• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾನೂನಿನ ಕುಣಿಕೆಯಿಂದ ಸುಲಭವಾಗಿ ಪಾರಾದ ಕಾಗೆ ಬಿರಿಯಾನಿ ದಂಪತಿ!

Tulunadu News Posted On December 24, 2024
0


0
Shares
  • Share On Facebook
  • Tweet It

ತಮಿಳುನಾಡಿನಲ್ಲಿ ತಿರುವಳ್ಳೂರು ಎನ್ನುವ ಪ್ರದೇಶದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಹೋಟೇಲೊಂದರಲ್ಲಿ ಬಿರಿಯಾನಿ ತಯಾರಿಸಲು ಕಾಗೆಗಳ ಮಾಂಸ ಬಳಸಲಾಗುತ್ತಿತ್ತು ಎಂಬ ಸಂಶಯ ಬಂದ ಕಾರಣ ಅರಣ್ಯಾಧಿಕಾರಿಗಳು ಹೋಟೇಲಿನ ಮೇಲೆ ದಾಳಿ ಮಾಡಿದ್ದಾರೆ. ಆಗ ಅಲ್ಲಿ ಬಿರಿಯಾನಿ ತಯಾರಾಗುತ್ತಿತ್ತು. ಬಿರಿಯಾನಿಗೆ ಏನು ಹಾಕುತ್ತಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ದಾರೆ. ಅಲ್ಲಿ ಒಳಗೆ ನೋಡಿದರೆ ಅರಣ್ಯಾಧಿಕಾರಿಗಳಿಗೆ ಆಶ್ಚರ್ಯವಾಗಿದೆ. ಏಕೆಂದರೆ ಅಲ್ಲಿ ಕೋಳಿಗಳು ಇರಬೇಕಾದ ಜಾಗದಲ್ಲಿ ಕಾಗೆಗಳು ಇದ್ದವು. ತಕ್ಷಣ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.
ಆದರೆ ಕಾನೂನಿನಲ್ಲಿ ಕಾಗೆಗಳನ್ನು ಕೊಂದರೆ ಶಿಕ್ಷೆ ಏನು?
ಏಕೆಂದರೆ 1972 ರ ಅರಣ್ಯ ಇಲಾಖೆ ಸಂರಕ್ಷಣಾ ಕಾಯ್ದೆಯಡಿ ಕಾಗೆಗಳನ್ನು ಕೀಟಗಳೆಂದು ವರ್ಗೀಕರಿಸಲಾಗಿದೆ. ಕೀಟಗಳನ್ನು ಕೊಂದರೆ ಶಿಕ್ಷೆ ಏನು ಎಂದು ಹೇಳಲಾಗಿಲ್ಲ. ಪರಿಣಾಮವಾಗಿ ರಮೇಶ್ ಮತ್ತು ಭೂಚಮ್ಮ ಅವರನ್ನು ಬಂಧಿಸದೇ ದಂಡ ವಿಧಿಸಿ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ಕಾಗೆ ಮಾಂಸ ಸೇವಿಸುವುದರಿಂದ ತಿನ್ನುವವರಿಗೆ ಏನಾದರೂ ಅಪಾಯ ಆಗುತ್ತದೆಯೋ ಇಲ್ವೋ ಬೇರೆ ವಿಷಯ. ಆದರೆ ಇದರಿಂದ ಪರಿಸರದ ಮೇಲೆ ಪ್ರಭಾವ ಬೀಳುವುದಂತೂ ಖಂಡಿತ. ಯಾಕೆಂದರೆ ಪ್ರಕೃತಿಯಲ್ಲಿ ಕಾಗೆಗಳ ಸಂತತಿ ಕಡಿಮೆಯಾಗುತ್ತಾ ಇದೆ. ಹೀಗೆ ಒಂದೊಂದೇ ಪಕ್ಷಿಗಳು ಅಳಿವಿನಂಚಿನತ್ತ ಸಾಗಿದರೆ ಆಗ ಪ್ರಾಕೃತಿಕ ಅಸಮತೋಲನ ಉಂಟಾಗುತ್ತದೆ. ಮಾನವನ ಅವಶ್ಯಕತೆಗಳು ಮತ್ತು ಪರಿಸರ ಸಂರಕ್ಷಣೆಯ ನಡುವಿನ ಸೂಕ್ಷ್ಮತೆಯ ಪ್ರಶ್ನೆಯಾಗಿರುವ ಈ ಪಕ್ಷಿಗಳ ಉಳಿವಿಗಾಗಿ ಅವುಗಳನ್ನು ಕೊಲ್ಲುವುದು ಸರಿಯಲ್ಲ.
ಸದ್ಯ ಆರೋಪಿಗಳ ವಶದಲ್ಲಿದ್ದ 11 ಕಾಗೆಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯ ತನಕ ದನ, ನಾಯಿ ಬಿರಿಯಾನಿಗಳ ನಡುವೆ ಕಾಗೆ ಬಿರಿಯಾನಿಯೂ ಸೇರಿಕೊಂಡು ಆ ಹೋಟೇಲಿನಲ್ಲಿ ಬಿರಿಯಾನಿ ತಿಂದವರ ಪಾಡು ಹೇಗಿದೆಯೋ ದೇವರಿಗೆ ಗೊತ್ತು.
0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search