• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾನೂನಿನ ಕುಣಿಕೆಯಿಂದ ಸುಲಭವಾಗಿ ಪಾರಾದ ಕಾಗೆ ಬಿರಿಯಾನಿ ದಂಪತಿ!

Tulunadu News Posted On December 24, 2024


  • Share On Facebook
  • Tweet It

ತಮಿಳುನಾಡಿನಲ್ಲಿ ತಿರುವಳ್ಳೂರು ಎನ್ನುವ ಪ್ರದೇಶದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಹೋಟೇಲೊಂದರಲ್ಲಿ ಬಿರಿಯಾನಿ ತಯಾರಿಸಲು ಕಾಗೆಗಳ ಮಾಂಸ ಬಳಸಲಾಗುತ್ತಿತ್ತು ಎಂಬ ಸಂಶಯ ಬಂದ ಕಾರಣ ಅರಣ್ಯಾಧಿಕಾರಿಗಳು ಹೋಟೇಲಿನ ಮೇಲೆ ದಾಳಿ ಮಾಡಿದ್ದಾರೆ. ಆಗ ಅಲ್ಲಿ ಬಿರಿಯಾನಿ ತಯಾರಾಗುತ್ತಿತ್ತು. ಬಿರಿಯಾನಿಗೆ ಏನು ಹಾಕುತ್ತಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ದಾರೆ. ಅಲ್ಲಿ ಒಳಗೆ ನೋಡಿದರೆ ಅರಣ್ಯಾಧಿಕಾರಿಗಳಿಗೆ ಆಶ್ಚರ್ಯವಾಗಿದೆ. ಏಕೆಂದರೆ ಅಲ್ಲಿ ಕೋಳಿಗಳು ಇರಬೇಕಾದ ಜಾಗದಲ್ಲಿ ಕಾಗೆಗಳು ಇದ್ದವು. ತಕ್ಷಣ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.
ಆದರೆ ಕಾನೂನಿನಲ್ಲಿ ಕಾಗೆಗಳನ್ನು ಕೊಂದರೆ ಶಿಕ್ಷೆ ಏನು?
ಏಕೆಂದರೆ 1972 ರ ಅರಣ್ಯ ಇಲಾಖೆ ಸಂರಕ್ಷಣಾ ಕಾಯ್ದೆಯಡಿ ಕಾಗೆಗಳನ್ನು ಕೀಟಗಳೆಂದು ವರ್ಗೀಕರಿಸಲಾಗಿದೆ. ಕೀಟಗಳನ್ನು ಕೊಂದರೆ ಶಿಕ್ಷೆ ಏನು ಎಂದು ಹೇಳಲಾಗಿಲ್ಲ. ಪರಿಣಾಮವಾಗಿ ರಮೇಶ್ ಮತ್ತು ಭೂಚಮ್ಮ ಅವರನ್ನು ಬಂಧಿಸದೇ ದಂಡ ವಿಧಿಸಿ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ಕಾಗೆ ಮಾಂಸ ಸೇವಿಸುವುದರಿಂದ ತಿನ್ನುವವರಿಗೆ ಏನಾದರೂ ಅಪಾಯ ಆಗುತ್ತದೆಯೋ ಇಲ್ವೋ ಬೇರೆ ವಿಷಯ. ಆದರೆ ಇದರಿಂದ ಪರಿಸರದ ಮೇಲೆ ಪ್ರಭಾವ ಬೀಳುವುದಂತೂ ಖಂಡಿತ. ಯಾಕೆಂದರೆ ಪ್ರಕೃತಿಯಲ್ಲಿ ಕಾಗೆಗಳ ಸಂತತಿ ಕಡಿಮೆಯಾಗುತ್ತಾ ಇದೆ. ಹೀಗೆ ಒಂದೊಂದೇ ಪಕ್ಷಿಗಳು ಅಳಿವಿನಂಚಿನತ್ತ ಸಾಗಿದರೆ ಆಗ ಪ್ರಾಕೃತಿಕ ಅಸಮತೋಲನ ಉಂಟಾಗುತ್ತದೆ. ಮಾನವನ ಅವಶ್ಯಕತೆಗಳು ಮತ್ತು ಪರಿಸರ ಸಂರಕ್ಷಣೆಯ ನಡುವಿನ ಸೂಕ್ಷ್ಮತೆಯ ಪ್ರಶ್ನೆಯಾಗಿರುವ ಈ ಪಕ್ಷಿಗಳ ಉಳಿವಿಗಾಗಿ ಅವುಗಳನ್ನು ಕೊಲ್ಲುವುದು ಸರಿಯಲ್ಲ.
ಸದ್ಯ ಆರೋಪಿಗಳ ವಶದಲ್ಲಿದ್ದ 11 ಕಾಗೆಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯ ತನಕ ದನ, ನಾಯಿ ಬಿರಿಯಾನಿಗಳ ನಡುವೆ ಕಾಗೆ ಬಿರಿಯಾನಿಯೂ ಸೇರಿಕೊಂಡು ಆ ಹೋಟೇಲಿನಲ್ಲಿ ಬಿರಿಯಾನಿ ತಿಂದವರ ಪಾಡು ಹೇಗಿದೆಯೋ ದೇವರಿಗೆ ಗೊತ್ತು.
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search