• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!

Tulunadu News Posted On December 25, 2024
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮೂಳೆ ದಾನ ನಡೆದಿದೆ. ಮಡಿಕೇರಿಯ ಸೋಮವಾರಪೇಟೆಯ ಜಾಮಬೂರ್ ಗ್ರಾಮದ ಈಶ್ವರ ಎನ್ ಅವರು ಡಿಸೆಂಬರ್ 22 ರಂದು ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಪೆಟ್ಟು ಬಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಅವರನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ನಿಧನದ ನಂತರ ಅವರ ಸಹೋದರಿ ಮತ್ತು ಕುಟುಂಬಸ್ಥರ ಒಪ್ಪಿಗೆ ಪಡೆದು ಮೂಳೆ ದಾನ ಶಸ್ತ್ರಚಿಕಿತ್ಸೆ ನಡೆಸಲಾಯಿತು. 32 ವರ್ಷದ ಈಶ್ವರ್ ಅವರು ನಿಧನ ಅಪಘಾತದಿಂದ ಆಗಿದ್ದ ಕಾರಣ ಈ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿ ಮೂಳೆ ದಾನ ಪ್ರಕ್ರಿಯೆ ನಡೆಸಲಾಗಿತ್ತು. ಇಲ್ಲಿಯವರೆಗೆ ನೇತ್ರದಾನ, ಲಿವರ್, ಕಿಡ್ನಿ ಸಹಿತ ಬೇರೆ ಬೇರೆ ಅಂಗಾಗಗಳ ದಾನ ಪ್ರಕ್ರಿಯೆ ನಡೆದಿದೆ. ಆದರೆ ಕರ್ನಾಟಕದಲ್ಲಿ ಮೂಳೆ ದಾನ ಪ್ರಕ್ರಿಯೆ ನಡೆದಿರುವುದು ಇದೇ ಮೊದಲು.

ಆಸ್ಪತ್ರೆಯ ವೈದ್ಯರಾದ ಡಾ. ವರುಣ್ ಶೆಟ್ಟಿಯವರು ಮಾಹಿತಿ ನೀಡಿ ಈ ಮೂಳೆ ದಾನದಿಂದ ಸಂಗ್ರಹಿಸಲಾಗುವ ಅಂಶಗಳು ಭವಿಷ್ಯದಲ್ಲಿ ಕ್ಯಾನ್ಸರ್ ಪೀಡಿತರಾಗಿರುವ ಆರು ಮಕ್ಕಳ ವೈದ್ಯಕೀಯ ಚಿಕಿತ್ಸೆಯ ಅವಧಿಯಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇದು ನಮ್ಮ ರಾಜ್ಯದ ಮಟ್ಟಿಗೆ ಮೊದಲ ಮೂಳೆ ದಾನವಾಗಿದ್ದು, ಈ ಬಗ್ಗೆ ಜನರಲ್ಲಿ ಜಾಗೃತಿ ಉಂಟು ಮಾಡುವ ಅಗತ್ಯವೂ ಇದೆ. ಮೆಡಿಕಲ್ ಸೂಪರಿಟೆಂಡೆಂಟ್ ಡಾ. ಸುಮಲತಾ ಶೆಟ್ಟಿಯವರು ಮಾತನಾಡಿ ಈಶ್ವರ್ ಅವರ ಪರಿವಾರದವರಿಗೆ ಕೃತಜ್ಞತೆ ಸಲ್ಲಿಸಿ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡಕ್ಕೂ ಅಭಿನಂದನೆ ತಿಳಿಸಿದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search