• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾನೂನಿನ ಕುಣಿಕೆಯಿಂದ ಸುಲಭವಾಗಿ ಪಾರಾದ ಕಾಗೆ ಬಿರಿಯಾನಿ ದಂಪತಿ!

Tulunadu News Posted On December 24, 2024
0


0
Shares
  • Share On Facebook
  • Tweet It

ತಮಿಳುನಾಡಿನಲ್ಲಿ ತಿರುವಳ್ಳೂರು ಎನ್ನುವ ಪ್ರದೇಶದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಹೋಟೇಲೊಂದರಲ್ಲಿ ಬಿರಿಯಾನಿ ತಯಾರಿಸಲು ಕಾಗೆಗಳ ಮಾಂಸ ಬಳಸಲಾಗುತ್ತಿತ್ತು ಎಂಬ ಸಂಶಯ ಬಂದ ಕಾರಣ ಅರಣ್ಯಾಧಿಕಾರಿಗಳು ಹೋಟೇಲಿನ ಮೇಲೆ ದಾಳಿ ಮಾಡಿದ್ದಾರೆ. ಆಗ ಅಲ್ಲಿ ಬಿರಿಯಾನಿ ತಯಾರಾಗುತ್ತಿತ್ತು. ಬಿರಿಯಾನಿಗೆ ಏನು ಹಾಕುತ್ತಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ದಾರೆ. ಅಲ್ಲಿ ಒಳಗೆ ನೋಡಿದರೆ ಅರಣ್ಯಾಧಿಕಾರಿಗಳಿಗೆ ಆಶ್ಚರ್ಯವಾಗಿದೆ. ಏಕೆಂದರೆ ಅಲ್ಲಿ ಕೋಳಿಗಳು ಇರಬೇಕಾದ ಜಾಗದಲ್ಲಿ ಕಾಗೆಗಳು ಇದ್ದವು. ತಕ್ಷಣ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.
ಆದರೆ ಕಾನೂನಿನಲ್ಲಿ ಕಾಗೆಗಳನ್ನು ಕೊಂದರೆ ಶಿಕ್ಷೆ ಏನು?
ಏಕೆಂದರೆ 1972 ರ ಅರಣ್ಯ ಇಲಾಖೆ ಸಂರಕ್ಷಣಾ ಕಾಯ್ದೆಯಡಿ ಕಾಗೆಗಳನ್ನು ಕೀಟಗಳೆಂದು ವರ್ಗೀಕರಿಸಲಾಗಿದೆ. ಕೀಟಗಳನ್ನು ಕೊಂದರೆ ಶಿಕ್ಷೆ ಏನು ಎಂದು ಹೇಳಲಾಗಿಲ್ಲ. ಪರಿಣಾಮವಾಗಿ ರಮೇಶ್ ಮತ್ತು ಭೂಚಮ್ಮ ಅವರನ್ನು ಬಂಧಿಸದೇ ದಂಡ ವಿಧಿಸಿ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ಕಾಗೆ ಮಾಂಸ ಸೇವಿಸುವುದರಿಂದ ತಿನ್ನುವವರಿಗೆ ಏನಾದರೂ ಅಪಾಯ ಆಗುತ್ತದೆಯೋ ಇಲ್ವೋ ಬೇರೆ ವಿಷಯ. ಆದರೆ ಇದರಿಂದ ಪರಿಸರದ ಮೇಲೆ ಪ್ರಭಾವ ಬೀಳುವುದಂತೂ ಖಂಡಿತ. ಯಾಕೆಂದರೆ ಪ್ರಕೃತಿಯಲ್ಲಿ ಕಾಗೆಗಳ ಸಂತತಿ ಕಡಿಮೆಯಾಗುತ್ತಾ ಇದೆ. ಹೀಗೆ ಒಂದೊಂದೇ ಪಕ್ಷಿಗಳು ಅಳಿವಿನಂಚಿನತ್ತ ಸಾಗಿದರೆ ಆಗ ಪ್ರಾಕೃತಿಕ ಅಸಮತೋಲನ ಉಂಟಾಗುತ್ತದೆ. ಮಾನವನ ಅವಶ್ಯಕತೆಗಳು ಮತ್ತು ಪರಿಸರ ಸಂರಕ್ಷಣೆಯ ನಡುವಿನ ಸೂಕ್ಷ್ಮತೆಯ ಪ್ರಶ್ನೆಯಾಗಿರುವ ಈ ಪಕ್ಷಿಗಳ ಉಳಿವಿಗಾಗಿ ಅವುಗಳನ್ನು ಕೊಲ್ಲುವುದು ಸರಿಯಲ್ಲ.
ಸದ್ಯ ಆರೋಪಿಗಳ ವಶದಲ್ಲಿದ್ದ 11 ಕಾಗೆಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯ ತನಕ ದನ, ನಾಯಿ ಬಿರಿಯಾನಿಗಳ ನಡುವೆ ಕಾಗೆ ಬಿರಿಯಾನಿಯೂ ಸೇರಿಕೊಂಡು ಆ ಹೋಟೇಲಿನಲ್ಲಿ ಬಿರಿಯಾನಿ ತಿಂದವರ ಪಾಡು ಹೇಗಿದೆಯೋ ದೇವರಿಗೆ ಗೊತ್ತು.
0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 4
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 5
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!

  • Privacy Policy
  • Contact
© Tulunadu Infomedia.

Press enter/return to begin your search