• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅತುಲ್ ಸುಭಾಷ್ ಹಾಗೂ ಸ್ರಿಷ್ಟಿ ತುಲಿ ಆತ್ಮಹತ್ಯೆ; ನ್ಯಾಯಾಂಗ ವ್ಯವಸ್ಥೆ ವ್ಯತ್ಯಾಸ…!?

Tulunadu News Posted On January 7, 2025
0


0
Shares
  • Share On Facebook
  • Tweet It

ಇತ್ತೀಚೆಗೆ ಎರಡು ಆತ್ಮಹತ್ಯೆ ಪ್ರಕರಣಗಳು ಇಡೀ ದೇಶದ ಗಮನ ಸೆಳೆದಿವೆ. ಒಂದು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ. ಇನ್ನೊಂದು ಏರ್ ಇಂಡಿಯಾ ಪೈಲೆಟ್ ಸ್ರಿಷ್ಟಿ ತುಲಿ ಆತ್ಮಹತ್ಯೆ ಪ್ರಕರಣ. ಈ ಎರಡು ಪ್ರಕರಣಗಳಲ್ಲಿ ಆರೋಪಗಳು ನೇರವಾಗಿ ಅವರ ಸಂಗಾತಿಯ ಮೇಲೆಯೇ ಇದ್ದವು. ಆದರೆ ಎರಡಕ್ಕೂ ಸಾಕಷ್ಟು ವ್ಯತ್ಯಾಸ ಇತ್ತು. ಮೊದಲನೇಯದಾಗಿ ಅತುಲ್ ಸುಭಾಷ್ ಪ್ರಕರಣದಲ್ಲಿ ಮೃತ ಸುಭಾಷ್ ಸಾಯುವ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಅದರೊಂದಿಗೆ ಒಂದೂವರೆ ಗಂಟೆಯ ವಿಡಿಯೋ ಕೂಡ ಮಾಡಿದ್ದರು. ಅದರಲ್ಲಿ ತನ್ನ ಸಾವಿಗೆ ಪತ್ನಿ ಮತ್ತು ಆಕೆಯ ಮನೆಯವರು ಹೇಗೆ ಕಾರಣ ಎಂದು ಇಂಚಿಂಚಾಗಿ ವಿವರಿಸಿದ್ದರು. ತನ್ನ ಮೇಲೆ ಸುಳ್ಳು ವರದಕ್ಷಿಣೆ ಪೀಡನಾ ಪ್ರಕರಣ, ಮೂರು ಕೋಟಿ ರೂಪಾಯಿ ಜೀವನಾಂಶ ಬೇಕೆಂದು ಹಟ, ಮಗನನ್ನು ನೋಡಲು ಬಿಡದೇ ಇರುವುದು, ಅದಕ್ಕೂ ಹಣ ಕೇಳುವುದು. ಹೀಗೆ ಅತುಲ್ ಘೋರ ಆರೋಪಗಳನ್ನು ಮಾಡಿದ್ದರು. ಆದರೆ ಈ ಪ್ರಕರಣದಲ್ಲಿ ಪ್ರಥಮ ಮಾಹಿತಿ ವರದಿ (ಎಫ್ ಐ ಆರ್) ದಾಖಲಾದದ್ದು ಒಂದು ದಿನದ ನಂತರ. ಆರೋಪಿಗಳಾದ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಮತ್ತು ಆಕೆಯ ಮನೆಯವರನ್ನು ಬಂಧಿಸಿದ್ದು ಒಂದು ವಾರದ ನಂತರ. ಅವರು ಜೈಲಿನಲ್ಲಿ ಇದ್ದದ್ದು 20 ದಿನ.

ಇನ್ನೊಂದು ಪ್ರಕರಣದಲ್ಲಿ ಏರ್ ಇಂಡಿಯಾ ಪೈಲೆಟ್ ಸ್ರಿಷ್ಟಿ ತುಲಿ ಆತ್ಮಹತ್ಯೆ ಪ್ರಕರಣದಲ್ಲಿ ಆಕೆ ಆತ್ಮಹತ್ಯೆ ಮಾಡುವ ಮೊದಲು ಯಾವುದೇ ಡೆತ್ ನೋಟ್ ಬರೆದಿರಲಿಲ್ಲ. ತನ್ನ ಸಾವಿಗೆ ತನ್ನ ಗೆಳೆಯ ಕಾರಣ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಆದರೂ ಮಹಿಳಾ ಪೈಲೆಟ್ ಆತ್ಮಹತ್ಯೆಯಾಗಿರುವುದಕ್ಕೆ ಅವಳ ತಂದೆ ಕೊಟ್ಟ ದೂರಿನಲ್ಲಿ ಅವಳ ಬಾಯ್ ಫ್ರೆಂಡ್ ಆದಿತ್ಯ ಪಂಡಿತ್ ಆಕೆಗೆ ಮಾಂಸಹಾರ ಸೇವಿಸದಂತೆ ಒತ್ತಡ ಹಾಕಿದ್ದ. ಅದಕ್ಕೆ ಅವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿದ್ದರು. ಇದರಿಂದ ತಕ್ಷಣ ಆದಿತ್ಯ ಪಂಡಿತ್ ಮೇಲೆ ಪ್ರಕರಣ ದಾಖಲಾಗಿ ಅದೇ ದಿನ ಆತನನ್ನು ಬಂಧಿಸಲಾಗಿತ್ತು. 31 ದಿನಗಳ ಕಾಲ ಕಾರಾಗೃಹದಲ್ಲಿಡಲಾಗಿತ್ತು. ಕೊನೆಗೆ ಏನೂ ಸಾಕ್ಷ್ಯಾಧಾರಗಳು ಇಲ್ಲ ಎನ್ನುವ ಕಾರಣ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ಈ ಎರಡೂ ಪ್ರಕರಣಗಳನ್ನು ಗಮನಿಸಿದಾಗ ಮೊದಲ ಪ್ರಕರಣದಲ್ಲಿ ಅತುಲ್ ತನ್ನ ಆತ್ಮಹತ್ಯೆಗೆ ಸ್ಪಷ್ಟ ಕಾರಣ ನೀಡಿದ ಬಳಿಕವೂ ನಿಖಿತಾ ಸಿಂಘಾನಿಯಾ ಅವರಿಗೆ ಜಾಮೀನು ಸಿಕ್ಕಿದ್ದು ಮತ್ತು ಆದಿತ್ಯ ಪಂಡಿತ್ ಅವರಿಗೆ ಜಾಮೀನು ಸಿಗಲು ತಡವಾಗಿರುವುದು ಎಲ್ಲವನ್ನು ಸಮಚಿತ್ತದಿಂದ ನೋಡಿದಾಗ ಎರಡು ಪ್ರಕರಣಗಳಲ್ಲಿ ಸ್ವಾಮ್ಯತೆ ಇದ್ದರೂ ಆರೋಪಿಗಳ ವಿಷಯದಲ್ಲಿ ಕಾನೂನು ಪ್ರಕ್ರಿಯೆಗಳು ಒಂದೇ ರೀತಿ ಆಗಿದ್ದರೂ ಪರಿಣಾಮ ಹೇಗೆ ಭಿನ್ನವಾಗಿತ್ತು ಎನ್ನುವುದು ತಿಳಿಯುತ್ತದೆ. ಈ ಎರಡು ಪ್ರಕರಣಗಳನ್ನು ಮುಂದಿಟ್ಟು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಪ್ರತಿಕ್ರಿಯೆಯನ್ನು ನೆಟ್ಟಿಗರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search