• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ವೀರ ಸುಪುತ್ರರ ತ್ಯಾಗ ಸ್ಮರಣೀಯ – ಕಾಮತ್

Tulunadu News Posted On December 28, 2024
0


0
Shares
  • Share On Facebook
  • Tweet It

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ:-

ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ “ರಾಷ್ಟ್ರೀಯ ವೀರ ಬಾಲ ದಿನವನ್ನು” ಅಟಲ್ ಸೇವಾ ಕೇಂದ್ರದಲ್ಲಿ ಆಚರಿಸಲಾಯಿತು.

ವೀರ ಬಾಲಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಮೊಘಲರ ಅಟ್ಟಹಾಸವನ್ನು ಎದುರಿಸಿ ಮತಾಂತರಕ್ಕೆ ಒಪ್ಪದೇ ಬಲಿದಾನಗೈದ ಇಂತಹ ವೀರ ಸುಪುತ್ರರ ತ್ಯಾಗವನ್ನು ಸದಾ ಸ್ಮರಣೀಯವಾಗಿಸಲು ಪ್ರಧಾನಿ ನರೇಂದ್ರ ಮೋದಿಜಿ ಅವರು ನೀಡಿದ ಕರೆಯಂತೆ ದೇಶಾದ್ಯಂತ ರಾಷ್ಟ್ರೀಯ ವೀರ ಬಾಲ ದಿನವನ್ನು ಆಚರಿಸಲಾಗುತ್ತಿದೆ. ದಾಳಿಕೋರ ಔರಂಗಜೇಬನ ಜೀವ ಬೆದರಿಕೆಗೆ ಜಗ್ಗದೇ ಪ್ರಾಣಾರ್ಪಣೆ ಮಾಡಿದ್ದ ಈ ಪುಟ್ಟ ಬಾಲಕರ ಧೈರ್ಯ ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಶ್ರೀ ಖರ್ವಿಂದರ್ ಸಿಂಗ್ ಅವರು ಮಾತನಾಡಿ ಆ ವೀರ ಮಕ್ಕಳ ಕಣ್ಣುಗಳಲ್ಲಿದ್ದ ಔರಂಗಜೇಬ್ ವಿರುದ್ಧದ ಜ್ವಾಲೆ, ಎಂಥವರನ್ನೂ ಒಂದು ಕ್ಷಣ ಪ್ರಭಾವಿಸುತ್ತದೆ. ಎಂತೆಂತಹ ಆಮಿಷಗಳನ್ನು ಒಡ್ಡಿದರೂ ಮತಾಂತರಕ್ಕೆ ಒಪ್ಪದೇ ದೇಶ ಹಾಗೂ ಧರ್ಮಕ್ಕಾಗಿ ಹೋರಾಡಿ ಅಮರರಾದರು ಎಂದು ಬಾಲಕರನ್ನು ಹೆಮ್ಮೆಯಿಂದ ಸ್ಮರಿಸಿದರು.

ಈ ಸಂದರ್ಭದಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್ ಕುಮಾರ್, ರಮೇಶ್ ಹೆಗ್ಡೆ, ಗುರುಸಿಂಗ್ ಸಭಾ ಗುರುದ್ವಾರದ ಅಧ್ಯಕ್ಷರಾದ ಶ್ರೀ ಜಿತೇಂದ್ರ ಸಿಂಗ್, ಶ್ರೀ ಅಮರ್ ಜೀತ್ ಸಿಂಗ್, ನಿತಿನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search