• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!

Tulunadu News Posted On December 25, 2024
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮೂಳೆ ದಾನ ನಡೆದಿದೆ. ಮಡಿಕೇರಿಯ ಸೋಮವಾರಪೇಟೆಯ ಜಾಮಬೂರ್ ಗ್ರಾಮದ ಈಶ್ವರ ಎನ್ ಅವರು ಡಿಸೆಂಬರ್ 22 ರಂದು ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಪೆಟ್ಟು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಅವರನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ನಿಧನದ ನಂತರ ಅವರ ಸಹೋದರಿ ಮತ್ತು ಕುಟುಂಬಸ್ಥರ ಒಪ್ಪಿಗೆ ಪಡೆದು ಮೂಳೆ ದಾನ ಶಸ್ತ್ರಚಿಕಿತ್ಸೆ ನಡೆಸಲಾಯಿತು. 32 ವರ್ಷದ ಈಶ್ವರ್ ಅವರು ನಿಧನ ಅಪಘಾತದಿಂದ ಆಗಿದ್ದ ಕಾರಣ ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿ ಮೂಳೆ ದಾನ ಪ್ರಕ್ರಿಯೆ ನಡೆಸಲಾಗಿತ್ತು. ಇಲ್ಲಿಯವರೆಗೆ ನೇತ್ರದಾನ, ಲಿವರ್, ಕಿಡ್ನಿ ಸಹಿತ ಬೇರೆ ಬೇರೆ ಅಂಗಾಗಗಳ ದಾನ ಪ್ರಕ್ರಿಯೆ ನಡೆದಿದೆ. ಆದರೆ ಕರ್ನಾಟಕದಲ್ಲಿ ಮೂಳೆ ದಾನ ಪ್ರಕ್ರಿಯೆ ನಡೆದಿರುವುದು ಇದೇ ಮೊದಲು.

ಆಸ್ಪತ್ರೆಯ ವೈದ್ಯರಾದ ಡಾ. ವರುಣ್ ಶೆಟ್ಟಿಯವರು ಮಾಹಿತಿ ನೀಡಿ ಈ ಮೂಳೆ ದಾನದಿಂದ ಸಂಗ್ರಹಿಸಲಾಗುವ ಅಂಶಗಳು ಭವಿಷ್ಯದಲ್ಲಿ ಕ್ಯಾನ್ಸರ್ ಪೀಡಿತರಾಗಿರುವ ಆರು ಮಕ್ಕಳ ವೈದ್ಯಕೀಯ ಚಿಕಿತ್ಸೆಯ ಅವಧಿಯಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇದು ನಮ್ಮ ರಾಜ್ಯದ ಮಟ್ಟಿಗೆ ಮೊದಲ ಮೂಳೆ ದಾನವಾಗಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಉಂಟು ಮಾಡುವ ಅಗತ್ಯವೂ ಇದೆ. ಮೆಡಿಕಲ್ ಸೂಪರಿಟೆಂಡೆಂಟ್ ಡಾ. ಸುಮಲತಾ ಶೆಟ್ಟಿಯವರು ಮಾತನಾಡಿ ಈಶ್ವರ್ ಅವರ ಪರಿವಾರದವರಿಗೆ ಕೃತಜ್ಞತೆ ಸಲ್ಲಿಸಿ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡಕ್ಕೂ ಅಭಿನಂದನೆ ತಿಳಿಸಿದರು.

0
Shares
  • Share On Facebook
  • Tweet It




Trending Now
'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
Tulunadu News February 11, 2026
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
  • Popular Posts

    • 1
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 2
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 3
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search