• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಮೂರನೇ ಶ್ರೀಮಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಂದ ಸರ್ವೇ!

Tulunadu News Posted On December 31, 2024
0


0
Shares
  • Share On Facebook
  • Tweet It

ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಹೊತ್ತಿನಲ್ಲಿಯೇ ಅವರು ದೇಶದ ಮೂರನೇ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದನ್ನು ಖುಷಿಯಿಂದ ಸ್ವೀಕರಿಸಬೇಕೋ ಅಥವಾ ಮುಜುಗರದಿಂದ ಸ್ವೀಕರಿಸಬೇಕೋ ಎನ್ನುವ ಗೊಂದಲ ಅವರಲ್ಲಿ ಮತ್ತು ಅವರ ಹಿಂಬಾಲಕರಲ್ಲಿ ಕಾಣಿಸಿದೆ.

ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ ಮತ್ತು ನ್ಯಾಶನಲ್ ಎಲೆಕ್ಷನ್ ವಾಚ್ ಸಂಸ್ಥೆ ಸರ್ವೆ ನಡೆಸಿದ್ದು, ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿ ಪ್ರಕಾರ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಮೊದಲ ಸ್ಥಾನದಲ್ಲಿ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಅವರು ಎರಡನೇ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳಾಗಿದ್ದಾರೆ,

ಆಂಧ್ರಪ್ರದೇಶ ಸಿಎಂ 931 ಕೋಟಿ ರೂ ಹಾಗೂ ಅರುಣಾಚಲ ಪ್ರದೇಶದ ಸಿಎಂ 332 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದೇವೆ ಎನ್ನುವ ಲೆಕ್ಕ ತೋರಿಸಿದ್ದಾರೆ. ಮೂರನೇ ಸ್ಥಾನದಲ್ಲಿರುವ ಕರ್ನಾಟಕದ ಸಿಎಂ ಸಿದ್ಧರಾಮಯ್ಯ ಅವರ ಬಳಿ 51 ಕೋಟಿ ರೂ ಮೌಲ್ಯದ ಆಸ್ತಿ ಇದೆ. ಇನ್ನು ಸಾಲದ ವಿಷಯ ಬಂದರೆ ಸಿದ್ಧರಾಮಯ್ಯ 23 ಕೋಟಿ ರೂ ಸಾಲ ಪಡೆದಿದ್ದಾರೆ. ಪೆಮಾ ಖಂಡು 180 ಕೋಟಿ ಹಾಗೂ ನಾಯ್ಡು 10 ಕೋಟಿ ಸಾಲ ಹೊಂದಿದ್ದಾರೆ. ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ 1630 ಕೋಟಿ ರೂ ಎಂದು ಸಂಸ್ಥೆ ವರದಿ ತಿಳಿಸಿದೆ.

ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 15 ಲಕ್ಷ, ಜಮ್ಮು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ 55 ಲಕ್ಷ, ಕೇರಳದ ಪಿಣರಾಯಿ ವಿಜಯನ್ 1.18 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು, ದೇಶದಲ್ಲಿಯೇ ಅತೀ ಕಡಿಮೆ ಆಸ್ತಿ ಹೊಂದಿರುವ ಪ್ರಸ್ತುತ ಸಿಎಂಗಳಾಗಿದ್ದಾರೆ..

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search