• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾನೂನಿನ ಕುಣಿಕೆಯಿಂದ ಸುಲಭವಾಗಿ ಪಾರಾದ ಕಾಗೆ ಬಿರಿಯಾನಿ ದಂಪತಿ!

Tulunadu News Posted On December 24, 2024
0


0
Shares
  • Share On Facebook
  • Tweet It

ತಮಿಳುನಾಡಿನಲ್ಲಿ ತಿರುವಳ್ಳೂರು ಎನ್ನುವ ಪ್ರದೇಶದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಹೋಟೇಲೊಂದರಲ್ಲಿ ಬಿರಿಯಾನಿ ತಯಾರಿಸಲು ಕಾಗೆಗಳ ಮಾಂಸ ಬಳಸಲಾಗುತ್ತಿತ್ತು ಎಂಬ ಸಂಶಯ ಬಂದ ಕಾರಣ ಅರಣ್ಯಾಧಿಕಾರಿಗಳು ಹೋಟೇಲಿನ ಮೇಲೆ ದಾಳಿ ಮಾಡಿದ್ದಾರೆ. ಆಗ ಅಲ್ಲಿ ಬಿರಿಯಾನಿ ತಯಾರಾಗುತ್ತಿತ್ತು. ಬಿರಿಯಾನಿಗೆ ಏನು ಹಾಕುತ್ತಿದ್ದೀರಿ ಎಂದು ಅಧಿಕಾರಿಗಳು ಕೇಳಿದ್ದಾರೆ. ಅಲ್ಲಿ ಒಳಗೆ ನೋಡಿದರೆ ಅರಣ್ಯಾಧಿಕಾರಿಗಳಿಗೆ ಆಶ್ಚರ್ಯವಾಗಿದೆ. ಏಕೆಂದರೆ ಅಲ್ಲಿ ಕೋಳಿಗಳು ಇರಬೇಕಾದ ಜಾಗದಲ್ಲಿ ಕಾಗೆಗಳು ಇದ್ದವು. ತಕ್ಷಣ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ.
ಆದರೆ ಕಾನೂನಿನಲ್ಲಿ ಕಾಗೆಗಳನ್ನು ಕೊಂದರೆ ಶಿಕ್ಷೆ ಏನು?
ಏಕೆಂದರೆ 1972 ರ ಅರಣ್ಯ ಇಲಾಖೆ ಸಂರಕ್ಷಣಾ ಕಾಯ್ದೆಯಡಿ ಕಾಗೆಗಳನ್ನು ಕೀಟಗಳೆಂದು ವರ್ಗೀಕರಿಸಲಾಗಿದೆ. ಕೀಟಗಳನ್ನು ಕೊಂದರೆ ಶಿಕ್ಷೆ ಏನು ಎಂದು ಹೇಳಲಾಗಿಲ್ಲ. ಪರಿಣಾಮವಾಗಿ ರಮೇಶ್ ಮತ್ತು ಭೂಚಮ್ಮ ಅವರನ್ನು ಬಂಧಿಸದೇ ದಂಡ ವಿಧಿಸಿ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿದೆ.
ಕಾಗೆ ಮಾಂಸ ಸೇವಿಸುವುದರಿಂದ ತಿನ್ನುವವರಿಗೆ ಏನಾದರೂ ಅಪಾಯ ಆಗುತ್ತದೆಯೋ ಇಲ್ವೋ ಬೇರೆ ವಿಷಯ. ಆದರೆ ಇದರಿಂದ ಪರಿಸರದ ಮೇಲೆ ಪ್ರಭಾವ ಬೀಳುವುದಂತೂ ಖಂಡಿತ. ಯಾಕೆಂದರೆ ಪ್ರಕೃತಿಯಲ್ಲಿ ಕಾಗೆಗಳ ಸಂತತಿ ಕಡಿಮೆಯಾಗುತ್ತಾ ಇದೆ. ಹೀಗೆ ಒಂದೊಂದೇ ಪಕ್ಷಿಗಳು ಅಳಿವಿನಂಚಿನತ್ತ ಸಾಗಿದರೆ ಆಗ ಪ್ರಾಕೃತಿಕ ಅಸಮತೋಲನ ಉಂಟಾಗುತ್ತದೆ. ಮಾನವನ ಅವಶ್ಯಕತೆಗಳು ಮತ್ತು ಪರಿಸರ ಸಂರಕ್ಷಣೆಯ ನಡುವಿನ ಸೂಕ್ಷ್ಮತೆಯ ಪ್ರಶ್ನೆಯಾಗಿರುವ ಈ ಪಕ್ಷಿಗಳ ಉಳಿವಿಗಾಗಿ ಅವುಗಳನ್ನು ಕೊಲ್ಲುವುದು ಸರಿಯಲ್ಲ.
ಸದ್ಯ ಆರೋಪಿಗಳ ವಶದಲ್ಲಿದ್ದ 11 ಕಾಗೆಗಳನ್ನು ಬಿಡುಗಡೆ ಮಾಡಲಾಗಿದೆ. ಇಲ್ಲಿಯ ತನಕ ದನ, ನಾಯಿ ಬಿರಿಯಾನಿಗಳ ನಡುವೆ ಕಾಗೆ ಬಿರಿಯಾನಿಯೂ ಸೇರಿಕೊಂಡು ಆ ಹೋಟೇಲಿನಲ್ಲಿ ಬಿರಿಯಾನಿ ತಿಂದವರ ಪಾಡು ಹೇಗಿದೆಯೋ ದೇವರಿಗೆ ಗೊತ್ತು.
0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search