• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ಕಾನ್ ಸಂತ ಚಿನ್ಮಯ್ ಕೃಷ್ಣದಾಸ್ ಜೈಲಿನಲ್ಲಿ ಗಂಭೀರ ಅಸ್ವಸ್ಥ: ಸೂಕ್ತ ಚಿಕಿತ್ಸೆ ನೀಡಲು ಸರಕಾರ ನಕಾರ…

Tulunadu News Posted On December 31, 2024
0


0
Shares
  • Share On Facebook
  • Tweet It

ಮೂಲಭೂತವಾದಿಗಳ ಕಪಿಮುಷ್ಟಿಯಲ್ಲಿರುವ ಬಾಂಗ್ಲಾದೇಶದಲ್ಲಿ ಬಂಧಿಸಲ್ಪಟ್ಟಿರುವ ಇಸ್ಕಾನ್ ಸಂತ ಚಿನ್ಮಯ್ ಕೃಷ್ಣದಾಸ್ ಅವರ ಆರೋಗ್ಯ ಗಂಭೀರವಾಗಿ ಹದಗೆಟ್ಟಿದೆ. ಬಾಂಗ್ಲಾ ದೇಶದಲ್ಲಿರುವ ಹಿಂದೂಗಳು ಈಗ ಜಗತ್ತಿಗೆ ವಿನಂತಿಸುತ್ತಾ, ಸಂತ ಚಿನ್ಮಯ್ ದಾಸ್ ಅವರ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಬಾಂಗ್ಲಾ ದೇಶದ ಸರಕಾರ ಚಿನ್ಮಯ್ ದಾಸರ ಅನಾರೋಗ್ಯದ ಚಿಕಿತ್ಸೆಗಾಗಿ ಏನೂ ಮಾಡದೇ ಇರುವುದರಿಂದ ಇಸ್ಕಾನ್ ಬೆಂಬಲಿಗರು ಚಿಂತೆಗೆ ಒಳಗಾಗಿದ್ದಾರೆ.

ಈ ಬಗ್ಗೆ ಪ್ರಕಟನೆಯನ್ನು ಹೊರಡಿಸಿರುವ ಬಾಂಗ್ಲಾದೇಶದ ಬಂಗಾಳಿ ಹಿಂದೂ ಹಕ್ಕುಗಳ ಪಂಗಡದವರು ” ಚಿನ್ಮಯ್ ಕೃಷ್ಣದಾಸ್ ಅವರು ಗಂಭೀರವಾಗಿ ಅನಾರೋಗ್ಯ ಪೀಡಿತರಾಗಿದ್ದರೂ ಅವರ ಬಗ್ಗೆ ಸ್ಥಳೀಯ ಸರಕಾರ ತೀವ್ರ ಅಸಡ್ಡೆಯನ್ನು ತೋರುತ್ತಿದೆ. ಅವರು ಎರಡು ಬಾರಿ ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಬಾಂಗ್ಲಾದೇಶದ ಎಲ್ಲಾ ದೇವಾಲಯಗಳಲ್ಲಿ ಜನವರಿ 1 ರಂದು ವಿಶೇಷ ಪ್ರಾರ್ಥನೆ, ಪೂಜೆಗೆ ಸಂಕಲ್ಪಿಸಲಾಗಿದೆ. ಎಲ್ಲರೂ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಚಿನ್ಮಯ ಕೃಷ್ಣದಾಸ್ ಯಾನೆ ಚಿನ್ಮಯ ಕೃಷ್ಣದಾಸ್ ಬ್ರಹ್ಮಚಾರಿ ಅವರು ಬಾಂಗ್ಲಾದೇಶ ಶೋಮಿಲಿಟೋ ಸನಾತನ ಜಾಗರಣ ಜೊಟೆ ( ಬಿಎಸ್ ಎಸ್ ಜೆಜೆ) ಇದರ ವಕ್ತಾರರಾಗಿದ್ದು, ಬಾಂಗ್ಲಾ ದೇಶದ ಸರಕಾರದ ವಿರುದ್ಧ ಹಿಂದೂಗಳ ರಕ್ಷಣೆಗಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದ ಕಾರಣ ದೇಶದ್ರೋಹದ ಅಡಿಯಲ್ಲಿ ಬಂಧಿಸಿ ಜೈಲಿಗಟ್ಟಲಾಗಿತ್ತು.

ಶೇಖ್ ಹಸೀನಾ ವಿರುದ್ಧ ಸ್ಥಳೀಯರು ಬಂಡಾಯ ಎದ್ದು ನಂತರ ಮೊಹಮ್ಮದ್ ಯೂನಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಲ್ಲಿನ ಮತಾಂಧರು ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ, ಹತ್ಯೆಗಳು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ, ಹೆಣ್ಣುಮಕ್ಕಳ ಕಣ್ಮರೆ, ಹಿಂದೂ ಮನೆಗಳಿಗೆ ಬೆಂಕಿ ಹೀಗೆ ನಿರಂತರ ದಬ್ಬಾಳಿಕೆಗಳು ನಡೆಯುತ್ತಿವೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search