ನು ಕೂಗುವುದು ಮತೀಯ ವಿಷಯದಲ್ಲಿ ಮನಸ್ತಾಪ ಉಂಟಾಗಿ ಎರಡು ಸಮುದಾಯದ ನಡುವೆ ವೈರತ್ವಕ್ಕೆ ಕಾರಣವಾಗುತ್ತದೆ. ಇದು ಐಪಿಸಿ 153 ಎ ಅಡಿಯಲ್ಲಿ ಬರುತ್ತದೆ” ಎಂದು ಹೇಳಿದರು. ಈ ಬಗ್ಗೆ ಪ್ರಶ್ನೆ ಕೇಳಿದ ನ್ಯಾಯ ಪೀಠ ಈ ಪ್ರಕರಣದಲ್ಲಿ ಏನಾದರೂ ಸಾಕ್ಷ್ಯಗಳು ಇವೆಯಾ ಎಂದದ್ದಕ್ಕೆ ಸಿಸಿಟಿವಿ ಫೂಟೇಜ್ ಇದ್ದು, ಆ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವಕೀಲರು ಮಾಹಿತಿ ನೀಡಿದರು. ನ್ಯಾಯಮೂರ್ತಿಗಳು ಮುಂದುವರೆದು ಆರೋಪಿಗಳು ಮಸೀದಿಯ ಸನಿಹದಲ್ಲಿ ಕಾಣಿಸಿಕೊಂಡರು ಎನ್ನುವುದೇ ಅವರು ಘೋಷಣೆಗಳನ್ನು ಕೂಗಿದ್ದಾರೆ ಎನ್ನುವುದಕ್ಕೆ ಪುರಾವೆಯೇ ಎಂದು ಕೇಳಿದ್ದಕ್ಕೆ ವಕೀಲ ಕಾಮತ್, ಅದು ಸಾಬೀತುಪಡಿಸುವುದು ಪೊಲೀಸರ ಕರ್ತವ್ಯ ಎಂದು ಹೇಳಿದರು.

ದೂರಿನ ಪ್ರಕಾರ ಉತ್ತರ ಕನ್ನಡ ಜಿಲ್ಲೆಯ ಐತೂರು ಗ್ರಾಮದ ಮರ್ದಾಲ ಎನ್ನುವ ಏರಿಯಾದಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸೆಪ್ಟೆಂಬರ್ 2023 ರಂದು , ದೂರುದಾರ ಹಾಗೂ ಇನ್ನೊಬ್ಬ ವ್ಯಕ್ತಿ ಮಸೀದಿಯ ಕಚೇರಿಯಲ್ಲಿ ಕುಳಿತಿದ್ದಾಗ ಬೆಳಿಗ್ಗೆ 10.30 ರ ಸುಮಾರಿಗೆ ಇಬ್ಬರು ವ್ಯಕ್ತಿಗಳು ಮಸೀದಿಯ ಕಂಪೌಂಡ್ ಪ್ರವೇಶಿಸಿ ಮಸೀದಿಯ ಪ್ರವೇಶ ದ್ವಾರದ ಎದುರು ನಿಂತು ಘೋಷಣೆ ಕೂಗಿ ನಂತರ ಬೈಕಿನಲ್ಲಿ ಪರಾರಿಯಾದರು ಎನ್ನುವ ಪ್ರಕರಣ ದಾಖಲಾಗಿತ್ತು. ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸೆಪ್ಟೆಂಬರ್ 25, 2023 ರಂದು ಇಬ್ಬರನ್ನು ಬಂಧಿಸಲಾಗಿತ್ತು

0
Shares
  • Share On Facebook
  • Tweet It




Trending Now
ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
Tulunadu News August 20, 2025
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
Tulunadu News August 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
  • Popular Posts

    • 1
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 2
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • 3
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 4
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search