• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾನೂನಿನ ಕುಣಿಕೆಯಿಂದ ಸುಲಭವಾಗಿ ಪಾರಾದ ಕಾಗೆ ಬಿರಿಯಾನಿ ದಂಪತಿ!

Tulunadu News Posted On December 24, 2024
0


0
Shares
  • Share On Facebook
  • Tweet It

ತಮಿಳುನಾಡಿನಲ್ಲಿ ತಿರುವಳ್ಳೂರು ಎನ್ನುವ ಪ್ರದೇಶದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಹೋಟೇಲೊಂದರಲ್ಲಿ ಬಿರಿಯಾನಿ ತಯಾರಿಸಲು ಕಾಗೆಗಳ ಮಾಂಸ ಬಳಸಲಾಗುತ್ತಿತ್ತು ಎಂಬ ಸಂಶಯ ಬಂದ ಕಾರಣ ಅರಣ್ಯಾಧಿಕಾರಿಗಳು ಹೋಟೇಲಿನ ಮೇಲೆ ದಾಳಿ ಮಾಡಿದ್ದಾರೆ. ಆಗ ಅಲ್ಲಿ ಬಿರಿಯಾನಿ ತಯಾರಾಗುತ್ತಿತ್ತು. ಬಿರಿಯಾನಿಗೆ ಏನು ಹಾಕುತ್ತಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ದಾರೆ. ಅಲ್ಲಿ ಒಳಗೆ ನೋಡಿದರೆ ಅರಣ್ಯಾಧಿಕಾರಿಗಳಿಗೆ ಆಶ್ಚರ್ಯವಾಗಿದೆ. ಏಕೆಂದರೆ ಅಲ್ಲಿ ಕೋಳಿಗಳು ಇರಬೇಕಾದ ಜಾಗದಲ್ಲಿ ಕಾಗೆಗಳು ಇದ್ದವು. ತಕ್ಷಣ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.
ಆದರೆ ಕಾನೂನಿನಲ್ಲಿ ಕಾಗೆಗಳನ್ನು ಕೊಂದರೆ ಶಿಕ್ಷೆ ಏನು?
ಏಕೆಂದರೆ 1972 ರ ಅರಣ್ಯ ಇಲಾಖೆ ಸಂರಕ್ಷಣಾ ಕಾಯ್ದೆಯಡಿ ಕಾಗೆಗಳನ್ನು ಕೀಟಗಳೆಂದು ವರ್ಗೀಕರಿಸಲಾಗಿದೆ. ಕೀಟಗಳನ್ನು ಕೊಂದರೆ ಶಿಕ್ಷೆ ಏನು ಎಂದು ಹೇಳಲಾಗಿಲ್ಲ. ಪರಿಣಾಮವಾಗಿ ರಮೇಶ್ ಮತ್ತು ಭೂಚಮ್ಮ ಅವರನ್ನು ಬಂಧಿಸದೇ ದಂಡ ವಿಧಿಸಿ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ಕಾಗೆ ಮಾಂಸ ಸೇವಿಸುವುದರಿಂದ ತಿನ್ನುವವರಿಗೆ ಏನಾದರೂ ಅಪಾಯ ಆಗುತ್ತದೆಯೋ ಇಲ್ವೋ ಬೇರೆ ವಿಷಯ. ಆದರೆ ಇದರಿಂದ ಪರಿಸರದ ಮೇಲೆ ಪ್ರಭಾವ ಬೀಳುವುದಂತೂ ಖಂಡಿತ. ಯಾಕೆಂದರೆ ಪ್ರಕೃತಿಯಲ್ಲಿ ಕಾಗೆಗಳ ಸಂತತಿ ಕಡಿಮೆಯಾಗುತ್ತಾ ಇದೆ. ಹೀಗೆ ಒಂದೊಂದೇ ಪಕ್ಷಿಗಳು ಅಳಿವಿನಂಚಿನತ್ತ ಸಾಗಿದರೆ ಆಗ ಪ್ರಾಕೃತಿಕ ಅಸಮತೋಲನ ಉಂಟಾಗುತ್ತದೆ. ಮಾನವನ ಅವಶ್ಯಕತೆಗಳು ಮತ್ತು ಪರಿಸರ ಸಂರಕ್ಷಣೆಯ ನಡುವಿನ ಸೂಕ್ಷ್ಮತೆಯ ಪ್ರಶ್ನೆಯಾಗಿರುವ ಈ ಪಕ್ಷಿಗಳ ಉಳಿವಿಗಾಗಿ ಅವುಗಳನ್ನು ಕೊಲ್ಲುವುದು ಸರಿಯಲ್ಲ.
ಸದ್ಯ ಆರೋಪಿಗಳ ವಶದಲ್ಲಿದ್ದ 11 ಕಾಗೆಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯ ತನಕ ದನ, ನಾಯಿ ಬಿರಿಯಾನಿಗಳ ನಡುವೆ ಕಾಗೆ ಬಿರಿಯಾನಿಯೂ ಸೇರಿಕೊಂಡು ಆ ಹೋಟೇಲಿನಲ್ಲಿ ಬಿರಿಯಾನಿ ತಿಂದವರ ಪಾಡು ಹೇಗಿದೆಯೋ ದೇವರಿಗೆ ಗೊತ್ತು.
0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search