• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಿಟಿ ರವಿ ಆ “ಶಬ್ದ” ಹೇಳಿದ್ದು ಹೌದಾ!?

Tulunadu News Posted On December 19, 2024


  • Share On Facebook
  • Tweet It

ಕರ್ನಾಟಕದ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಅಂಬೇಡ್ಕರ ಅವರ ಬಗ್ಗೆ ಅಮಿತ್ ಶಾ ನೀಡಿರುವ ಹೇಳಿಕೆಯ ಬಗ್ಗೆ ತೀವ್ರತರವಾದ ಪ್ರತಿಭಟನೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಡುವೆ ನಡೆಯಿತು. ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶಾಸಕ ಸಿ.ಟಿ.ರವಿಯವರಿಗೆ ಕೊಲೆಗಡುಕ ಎಂದು ಹೇಳಿದ್ದಾರೆ ಎನ್ನುವ ಆರೋಪ ಕೇಳಿ ಬಂದರೆ ಸಿ.ಟಿ.ರವಿಯವರು ಹೆಬ್ಬಾಳ್ಕರ್ ಅವರಿಗೆ ಪ್ರೊಸ್ಟಿಟ್ಯೂಟ್ ಎಂದು ಹೇಳಿದ್ದಾರೆ ಎಂಬ ಪ್ರತ್ಯಾರೋಪವೂ ಕೇಳಿಬಂತು. ಈ ವಿಷಯದಲ್ಲಿ ಹೆಬ್ಬಾಳ್ಕರ್ ಅವರು ಸದನದ ಅಧ್ಯಕ್ಷರಿಗೆ ಮತ್ತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು ಎಂಬ ಮಾಹಿತಿ ಲಭ್ಯವಾಯಿತು. ಈ ವಿಷಯದಲ್ಲಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಅಧಿವೇಶನದ ಕಟ್ಟಡದಲ್ಲಿ ಸಿ. ಟಿ. ರವಿಯವರ ಮೇಲೆ ಎಗರಾಡಿ, ಹಲ್ಲೆ ಮಾಡಲು ವಿಫಲ ಪ್ರಯತ್ನಪಟ್ಟ ಘಟನೆಯೂ ನಡೆಯಿತು.

ಇತ್ತ ಗುರುವಾರ ಸಂಸತ್ತಿನ ಹೊರಗೆ ಹೈಡ್ರಾಮ ನಡೆದಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ಭಾರತೀಯ ಜನತಾ ಪಾರ್ಟಿಯ ಸಂಸದರೊಬ್ಬರನ್ನು ಬಲವಾಗಿ ತಳ್ಳಿದ ಕಾರಣ ಅವರು ಓಡಿಶಾದ ಹಿಂದುಳಿದ ಪ್ರದೇಶದ ಸಂಸದ ಪ್ರತಾಪ ಚಂದ್ರ ಸಾರಂಗಿಯವರ ಮೇಲೆ ಬಿದ್ದು, ಸಾರಂಗಿಯವರು ಸ್ಟೇರ್ ನಿಂದ ಕೆಳಗುರುಳಿ ಗಂಭೀರ ಗಾಯಗೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಾರಂಗಿಯವರು ” ನಾನು ಸಂಸತ್ ಎದುರು ನಿಂತಿದ್ದೆ. ಈ ವೇಳೆ ರಾಹುಲ್ ಗಾಂಧಿಯವರು ಸಂಸದರೊಬ್ಬರನ್ನು ತಳ್ಳಿದ್ದಾರೆ. ಆ ಸಂಸದ ನನ್ನ ಮೇಲೆ ಬಿದ್ದ ಕಾರಣ ನಾನು ಉರುಳಿ ಬಿದ್ದೆ ” ಎಂದಿದ್ದಾರೆ. ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಸಾರಂಗಿಯವರಿಗೆ ಅಲ್ಲಿಯೇ ಇದ್ದ ಕರ್ನಾಟಕದ ಭಾಜಪಾ ಸಂಸದ ಡಾ. ಸಿ ಎನ್ ಮಂಜುನಾಥ್ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಈ ವಿಷಯದಲ್ಲಿ ರಾಹುಲ್ ಗಾಂಧಿ ಸಾರಂಗಿಯವರ ಬಳಿ ಬಂದರಾದರಾದರೂ ಅಲ್ಲಿನ ಗಂಭೀರ ಪರಿಸ್ಥಿತಿ ನೋಡಿ ಅವರು ತಕ್ಷಣ ನಿರ್ಗಮಿಸಿದರು. ಈ ಬಗ್ಗೆ ರಾಹುಲ್ ” ತಾವು ಸಂಸತ್ತಿನ ಒಳಗೆ ಹೋಗಲು ಪ್ರಯತ್ನಿಸಿದಾಗ ತಮ್ಮನ್ನು ಬಿಜೆಪಿ ಸಂಸದರು ತಡೆದರು. ಆಗ ತಳ್ಳಾಟ, ನೂಕಾಟ ನಡೆದಿದೆ” ಎಂದು ಹೇಳಿದರು. ಪ್ರತಾಪ್ ಸಾರಂಗಿಯ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿ ” ಹೌದು, ಅದು ನಡೆದಿದೆ. ಪರವಾಗಿಲ್ಲ, ತಳ್ಳುವುದು, ತಳ್ಳಾಟದಿಂದ ಏನೂ ಆಗುವುದಿಲ್ಲ” ಎಂದು ಹೇಳಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ವಿರೋಧಿಸಿ ಇಂಡಿ ಒಕ್ಕೂಟದವರು ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಅದೇ ರೀತಿ ಇನ್ನೊಬ್ಬ ಬಿಜೆಪಿ ಸಂಸದ ಮುಕೇಶ್ ರಾಜಪೂತ್ ಅವರಿಗೂ ಗಾಯಗಳಾಗಿದ್ದು, ಅವರು ಐಸಿಯು ನಲ್ಲಿ ದಾಖಲಾಗಿದ್ದಾರೆ. ಈ ನಡುವೆ ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ಮುಖಂಡ ರಾಹುಲ್ ಗಾಂಧಿ ಸುದ್ದಿಗೋಷ್ಟಿ ನಡೆಸಿದರು. ಅದರಲ್ಲಿ ಖರ್ಗೆಯವರು ತಮಗೆ ಕೂಡ ನೂಕಾಟ, ತಳ್ಳಾಟದಲ್ಲಿ ತೊಂದರೆಯಾಗಿದೆ ಎಂದರೆ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದೆ ಪ್ರಿಯಾಂಕಾ ವಾದ್ರಾ ಖರ್ಗೆಯವರ ಕಾಲಿನ ಮೂಳೆ ಮುರಿದಿರಬಹುದು ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search