• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!

Tulunadu News Posted On December 25, 2024
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮೂಳೆ ದಾನ ನಡೆದಿದೆ. ಮಡಿಕೇರಿಯ ಸೋಮವಾರಪೇಟೆಯ ಜಾಮಬೂರ್ ಗ್ರಾಮದ ಈಶ್ವರ ಎನ್ ಅವರು ಡಿಸೆಂಬರ್ 22 ರಂದು ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಪೆಟ್ಟು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಅವರನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ನಿಧನದ ನಂತರ ಅವರ ಸಹೋದರಿ ಮತ್ತು ಕುಟುಂಬಸ್ಥರ ಒಪ್ಪಿಗೆ ಪಡೆದು ಮೂಳೆ ದಾನ ಶಸ್ತ್ರಚಿಕಿತ್ಸೆ ನಡೆಸಲಾಯಿತು. 32 ವರ್ಷದ ಈಶ್ವರ್ ಅವರು ನಿಧನ ಅಪಘಾತದಿಂದ ಆಗಿದ್ದ ಕಾರಣ ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿ ಮೂಳೆ ದಾನ ಪ್ರಕ್ರಿಯೆ ನಡೆಸಲಾಗಿತ್ತು. ಇಲ್ಲಿಯವರೆಗೆ ನೇತ್ರದಾನ, ಲಿವರ್, ಕಿಡ್ನಿ ಸಹಿತ ಬೇರೆ ಬೇರೆ ಅಂಗಾಗಗಳ ದಾನ ಪ್ರಕ್ರಿಯೆ ನಡೆದಿದೆ. ಆದರೆ ಕರ್ನಾಟಕದಲ್ಲಿ ಮೂಳೆ ದಾನ ಪ್ರಕ್ರಿಯೆ ನಡೆದಿರುವುದು ಇದೇ ಮೊದಲು.

ಆಸ್ಪತ್ರೆಯ ವೈದ್ಯರಾದ ಡಾ. ವರುಣ್ ಶೆಟ್ಟಿಯವರು ಮಾಹಿತಿ ನೀಡಿ ಈ ಮೂಳೆ ದಾನದಿಂದ ಸಂಗ್ರಹಿಸಲಾಗುವ ಅಂಶಗಳು ಭವಿಷ್ಯದಲ್ಲಿ ಕ್ಯಾನ್ಸರ್ ಪೀಡಿತರಾಗಿರುವ ಆರು ಮಕ್ಕಳ ವೈದ್ಯಕೀಯ ಚಿಕಿತ್ಸೆಯ ಅವಧಿಯಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇದು ನಮ್ಮ ರಾಜ್ಯದ ಮಟ್ಟಿಗೆ ಮೊದಲ ಮೂಳೆ ದಾನವಾಗಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಉಂಟು ಮಾಡುವ ಅಗತ್ಯವೂ ಇದೆ. ಮೆಡಿಕಲ್ ಸೂಪರಿಟೆಂಡೆಂಟ್ ಡಾ. ಸುಮಲತಾ ಶೆಟ್ಟಿಯವರು ಮಾತನಾಡಿ ಈಶ್ವರ್ ಅವರ ಪರಿವಾರದವರಿಗೆ ಕೃತಜ್ಞತೆ ಸಲ್ಲಿಸಿ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡಕ್ಕೂ ಅಭಿನಂದನೆ ತಿಳಿಸಿದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search