• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ವೀರ ಸುಪುತ್ರರ ತ್ಯಾಗ ಸ್ಮರಣೀಯ – ಕಾಮತ್

Tulunadu News Posted On December 28, 2024
0


0
Shares
  • Share On Facebook
  • Tweet It

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ:-

ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ರಾಷ್ಟ್ರೀಯ ವೀರ ಬಾಲ ದಿನವನ್ನು” ಅಟಲ್ ಸೇವಾ ಕೇಂದ್ರದಲ್ಲಿ ಆಚರಿಸಲಾಯಿತು.

ವೀರ ಬಾಲಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಮೊಘಲರ ಅಟ್ಟಹಾಸವನ್ನು ಎದುರಿಸಿ ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ಇಂತಹ ವೀರ ಸುಪುತ್ರರ ತ್ಯಾಗವನ್ನು ಸದಾ ಸ್ಮರಣೀಯವಾಗಿಸಲು ಪ್ರಧಾನಿ ನರೇಂದ್ರ ಮೋದಿಜಿ ಅವರು ನೀಡಿದ ಕರೆಯಂತೆ ದೇಶಾದ್ಯಂತ ರಾಷ್ಟ್ರೀಯ ವೀರ ಬಾಲ ದಿನವನ್ನು ಆಚರಿಸಲಾಗುತ್ತಿದೆ. ದಾಳಿಕೋರ ಔರಂಗಜೇಬನ ಜೀವ ಬೆದರಿಕೆಗೆ ಜಗ್ಗದೇ ಪ್ರಾಣಾರ್ಪಣೆ ಮಾಡಿದ್ದ ಈ ಪುಟ್ಟ ಬಾಲಕರ ಧೈರ್ಯ ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಶ್ರೀ ಖರ್ವಿಂದರ್ ಸಿಂಗ್ ಅವರು ಮಾತನಾಡಿ ಆ ವೀರ ಮಕ್ಕಳ ಕಣ್ಣುಗಳಲ್ಲಿದ್ದ ಔರಂಗಜೇಬ್ ವಿರುದ್ಧದ ಜ್ವಾಲೆ, ಎಂಥವರನ್ನೂ ಒಂದು ಕ್ಷಣ ಪ್ರಭಾವಿಸುತ್ತದೆ. ಎಂತೆಂತಹ ಆಮಿಷಗಳನ್ನು ಒಡ್ಡಿದರೂ ಮತಾಂತರಕ್ಕೆ ಒಪ್ಪದೇ ದೇಶ ಹಾಗೂ ಧರ್ಮಕ್ಕಾಗಿ ಹೋರಾಡಿ ಅಮರರಾದರು ಎಂದು ಬಾಲಕರನ್ನು ಹೆಮ್ಮೆಯಿಂದ ಸ್ಮರಿಸಿದರು.

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಗುರುಸಿಂಗ್ ಸಭಾ ಗುರುದ್ವಾರದ ಅಧ್ಯಕ್ಷರಾದ ಶ್ರೀ ಜಿತೇಂದ್ರ ಸಿಂಗ್, ಶ್ರೀ ಅಮರ್ ಜೀತ್ ಸಿಂಗ್, ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search