• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಜಯ ಮಲ್ಯ, ನೀರವ್ ಮೋದಿ ಸೇರಿ 22,280 ಕೋಟಿ ರೂ ಬಾಕಿ ವಸೂಲಿ – ನಿರ್ಮಲಾ

Tulunadu News Posted On December 18, 2024
0


0
Shares
  • Share On Facebook
  • Tweet It

ದೇಶದ ವಿವಿಧ ಬ್ಯಾಂಕುಗಳಿಂದ ಸಾಲ ಪಡೆದು ವಂಚಿಸಿದವರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಲೋಕಸಭೆಯಲ್ಲಿ ದೇಶದ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. ಇಲ್ಲಿಯ ತನಕ ಅಂದಾಜು 22,280 ಕೋಟಿ ರೂಪಾಯಿಗಳನ್ನು ಈಡಿ ವಸೂಲಿ ಮಾಡಿದೆ. ಇದರಲ್ಲಿ ವಿಜಯ ಮಲ್ಯ ಅವರ ಆಸ್ತಿ ಮಾರಿ ಸಂಗ್ರಹಿಸಿದ 14000 ಕೋಟಿ ರೂಪಾಯಿ ಮತ್ತು ನೀರವ್ ಮೋದಿಯ ಜಪ್ತಿ ಆಸ್ತಿ ಮಾರಿ ಸಂಗ್ರಹಿಸಿದ 1,053 ಕೂಡ ಸೇರಿದೆ ಎಂದು ಅವರು ಹೇಳಿದ್ದಾರೆ.

ಲೋಕಸಭೆಯಲ್ಲಿ ಈ ಬಗ್ಗೆ ಒತ್ತಿ ಹೇಳಿದ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಅಪರಾಧಿಗಳಿಂದ ಹಣವನ್ನು ವಸೂಲಿ ಮಾಡುವುದರಲ್ಲಿ ಯಾವುದೇ ರೀತಿಯ ಮುಲಾಜನ್ನು ನಮ್ಮ ಸರಕಾರ ತೋರಿಸುವುದಿಲ್ಲ ಎಂದರು. ಹೀಗೆ ವಸೂಲಿ ಮಾಡಿದ ಹಣವನ್ನು ಅದರ ಮೂಲ ಮಾಲೀಕರಾದ ಸರಕಾರಿ ಸ್ವಾಮ್ಯದ ಬ್ಯಾಂಕುಗಳಿಗೆ ಹಿಂದಿರುಗಿಸಲಾಗುವುದು ಎಂದು ಅವರು ಹೇಳಿದರು.
ಈಡಿ ಮತ್ತು ಬ್ಯಾಂಕುಗಳು ಸೇರಿ ವಿಶೇಷ ನ್ಯಾಯಾಲಯವನ್ನು ರಚಿಸಿದ್ದು, ಮುಂಬೈಯ ಈ ನ್ಯಾಯಾಲಯದಲ್ಲಿ ಮೆಹುಲ್ ಚೋಕ್ಸಿ ಹಾಗೂ ನೀರವ್ ಮೋದಿಯಿಂದ ಸ್ವಾಧೀನಪಡಿಸಿಕೊಂಡ ಆಸ್ತಿಪಾಸ್ತಿಗಳ ಮಾರಾಟದಿಂದ ಸಂಗ್ರಹಿಸಲಾದ ಮೊತ್ತದ ಲೆಕ್ಕಾಚಾರಗಳು ಕೂಡ ನಡೆಯುತ್ತಿವೆ. ಈ ಆರ್ಥಿಕ ಅಪರಾಧಿಗಳು ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 13000 ಕೋಟಿ ರೂಪಾಯಿ ಬಾಕಿ ಇರಿಸಿದ್ದಾರೆ.

ಮುಂಬೈಯಲ್ಲಿರುವ ಈ ವಿಶೇಷ ನ್ಯಾಯಾಲಯ ಚೋಕ್ಸಿಯ 2,566 ಕೋಟಿ ರೂ ಮೌಲ್ಯದ ಆಸ್ತಿಯನ್ನು ಏಲಂ ಮಾಡಲು ಈಗಾಗಲೇ ಸಮ್ಮತಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ವಶಪಡಿಸಿಕೊಳ್ಳಲಾಗಿರುವ ಹಣಕಾಸಿನ ಲೆಕ್ಕಾಚಾರವನ್ನು ನೀಡಿದ್ದಾರೆ.

ವಿಜಯ ಮಲ್ಯ: 14,131.6 ಕೋಟಿ
ನೀರವ್ ಮೋದಿ: 1,052.58 ಕೋಟಿ
ನ್ಯಾಶನಲ್ ಸ್ಪೋಟ್ ಏಕ್ಸಚೆಂಜ್ ಸ್ಕ್ಯಾಮ್: 17.47 ಕೋಟಿ
ಎಸ್ ಆರ್ ಎಸ್: 20.15 ಕೋಟಿ
ರೋಸ್ ವ್ಯಾಲಿ ಗ್ರೂಪ್: 19.40 ಕೋಟಿ
ಸೂರ್ಯ ಫಾರ್ಮಾಸೆಟಿಕಲ್ : 185.13 ಕೋಟಿ
ಹೀರಾ ಗ್ರೂಪ್ : 226 ಕೋಟಿ
ನಾಯ್ಡು ಅಮೃತೇಶ್ ರೆಡ್ಡಿ ಮತ್ತು ಇತರರು: 12.73 ಕೋಟಿ
ಮೆಹುಲ್ ಚೋಕ್ಸಿ ಮತ್ತು ಇತರರು: 2,565.90 ಕೋಟಿ
ನಫೀಸಾ ಓವರ್ ಸೀಸ್ ಮತ್ತು ಇತರರು: 25.38 ಕೋಟಿ

ಈ ಮೇಲಿನ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಹಣ ವಸೂಲಿ ಮಾಡಲಾಗುತ್ತಿದ್ದು, ಅದು ಎಲ್ಲಿ ತಲುಪಬೇಕೋ ಅಲ್ಲಿ ತಲುಪುತ್ತದೆ ಎನ್ನುವ ಅರ್ಥದ ಮಾತುಗಳನ್ನು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search