• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೆಆರ್ ಎಸ್ ರಸ್ತೆಗೆ ಸಿದ್ಧರಾಮಯ್ಯ ಹೆಸರು ಇಡಲು ಚಿಂತನೆ, ಪರ -ವಿರೋಧ!

Tulunadu News Posted On December 25, 2024


  • Share On Facebook
  • Tweet It

ಮೈಸೂರು ನಗರದ ಕೆ. ಆರ್. ರಸ್ತೆಯ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನ ವೃತ್ತದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್ ವರೆಗೆ ” ಸಿದ್ಧರಾಮಯ್ಯ ಆರೋಗ್ಯ ಮಾರ್ಗ” ಎಂದು ನಾಮಕರಣ ಮಾಡಲು ನವೆಂಬರ್ 22, 2024 ರಂದು ನಡೆದ ಮೈಸೂರು ನಗರ ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ತೀರ್ಮಾನವಾಗಿತ್ತು. ಈ ಸಂಬಂಧ ಯಾವುದೇ ಆಕ್ಷೇಪಣೆ ಮತ್ತು ಸಲಹೆಗಳಿದ್ದರೆ ಮೈಸೂರು ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರವರ ಕಚೇರಿಗೆ 30 ದಿನಗಳೊಳಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 13 ರಂದು ನಗರಪಾಲಿಕೆ ಸಾರ್ವಜನಿಕ ಪ್ರಕಟನೆಯನ್ನು ದಿನಪತ್ರಿಕೆಗಳಲ್ಲಿ ಹೊರಡಿಸಿತ್ತು.

ಕೆ ಆರ್ ಎಸ್ ರಸ್ತೆಗೆ ನಾಮಕರಣ ಮಾಡಲು ಪರಿಸರ ಸಂರಕ್ಷಣಾ ಸಮಿತಿ ಅಧ್ಯಕ್ಷೆ ಭಾನು ಮೋಹನ್ ವಿರೋಧ ವ್ಯಕ್ತಪಡಿಸಿದ್ದು, ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಹಲವು ಸೆಕ್ಷನ್ ನಡಿ ಭ್ರಷ್ಟಾಚಾರದ ದೂರು ದಾಖಲಾಗಿದೆ. ಅದ್ದರಿಂದ ಈ ಹಂತದಲ್ಲಿ ಅವರ ಹೆಸರನ್ನು ರಸ್ತೆಗೆ ಇಡುವುದು ಸೂಕ್ತವಲ್ಲ ಎಂದು ತಿಳಿಸಿದ್ದಾರೆ. ಗಂಭೀರ ಆರೋಪ ಹೊತ್ತಿರುವ ವ್ಯಕ್ತಿಯ ಹೆಸರನ್ನು ರಸ್ತೆಗೆ ಇಡುವ ಮೂಲಕ ಸಮಾಜಕ್ಕೆ ಕೆಟ್ಟ ಸಂದೇಶ ನೀಡುವುದು ಸರಿಯಾ ಎನ್ನುವುದು ಅವರ ಪ್ರಶ್ನೆ.

ಸಿದ್ಧರಾಮಯ್ಯ ವಿರುದ್ಧದ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ವಿಚಾರಣೆ ಮುಗಿದು ನ್ಯಾಯಾಲಯದ ತೀರ್ಪು ಬರುವವರೆಗೆ ಸಿದ್ಧರಾಮಯ್ಯನವರ ಹೆಸರು ರಸ್ತೆಗೆ ಇಡಬಾರದು ಎಂದು ಮನವಿ ಮಾಡಿದ್ದಾರೆ. ನ್ಯಾಯಾಲಯದ ತೀರ್ಪಿನ ಬಳಿಕ ಸಿದ್ಧರಾಮಯ್ಯ ದೋಷಮುಕ್ತರಾದರೆ ಆಗ ಅವರ ಹೆಸರು ಇಡಬೇಕೋ, ಬೇಡವೋ ಎಂದು ತೀರ್ಮಾನವಾಗಲಿ ಎಂದು ಅವರು ಆಗ್ರಹಿಸಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಮುಖಂಡರು ಈ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧರಾಮಯ್ಯನವರ ಹೆಸರು ಇಡುವ ಪ್ರಕ್ರಿಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರೆ, ಮಾಜಿ ಸಂಸದ ಪ್ರತಾಪ್ ಸಿಂಹ ಈ ವಿಷಯದಲ್ಲಿ ವಿರೋಧಿಸುವ ಸಣ್ಣತನ ಬೇಡಾ ಎಂದಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search