• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಮೂರನೇ ಶ್ರೀಮಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದ ಸರ್ವೇ!

Tulunadu News Posted On December 31, 2024
0


0
Shares
  • Share On Facebook
  • Tweet It

ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಹೊತ್ತಿನಲ್ಲಿಯೇ ಅವರು ದೇಶದ ಮೂರನೇ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದನ್ನು ಖುಷಿಯಿಂದ ಸ್ವೀಕರಿಸಬೇಕೋ ಅಥವಾ ಮುಜುಗರದಿಂದ ಸ್ವೀಕರಿಸಬೇಕೋ ಎನ್ನುವ ಗೊಂದಲ ಅವರಲ್ಲಿ ಮತ್ತು ಅವರ ಹಿಂಬಾಲಕರಲ್ಲಿ ಕಾಣಿಸಿದೆ.

ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ ಮತ್ತು ನ್ಯಾಶನಲ್ ಎಲೆಕ್ಷನ್ ವಾಚ್ ಸಂಸ್ಥೆ ಸರ್ವೆ ನಡೆಸಿದ್ದು, ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿ ಪ್ರಕಾರ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಮೊದಲ ಸ್ಥಾನದಲ್ಲಿ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಅವರು ಎರಡನೇ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳಾಗಿದ್ದಾರೆ,

ಆಂಧ್ರಪ್ರದೇಶ ಸಿಎಂ 931 ಕೋಟಿ ರೂ ಹಾಗೂ ಅರುಣಾಚಲ ಪ್ರದೇಶದ ಸಿಎಂ 332 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದೇವೆ ಎನ್ನುವ ಲೆಕ್ಕ ತೋರಿಸಿದ್ದಾರೆ. ಮೂರನೇ ಸ್ಥಾನದಲ್ಲಿರುವ ಕರ್ನಾಟಕದ ಸಿಎಂ ಸಿದ್ಧರಾಮಯ್ಯ ಅವರ ಬಳಿ 51 ಕೋಟಿ ರೂ ಮೌಲ್ಯದ ಆಸ್ತಿ ಇದೆ. ಇನ್ನು ಸಾಲದ ವಿಷಯ ಬಂದರೆ ಸಿದ್ಧರಾಮಯ್ಯ 23 ಕೋಟಿ ರೂ ಸಾಲ ಪಡೆದಿದ್ದಾರೆ. ಪೆಮಾ ಖಂಡು 180 ಕೋಟಿ ಹಾಗೂ ನಾಯ್ಡು 10 ಕೋಟಿ ಸಾಲ ಹೊಂದಿದ್ದಾರೆ. ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ 1630 ಕೋಟಿ ರೂ ಎಂದು ಸಂಸ್ಥೆ ವರದಿ ತಿಳಿಸಿದೆ.

ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15 ಲಕ್ಷ, ಜಮ್ಮು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ 55 ಲಕ್ಷ, ಕೇರಳದ ಪಿಣರಾಯಿ ವಿಜಯನ್ 1.18 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು, ದೇಶದಲ್ಲಿಯೇ ಅತೀ ಕಡಿಮೆ ಆಸ್ತಿ ಹೊಂದಿರುವ ಪ್ರಸ್ತುತ ಸಿಎಂಗಳಾಗಿದ್ದಾರೆ..

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search