• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಜಿ ಕಾನ್ಸಟೇಬಲ್ ಮನೆ ಮೇಲೆ ದಾಳಿ: ಎಂಟು ಕೋಟಿ ಮೌಲ್ಯದ ವಸ್ತು ವಶ!

Tulunadu News Posted On December 24, 2024
0


0
Shares
  • Share On Facebook
  • Tweet It

ಪ್ರಾದೇಶಿಕ ಸಾರಿಗೆ ಇಲಾಖೆ ( ಆರ್ ಟಿಒ) ಇದರ ಮಾಜಿ ಕಾನ್ಸಟೇಬಲ್ ಮನೆ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳಿಗೆ ಅಲ್ಲಿ ಅಗೆದಷ್ಟು ನಗದು ಸಿಕ್ಕಿದ್ದು ನೋಡಿ ಶಾಕ್ ಆಗಿದೆ. ಆರೋಪಿಯ ಮನೆ, ಸಂಬಂಧಿಕರ ಮನೆ, ಆಪ್ತರ ನಿವಾಸಗಳಲ್ಲಿ ಸೇರಿ ಮೂರು ಕೋಟಿ ರೂಪಾಯಿ ನಗದು ಹಣ ಮತ್ತು ಅಂದಾಜು ಐದು ಕೋಟಿ ಮೌಲ್ಯದ ಚಿನ್ನಾಭರಣ ಮತ್ತು ಆಸ್ತಿಪತ್ರಗಳು ದೊರಕಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿ ಮಾಜಿ ಆರ್ ಟಿಒ ಕಾನ್ಸಟೇಬಲ್. ಹೆಸರು ಸೌರವ್ ಶುಕ್ಲಾ. ಈತ ಮಧ್ಯಪ್ರದೇಶದವನು. ಮಾಹಿತಿಯ ಪ್ರಕಾರ ಇವನ ಬಳಿಯಿಂದ ಎರಡು ಡೈರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಒಂದು ಡೈರಿ ಕೆಂಪು ಬಣ್ಣದಾಗಿದ್ದು, ಇನ್ನೊಂದು ನೀಲಿ ಬಣ್ಣದ ಕವರ್ ಹೊಂದಿದೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಪ್ರಭಾವಿ ವ್ಯಕ್ತಿಗಳ ಹೆಸರು ಉಲ್ಲೇಖವಿರುವ ಶಂಕೆ ಇದ್ದು, ಇವನಿಂದ ಉಪಕೃತರಾದವರ ಪಟ್ಟಿ ಅದರಲ್ಲಿ ಇರುವ ಅನುಮಾನ ಲೋಕಾಯುಕ್ತರದ್ದು. ಒಂದು ವೇಳೆ ಅದು ನಿಜವಾಗಿದ್ದರೆ, ಇನ್ನಷ್ಟು ಪ್ರಭಾವಿಗಳ ಹೆಸರು ಇಲ್ಲಿ ಬಹಿರಂಗಗೊಳ್ಳಲಿದೆ.

ಶರ್ಮನಿಗೆ ಇವನ ತಂದೆ 2015 ರಲ್ಲಿ ಸೇವೆಯಲ್ಲಿ ಇರುವಾಗಲೇ ಮೃತಪಟ್ಟ ಕಾರಣ ಅನುಕಂಪದ ಆಧಾರದ ಮೇಲೆ ಉದ್ಯೋಗವನ್ನು ನೀಡಲಾಗಿತ್ತು. ಇವನ ತಂದೆ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಸೇವೆಯಲ್ಲಿದ್ದರೂ ಇವನಿಗೆ ಸಾರಿಗೆ ಇಲಾಖೆಯಲ್ಲಿ ಕಾನ್ಸಟೇಬಲ್ ಹುದ್ದೆಗೆ ನೇಮಕ ಮಾಡಲಾಗಿತ್ತು. ಇವನು ಸರಕಾರಿ ಹುದ್ದೆಯಿಂದ 2023 ರಲ್ಲಿ ಸ್ವಯಂ ಪ್ರೇರಿತನಾಗಿ ನಿವೃತ್ತಿ ತೆಗೆದುಕೊಂಡಿದ್ದ. ಇವನು ಭ್ರಷ್ಟಾಚಾರದ ಮೂಲಗಳಿಂದ ಸಂಗ್ರಹಿಸಿದ ಹಣವನ್ನು ತನ್ನ ತಾಯಿ, ಹೆಂಡತಿ, ನಾದಿನಿ ಮತ್ತು ಆಪ್ತರಾದ ಚೇತನ್ ಸಿಂಗ್ ಗೌಡ್ ಹಾಗೂ ಶರದ್ ಜೈಸವಾಲ್ ಎಂಬುವವರ ಹೆಸರಿನಲ್ಲಿಯೂ ಸಾಕಷ್ಟು ಆಸ್ತಿಪಾಸ್ತಿ ಮಾಡಿಟ್ಟಿದ್ದಾನೆ,

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search