• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ವೀರ ಸುಪುತ್ರರ ತ್ಯಾಗ ಸ್ಮರಣೀಯ – ಕಾಮತ್

Tulunadu News Posted On December 28, 2024
0


0
Shares
  • Share On Facebook
  • Tweet It

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ:-

ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ರಾಷ್ಟ್ರೀಯ ವೀರ ಬಾಲ ದಿನವನ್ನು” ಅಟಲ್ ಸೇವಾ ಕೇಂದ್ರದಲ್ಲಿ ಆಚರಿಸಲಾಯಿತು.

ವೀರ ಬಾಲಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಮೊಘಲರ ಅಟ್ಟಹಾಸವನ್ನು ಎದುರಿಸಿ ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ಇಂತಹ ವೀರ ಸುಪುತ್ರರ ತ್ಯಾಗವನ್ನು ಸದಾ ಸ್ಮರಣೀಯವಾಗಿಸಲು ಪ್ರಧಾನಿ ನರೇಂದ್ರ ಮೋದಿಜಿ ಅವರು ನೀಡಿದ ಕರೆಯಂತೆ ದೇಶಾದ್ಯಂತ ರಾಷ್ಟ್ರೀಯ ವೀರ ಬಾಲ ದಿನವನ್ನು ಆಚರಿಸಲಾಗುತ್ತಿದೆ. ದಾಳಿಕೋರ ಔರಂಗಜೇಬನ ಜೀವ ಬೆದರಿಕೆಗೆ ಜಗ್ಗದೇ ಪ್ರಾಣಾರ್ಪಣೆ ಮಾಡಿದ್ದ ಈ ಪುಟ್ಟ ಬಾಲಕರ ಧೈರ್ಯ ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಶ್ರೀ ಖರ್ವಿಂದರ್ ಸಿಂಗ್ ಅವರು ಮಾತನಾಡಿ ಆ ವೀರ ಮಕ್ಕಳ ಕಣ್ಣುಗಳಲ್ಲಿದ್ದ ಔರಂಗಜೇಬ್ ವಿರುದ್ಧದ ಜ್ವಾಲೆ, ಎಂಥವರನ್ನೂ ಒಂದು ಕ್ಷಣ ಪ್ರಭಾವಿಸುತ್ತದೆ. ಎಂತೆಂತಹ ಆಮಿಷಗಳನ್ನು ಒಡ್ಡಿದರೂ ಮತಾಂತರಕ್ಕೆ ಒಪ್ಪದೇ ದೇಶ ಹಾಗೂ ಧರ್ಮಕ್ಕಾಗಿ ಹೋರಾಡಿ ಅಮರರಾದರು ಎಂದು ಬಾಲಕರನ್ನು ಹೆಮ್ಮೆಯಿಂದ ಸ್ಮರಿಸಿದರು.

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಗುರುಸಿಂಗ್ ಸಭಾ ಗುರುದ್ವಾರದ ಅಧ್ಯಕ್ಷರಾದ ಶ್ರೀ ಜಿತೇಂದ್ರ ಸಿಂಗ್, ಶ್ರೀ ಅಮರ್ ಜೀತ್ ಸಿಂಗ್, ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search