• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾನೂನಿನ ಕುಣಿಕೆಯಿಂದ ಸುಲಭವಾಗಿ ಪಾರಾದ ಕಾಗೆ ಬಿರಿಯಾನಿ ದಂಪತಿ!

Tulunadu News Posted On December 24, 2024
0


0
Shares
  • Share On Facebook
  • Tweet It

ತಮಿಳುನಾಡಿನಲ್ಲಿ ತಿರುವಳ್ಳೂರು ಎನ್ನುವ ಪ್ರದೇಶದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಹೋಟೇಲೊಂದರಲ್ಲಿ ಬಿರಿಯಾನಿ ತಯಾರಿಸಲು ಕಾಗೆಗಳ ಮಾಂಸ ಬಳಸಲಾಗುತ್ತಿತ್ತು ಎಂಬ ಸಂಶಯ ಬಂದ ಕಾರಣ ಅರಣ್ಯಾಧಿಕಾರಿಗಳು ಹೋಟೇಲಿನ ಮೇಲೆ ದಾಳಿ ಮಾಡಿದ್ದಾರೆ. ಆಗ ಅಲ್ಲಿ ಬಿರಿಯಾನಿ ತಯಾರಾಗುತ್ತಿತ್ತು. ಬಿರಿಯಾನಿಗೆ ಏನು ಹಾಕುತ್ತಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ದಾರೆ. ಅಲ್ಲಿ ಒಳಗೆ ನೋಡಿದರೆ ಅರಣ್ಯಾಧಿಕಾರಿಗಳಿಗೆ ಆಶ್ಚರ್ಯವಾಗಿದೆ. ಏಕೆಂದರೆ ಅಲ್ಲಿ ಕೋಳಿಗಳು ಇರಬೇಕಾದ ಜಾಗದಲ್ಲಿ ಕಾಗೆಗಳು ಇದ್ದವು. ತಕ್ಷಣ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.
ಆದರೆ ಕಾನೂನಿನಲ್ಲಿ ಕಾಗೆಗಳನ್ನು ಕೊಂದರೆ ಶಿಕ್ಷೆ ಏನು?
ಏಕೆಂದರೆ 1972 ರ ಅರಣ್ಯ ಇಲಾಖೆ ಸಂರಕ್ಷಣಾ ಕಾಯ್ದೆಯಡಿ ಕಾಗೆಗಳನ್ನು ಕೀಟಗಳೆಂದು ವರ್ಗೀಕರಿಸಲಾಗಿದೆ. ಕೀಟಗಳನ್ನು ಕೊಂದರೆ ಶಿಕ್ಷೆ ಏನು ಎಂದು ಹೇಳಲಾಗಿಲ್ಲ. ಪರಿಣಾಮವಾಗಿ ರಮೇಶ್ ಮತ್ತು ಭೂಚಮ್ಮ ಅವರನ್ನು ಬಂಧಿಸದೇ ದಂಡ ವಿಧಿಸಿ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ಕಾಗೆ ಮಾಂಸ ಸೇವಿಸುವುದರಿಂದ ತಿನ್ನುವವರಿಗೆ ಏನಾದರೂ ಅಪಾಯ ಆಗುತ್ತದೆಯೋ ಇಲ್ವೋ ಬೇರೆ ವಿಷಯ. ಆದರೆ ಇದರಿಂದ ಪರಿಸರದ ಮೇಲೆ ಪ್ರಭಾವ ಬೀಳುವುದಂತೂ ಖಂಡಿತ. ಯಾಕೆಂದರೆ ಪ್ರಕೃತಿಯಲ್ಲಿ ಕಾಗೆಗಳ ಸಂತತಿ ಕಡಿಮೆಯಾಗುತ್ತಾ ಇದೆ. ಹೀಗೆ ಒಂದೊಂದೇ ಪಕ್ಷಿಗಳು ಅಳಿವಿನಂಚಿನತ್ತ ಸಾಗಿದರೆ ಆಗ ಪ್ರಾಕೃತಿಕ ಅಸಮತೋಲನ ಉಂಟಾಗುತ್ತದೆ. ಮಾನವನ ಅವಶ್ಯಕತೆಗಳು ಮತ್ತು ಪರಿಸರ ಸಂರಕ್ಷಣೆಯ ನಡುವಿನ ಸೂಕ್ಷ್ಮತೆಯ ಪ್ರಶ್ನೆಯಾಗಿರುವ ಈ ಪಕ್ಷಿಗಳ ಉಳಿವಿಗಾಗಿ ಅವುಗಳನ್ನು ಕೊಲ್ಲುವುದು ಸರಿಯಲ್ಲ.
ಸದ್ಯ ಆರೋಪಿಗಳ ವಶದಲ್ಲಿದ್ದ 11 ಕಾಗೆಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯ ತನಕ ದನ, ನಾಯಿ ಬಿರಿಯಾನಿಗಳ ನಡುವೆ ಕಾಗೆ ಬಿರಿಯಾನಿಯೂ ಸೇರಿಕೊಂಡು ಆ ಹೋಟೇಲಿನಲ್ಲಿ ಬಿರಿಯಾನಿ ತಿಂದವರ ಪಾಡು ಹೇಗಿದೆಯೋ ದೇವರಿಗೆ ಗೊತ್ತು.
0
Shares
  • Share On Facebook
  • Tweet It




Trending Now
ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
Tulunadu News June 30, 2025
ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
Tulunadu News June 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
    • ಬೊಮ್ಮಾಯಿ 40% ಲಂಚದ ಆರೋಪ ಬಂದಾಗ ಸುಮ್ಮನೆ ಕುಳಿತು ತಪ್ಪು ಮಾಡಿದ್ರು - ಮೋಹನದಾಸ್ ಪೈ
    • ನಿಜವಾಯ್ತು ದೈವದ ನುಡಿ: 36 ವರ್ಷಗಳ ಬಳಿಕ ತಾಯಿಯ ಮಡಿಲು ಸೇರಿದ ಹಿರಿಮಗ
  • Popular Posts

    • 1
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 2
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 3
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • 4
      ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • 5
      PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...

  • Privacy Policy
  • Contact
© Tulunadu Infomedia.

Press enter/return to begin your search