• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ವೀರ ಸುಪುತ್ರರ ತ್ಯಾಗ ಸ್ಮರಣೀಯ – ಕಾಮತ್

Tulunadu News Posted On December 28, 2024


  • Share On Facebook
  • Tweet It

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ:-

ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ರಾಷ್ಟ್ರೀಯ ವೀರ ಬಾಲ ದಿನವನ್ನು” ಅಟಲ್ ಸೇವಾ ಕೇಂದ್ರದಲ್ಲಿ ಆಚರಿಸಲಾಯಿತು.

ವೀರ ಬಾಲಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಮೊಘಲರ ಅಟ್ಟಹಾಸವನ್ನು ಎದುರಿಸಿ ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ಇಂತಹ ವೀರ ಸುಪುತ್ರರ ತ್ಯಾಗವನ್ನು ಸದಾ ಸ್ಮರಣೀಯವಾಗಿಸಲು ಪ್ರಧಾನಿ ನರೇಂದ್ರ ಮೋದಿಜಿ ಅವರು ನೀಡಿದ ಕರೆಯಂತೆ ದೇಶಾದ್ಯಂತ ರಾಷ್ಟ್ರೀಯ ವೀರ ಬಾಲ ದಿನವನ್ನು ಆಚರಿಸಲಾಗುತ್ತಿದೆ. ದಾಳಿಕೋರ ಔರಂಗಜೇಬನ ಜೀವ ಬೆದರಿಕೆಗೆ ಜಗ್ಗದೇ ಪ್ರಾಣಾರ್ಪಣೆ ಮಾಡಿದ್ದ ಈ ಪುಟ್ಟ ಬಾಲಕರ ಧೈರ್ಯ ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಶ್ರೀ ಖರ್ವಿಂದರ್ ಸಿಂಗ್ ಅವರು ಮಾತನಾಡಿ ಆ ವೀರ ಮಕ್ಕಳ ಕಣ್ಣುಗಳಲ್ಲಿದ್ದ ಔರಂಗಜೇಬ್ ವಿರುದ್ಧದ ಜ್ವಾಲೆ, ಎಂಥವರನ್ನೂ ಒಂದು ಕ್ಷಣ ಪ್ರಭಾವಿಸುತ್ತದೆ. ಎಂತೆಂತಹ ಆಮಿಷಗಳನ್ನು ಒಡ್ಡಿದರೂ ಮತಾಂತರಕ್ಕೆ ಒಪ್ಪದೇ ದೇಶ ಹಾಗೂ ಧರ್ಮಕ್ಕಾಗಿ ಹೋರಾಡಿ ಅಮರರಾದರು ಎಂದು ಬಾಲಕರನ್ನು ಹೆಮ್ಮೆಯಿಂದ ಸ್ಮರಿಸಿದರು.

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಗುರುಸಿಂಗ್ ಸಭಾ ಗುರುದ್ವಾರದ ಅಧ್ಯಕ್ಷರಾದ ಶ್ರೀ ಜಿತೇಂದ್ರ ಸಿಂಗ್, ಶ್ರೀ ಅಮರ್ ಜೀತ್ ಸಿಂಗ್, ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search