• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಿಯಾಂಕ್ ಖರ್ಗೆ ರಾಜೀನಾಮೆ ಸಹಿತ ಸಿಬಿಐ ತನಿಖೆಯಾಗಬೇಕು :- ಶಾಸಕ ಕಾಮತ್ ಆಗ್ರಹ

Tulunadu News Posted On January 1, 2025
0


0
Shares
  • Share On Facebook
  • Tweet It

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ. ಸಾಲದ್ದಕ್ಕೆ ಸರ್ಕಾರದ ಕೃಪಾಕಟಾಕ್ಷ ಹೊಂದಿರುವ ಪ್ರಭಾವಿ ಕಾಂಗ್ರೆಸ್ ನಾಯಕರುಗಳ ಆಪ್ತರ ಕಿರುಕುಳ, ಬೆದರಿಕೆಗೆ ಮಣಿದು ಉಸಿರುಗಟ್ಟಿಸುವಂತಹ ವಾತಾವರಣದಲ್ಲಿ ಬದುಕಲಾಗದೇ ಹಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತರ ಕಿರುಕುಳಕ್ಕೆ ಹೆದರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೀದರ್ ನ ಗುತ್ತಿಗೆದಾರ ಸಚಿನ್ ಪಂಚಾಳ್ ಪ್ರಕರಣವೇ ಸಾಕ್ಷಿ.

ಗುತ್ತಿಗೆದಾರ ಸಚಿನ್ ಅವರು 7 ಪುಟಗಳ ಡೆತ್ ನೋಟ್ ಬರೆದು ಅದನ್ನು ಸಾಮಾಜಿಕ ಜಾಲತಾಣದಲ್ಲೂ ಹಾಕಿದ್ದಾರೆ. ಅದರಲ್ಲಿ ಪ್ರಿಯಾಂಕ್ ಖರ್ಗೆ ಅವರ ಆಪ್ತ ದುಷ್ಟ ಕೂಟದ ಸದಸ್ಯರು ತನಗೆ ಮಾಡಿದ ಮಹಾ ಮೋಸ, ನೀಡಿದ ಚಿತ್ರಹಿಂಸೆ, ಅಲ್ಲದೇ ಸನಾತನ ಧರ್ಮ ರಕ್ಷಣೆಗೆ ಬದುಕು ಮೀಸಲಿಟ್ಟಿರುವ ಆಂದೋಲ ಸ್ವಾಮೀಜಿ, ಬಿಜೆಪಿ ಮುಖಂಡ ಚಂದು ಪಾಟೀಲ, ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಸೇರಿದಂತೆ ಹಲವು ಹಿಂದೂ ನಾಯಕರನ್ನು ಸುಪಾರಿ ಕೊಟ್ಟು ಹತ್ಯೆ ಮಾಡುವ ಸಂಚಿನ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಸಾಯುವ ಅಂತಿಮ ಕ್ಷಣದಲ್ಲಿ ಇಂತಹ ವಿಷಯದಲ್ಲಿ ಯಾವ ವ್ಯಕ್ತಿಯೂ ಸುಳ್ಳು ಹೇಳಲು ಸಾಧ್ಯವೇ? ಇದೊಂದು ಅತ್ಯಂತ ಆತಂಕಕಾರಿ ವಿಷಯವಾಗಿದ್ದು ಎಲ್ಲಾ ಆರೋಪಗಳು ಸಚಿವ ಪ್ರಿಯಾಂಕ್ ಖರ್ಗೆಯವರ ಸುತ್ತವೇ ಗಿರಕಿ ಹೊಡೆಯುತ್ತಿದ್ದು ಈ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ.

