• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾವಿಬ್ಬರು, ನಮಗಿಬ್ಬರು ಘೋಷವಾಕ್ಯ ನೀಡಿದ್ದು ಇಂದಿರಾ – ಜೈನ ಮುನಿ ವಿನಮ್ರ ಸಾಗರ್

Tulunadu News Posted On December 28, 2024
0


0
Shares
  • Share On Facebook
  • Tweet It

ಹಿಂದೂಗಳ ಜನಸಂಖ್ಯೆಯ ವಿಷಯದಲ್ಲಿ ಜೈನ ಸಂತ ವಿನಮ್ರ ಸಾಗರ ಮಹಾರಾಜರು ನೀಡಿರುವ ಹೇಳಿಕೆ ಹಿಂದೂಗಳ ಕುಸಿಯುತ್ತಿರುವ ಜನಸಂಖ್ಯೆಯ ವಿಷಯದಲ್ಲಿ ಮತ್ತೆ ಕಳವಳಕ್ಕೆ ಕಾರಣವಾಗಿದೆ. ಅವರು ಮಧ್ಯಪ್ರದೇಶದ ಇಂದೋರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡುತ್ತಾ, ನಾವಿಬ್ಬರು ನಮಗಿಬ್ಬರು ಎನ್ನುವ ಘೋಷವಾಕ್ಯವನ್ನು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ಪ್ರಚಾರ ಮಾಡಿದ್ದರು. ಆ ಶಬ್ದಗಳನ್ನು ಹಿಂದೂಗಳು ಚಾಚೂ ತಪ್ಪದೆ ಪಾಲಿಸಲು ಮುಂದಾದರು. ಆದರೆ ಅದರಿಂದ ಹಿಂದೂಗಳ ಜನಸಂಖ್ಯೆ ಮಾತ್ರ ಕಡಿಮೆ ಆಗುತ್ತಾ ಬಂದಿದೆ ಎಂದು ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಹಿಂದೂಗಳ ಜನಸಂಖ್ಯೆ ಇಳಿಮುಖವಾಗಲು ನಾವಿಬ್ಬರು ನಮಗಿಬ್ಬರು ಎಂಬ ಘೋಷಣೆ ದೊಡ್ಡ ರೀತಿಯಲ್ಲಿ ಕೆಲಸ ಮಾಡಿದೆ ಎಂದು ಹೇಳಿದ ಶ್ರೀಗಳು, ಇನ್ನೊಂದು ಕಡೆ ದೇಶದಲ್ಲಿರುವ ಆದಿವಾಸಿಗಳನ್ನು ಮತಾಂತರ ಮಾಡುವ ಪ್ರಕ್ರಿಯೆಯೂ ಜಾರಿಯಲ್ಲಿರುವುದು ಕೂಡ ಎಚ್ಚರಿಕೆಯ ಗಂಟೆ ಎಂದು ಹೇಳಿದ್ದಾರೆ.

ಮುಸಲೀಯರಿಗೆ 50 ದೇಶಗಳು, ಕ್ರೈಸ್ತರಿಗೆ 100 ಹಾಗೂ ಹಿಂದೂಗಳಿಗೆ ಇರುವುದು ಭಾರತ ಮಾತ್ರ. ಡಿಸೆಂಬರ್ 25 ರಂದು ಈ ದೇಶದಲ್ಲಿಯೂ ಕ್ರಿಸ್ ಮಸ್ ಬಹಳ ದೊಡ್ಡ ರೀತಿಯಲ್ಲಿ ಆಚರಿಸಲಾಗುವುದರ ಔತಿಥ್ಯವೇನು ಎಂದು ಅವರು ಪ್ರಶ್ನಿಸಿದ್ದಾರೆ. ಕ್ರಿಸ್ಮಸ್ ಅನ್ನು ಹಿಂದೂಗಳಲ್ಲಿ ಹಲವರು ಆಚರಿಸುವ ಮೂಲಕ ಸೌಹಾರ್ದತೆಯನ್ನು ಸಾರುವ ಯತ್ನ ಮಾಡುತ್ತಿದ್ದಾರೆ. ಆದರೆ ಇಂತವರು ಹಿಂದೂ ಸಂಸ್ಕೃತಿಯನ್ನು ಪ್ರಚಾರ ಪಡಿಸಲು ಏನು ಮಾಡುತ್ತಾರೆ. ಬೇರೆ ಮತಗಳ ಹಬ್ಬಗಳನ್ನು ಸಂಭ್ರಮಿಸುವುದರ ಹಿಂದೆ ಹಿಂದೂ ಸಂಸ್ಕೃತಿಯನ್ನು ಅಳಿಸುವ ಷಡ್ಯಂತ್ರ ಇದೆ ಎಂದು ಅವರು ನುಡಿದರು. ಸಂತರು, ಮುನಿಗಳು ಹಿಂದೂ ಸಮಾಜವನ್ನು ಒಟ್ಟುಗೂಡಿಸಲು ಅನೇಕ ಪ್ರಯತ್ನಗಳನ್ನು ಮಾಡುತ್ತಲೇ ಬಂದಿದ್ದಾರೆ. ಈ ವಿಷಯವನ್ನು ಹಲವು ಸ್ವಾಮೀಜಿಯವರು ಹೇಳುತ್ತಾ ಬಂದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗವತ್ ಅವರು ಕೂಡ ಹೆಚ್ಚು ಮಕ್ಕಳನ್ನು ಹೇರುವಂತೆ ಹಿಂದೂಗಳಿಗೆ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search