ಬಿಜೆಪಿಯವರು ಎಷ್ಟು ಬೇಕಾದರೂ ಹೋರಾಟ ಮಾಡಿಕೊಳ್ಳಲಿ ನಾನು ರಾಜೀನಾಮೆ ಕೊಡುವುದಿಲ್ಲ, ಎಂದು ಹಠ ಹಿಡಿದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ನನ್ನ ರಾಜೀನಾಮೆ ಕೇಳಿದರೆ ಎಚ್ಚರಿಕೆ ಎಂಬ ಸಂದೇಶವನ್ನು ಸಿಎಂ ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ರವಾನಿಸಿದ್ದಾರೆ. ಅಲ್ಲದೇ ಈ ಪ್ರಕರಣದ ಕುರಿತಂತೆ ಸಿಐಡಿ ತನಿಖೆ ಸಾಕು, ಬೇರಾವುದೇ ತನಿಖೆಯೂ ಬೇಡ ಎಂಬಂತೆ ಈಗಲೇ ವ್ಯವಸ್ಥಿತವಾಗಿ ಎಲ್ಲಾ “ಸಿದ್ಧತೆ”ಗಳನ್ನು ತಮ್ಮದೇ ಸರ್ಕಾರಕ್ಕೆ ಒತ್ತಡ ಹಾಕುವ ಮೂಲಕ ಮಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ಸಿಲುಕಿದ್ದ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯನ್ನು ಕೂಡಲೇ ಪಡೆದುಕೊಂಡಿದ್ದ ಸಿದ್ದರಾಮಯ್ಯನವರಿಗೆ ಪ್ರಿಯಾಂಕ ಖರ್ಗೆ ಅವರ ರಾಜೀನಾಮೆ ಪಡೆದುಕೊಳ್ಳಲು ಧೈರ್ಯವಿಲ್ಲವೇ? ರಾಜೀನಾಮೆ ಬಿಡಿ, ಈ ಪ್ರಕರಣದ ವಿರುದ್ಧ ಒಂದೇ ಒಂದು ಪದ ಮಾತನಾಡಿದರೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಕೋಪಗೊಂಡು ತಮ್ಮ ಕುರ್ಚಿಗೆ ಕಂಟಕ ಬರುವ ಭಯ ಅವರನ್ನು ಕಾಡುತ್ತಿರಬಹುದು!

ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕೆ.ಎಸ್ ಈಶ್ವರಪ್ಪನವರ ಪ್ರಕರಣ ಸೇರಿದಂತೆ ಸಣ್ಣಪುಟ್ಟ ವಿಷಯಕ್ಕೂ ಸಿದ್ದರಾಮಯ್ಯ ಆದಿಯಾಗಿ, ಪ್ರಿಯಾಂಕ ಖರ್ಗೆ ಸಹಿತ ಕಾಂಗ್ರೆಸ್ ನಾಯಕರು ಬೀದಿ ಬೀದಿಯಲ್ಲಿ ರಾಜೀನಾಮೆ ಕೊಡಿ ಎಂದು ಆರ್ಭಟಿಸುತ್ತಿದ್ದರು. ಈಗ ಅವರ ಸರ್ಕಾರವೇ ಆರೋಪಿ ಸ್ಥಾನದಲ್ಲಿರುವಾಗ ಎಲ್ಲರೂ ಮೌನ ವಹಿಸಿದ್ದಾರೆ. ಸರ್ಕಾರಿ ಅಧಿಕಾರಿಗಳು, ಗುತ್ತಿಗೆದಾರರು, ಅಮಾಯಕರು ಸರ್ಕಾರದ ಕಾರಣದಿಂದಲೇ ಸಾಯುತ್ತಿದ್ದರೂ ಭಂಡ ಕಾಂಗ್ರೆಸ್ ಸರಕಾರ ಮಾತ್ರ ಕಿಂಚಿತ್ತೂ ಮಾನ, ಮರ್ಯಾದೆ ಇಲ್ಲದಂತೆ ವರ್ತಿಸುತ್ತಿದೆ.

ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರ ಅಟ್ಟಹಾಸ ಮಿತಿ ಮೀರಿದ್ದು ಅಲ್ಲಿ ಅನ್ಯಾಯದ ದರ್ಬಾರ್ ನಡೆಯುತ್ತಿದೆ ಎಂದು ನೊಂದ ಕುಟುಂಬದವರೇ ಹೇಳುತ್ತಿದ್ದಾರೆ. ಪೊಲೀಸರನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ತಮ್ಮದೇ ಆಡಳಿತ ನಡೆಸುತ್ತಿರುವ ಅವರು, ಪುಡಿ ರೌಡಿಗಳನ್ನು ಸಹ ಸಾಕಿಕೊಂಡು ಜನರಲ್ಲಿ ಒಂದು ರೀತಿಯ ಭಯಭೀತ ವಾತಾವರಣ ಸೃಷ್ಟಿಸಿದ್ದಾರೆ.ಆದರೆ ಒಬ್ಬ ಅಮಾಯಕನ ಸಾವಿನ ವಿಚಾರವನ್ನು ಬಿಜೆಪಿ ಇಷ್ಟಕ್ಕೇ ಬಿಡುವ ಪ್ರಶ್ನೆಯೇ ಇಲ್ಲ. ಸರ್ಕಾರ ಕೂಡಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಚಿವ ಪ್ರಿಯಾಂಕ ಖರ್ಗೆಯವರನ್ನು ಬಂಧಿಸಬೇಕು ಮತ್ತು ತನಿಖೆಯನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸಬೇಕು. ಒಂದು ವೇಳೆ ತನಿಖೆ ನಂತರ ಅವರದ್ದು ಯಾವುದೇ ತಪ್ಪಿಲ್ಲ ಎಂದು ಸಾಬೀತಾದರೆ ಸಚಿವ ಸ್ಥಾನ ಅಷ್ಟೇ ಅಲ್ಲ, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಹುದ್ದೆ ಬೇಕಾದರೂ ಪಡೆಯಲಿ. ಯಾರದ್ದೂ ಅಭ್ಯಂತರವಿಲ್ಲ.

ಇತ್ತೀಚೆಗಷ್ಟೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕನ ಕಿರುಕುಳಕ್ಕೆ ತಹಸೀಲ್ದಾರ್ ಕಚೇರಿಯ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಬೆನ್ನಲ್ಲೇ, ಇದೀಗ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಬೆದರಿಕೆಯಿಂದ ಸಚಿನ್ ಸುದೀರ್ಘ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಅಮಾಯಕರಿಗೆ, ಪ್ರಾಮಾಣಿಕರಿಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ಅನೇಕ ಕುಟುಂಬಗಳನ್ನು ಅನಾಥವಾಗಿಸುತ್ತಿದೆ. ಆ ಎಲ್ಲಾ ಕುಟುಂಬಗಳ ಶಾಪ ಕಾಂಗ್ರೆಸ್ ಸರ್ಕಾರವನ್ನು ತಟ್ಟದೇ ಬಿಡದು, ಇದರ ಫಲ ಅನುಭವಿಸಲೇಬೇಕು.

ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಸಚಿನ್ ಪಡೆದಿದ್ದ ಗುತ್ತಿಗೆ ಕೆಲಸಗಳ ಬಾಕಿ ಉಳಿದಿರುವ ಹಣವನ್ನು ಪಾವತಿಸುವುದರ ಜೊತೆಗೆ ಆ ಕುಟುಂಬಕ್ಕೆ ಸೂಕ್ತ ಪರಿಹಾರವನ್ನೂ ಘೋಷಿಸಬೇಕು, ಕುಟುಂಬದ ಸದಸ್ಯರೊಬ್ಬರಿಗೆ ಸರಕಾರಿ ಹುದ್ದೆಯನ್ನು ನೀಡಬೇಕು, ಮತ್ತು ಈ ಅನ್ಯಾಯದ ಸಾವಿಗೆ ಕಾರಣರಾದ ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸುತ್ತೇನೆ.

ಪತ್ರಿಕಾಗೋಷ್ಠಿಯಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಉಪಮೇಯರ್ ಭಾನುಮತಿ, ಪೂರ್ಣಿಮಾ, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search