• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅತುಲ್ ಸುಭಾಷ್ ಹಾಗೂ ಸ್ರಿಷ್ಟಿ ತುಲಿ ಆತ್ಮಹತ್ಯೆ; ನ್ಯಾಯಾಂಗ ವ್ಯವಸ್ಥೆ ವ್ಯತ್ಯಾಸ…!?

Tulunadu News Posted On January 7, 2025
0


0
Shares
  • Share On Facebook
  • Tweet It

ಇತ್ತೀಚೆಗೆ ಎರಡು ಆತ್ಮಹತ್ಯೆ ಪ್ರಕರಣಗಳು ಇಡೀ ದೇಶದ ಗಮನ ಸೆಳೆದಿವೆ. ಒಂದು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ. ಇನ್ನೊಂದು ಏರ್ ಇಂಡಿಯಾ ಪೈಲೆಟ್ ಸ್ರಿಷ್ಟಿ ತುಲಿ ಆತ್ಮಹತ್ಯೆ ಪ್ರಕರಣ. ಈ ಎರಡು ಪ್ರಕರಣಗಳಲ್ಲಿ ಆರೋಪಗಳು ನೇರವಾಗಿ ಅವರ ಸಂಗಾತಿಯ ಮೇಲೆಯೇ ಇದ್ದವು. ಆದರೆ ಎರಡಕ್ಕೂ ಸಾಕಷ್ಟು ವ್ಯತ್ಯಾಸ ಇತ್ತು. ಮೊದಲನೇಯದಾಗಿ ಅತುಲ್ ಸುಭಾಷ್ ಪ್ರಕರಣದಲ್ಲಿ ಮೃತ ಸುಭಾಷ್ ಸಾಯುವ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಅದರೊಂದಿಗೆ ಒಂದೂವರೆ ಗಂಟೆಯ ವಿಡಿಯೋ ಕೂಡ ಮಾಡಿದ್ದರು. ಅದರಲ್ಲಿ ತನ್ನ ಸಾವಿಗೆ ಪತ್ನಿ ಮತ್ತು ಆಕೆಯ ಮನೆಯವರು ಹೇಗೆ ಕಾರಣ ಎಂದು ಇಂಚಿಂಚಾಗಿ ವಿವರಿಸಿದ್ದರು. ತನ್ನ ಮೇಲೆ ಸುಳ್ಳು ವರದಕ್ಷಿಣೆ ಪೀಡನಾ ಪ್ರಕರಣ, ಮೂರು ಕೋಟಿ ರೂಪಾಯಿ ಜೀವನಾಂಶ ಬೇಕೆಂದು ಹಟ, ಮಗನನ್ನು ನೋಡಲು ಬಿಡದೇ ಇರುವುದು, ಅದಕ್ಕೂ ಹಣ ಕೇಳುವುದು. ಹೀಗೆ ಅತುಲ್ ಘೋರ ಆರೋಪಗಳನ್ನು ಮಾಡಿದ್ದರು. ಆದರೆ ಈ ಪ್ರಕರಣದಲ್ಲಿ ಪ್ರಥಮ ಮಾಹಿತಿ ವರದಿ (ಎಫ್ ಐ ಆರ್) ದಾಖಲಾದದ್ದು ಒಂದು ದಿನದ ನಂತರ. ಆರೋಪಿಗಳಾದ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಮತ್ತು ಆಕೆಯ ಮನೆಯವರನ್ನು ಬಂಧಿಸಿದ್ದು ಒಂದು ವಾರದ ನಂತರ. ಅವರು ಜೈಲಿನಲ್ಲಿ ಇದ್ದದ್ದು 20 ದಿನ.

ಇನ್ನೊಂದು ಪ್ರಕರಣದಲ್ಲಿ ಏರ್ ಇಂಡಿಯಾ ಪೈಲೆಟ್ ಸ್ರಿಷ್ಟಿ ತುಲಿ ಆತ್ಮಹತ್ಯೆ ಪ್ರಕರಣದಲ್ಲಿ ಆಕೆ ಆತ್ಮಹತ್ಯೆ ಮಾಡುವ ಮೊದಲು ಯಾವುದೇ ಡೆತ್ ನೋಟ್ ಬರೆದಿರಲಿಲ್ಲ. ತನ್ನ ಸಾವಿಗೆ ತನ್ನ ಗೆಳೆಯ ಕಾರಣ ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಆದರೂ ಮಹಿಳಾ ಪೈಲೆಟ್ ಆತ್ಮಹತ್ಯೆಯಾಗಿರುವುದಕ್ಕೆ ಅವಳ ತಂದೆ ಕೊಟ್ಟ ದೂರಿನಲ್ಲಿ ಅವಳ ಬಾಯ್ ಫ್ರೆಂಡ್ ಆದಿತ್ಯ ಪಂಡಿತ್ ಆಕೆಗೆ ಮಾಂಸಹಾರ ಸೇವಿಸದಂತೆ ಒತ್ತಡ ಹಾಕಿದ್ದ. ಅದಕ್ಕೆ ಅವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿದ್ದರು. ಇದರಿಂದ ತಕ್ಷಣ ಆದಿತ್ಯ ಪಂಡಿತ್ ಮೇಲೆ ಪ್ರಕರಣ ದಾಖಲಾಗಿ ಅದೇ ದಿನ ಆತನನ್ನು ಬಂಧಿಸಲಾಗಿತ್ತು. 31 ದಿನಗಳ ಕಾಲ ಕಾರಾಗೃಹದಲ್ಲಿಡಲಾಗಿತ್ತು. ಕೊನೆಗೆ ಏನೂ ಸಾಕ್ಷ್ಯಾಧಾರಗಳು ಇಲ್ಲ ಎನ್ನುವ ಕಾರಣ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.

ಈ ಎರಡೂ ಪ್ರಕರಣಗಳನ್ನು ಗಮನಿಸಿದಾಗ ಮೊದಲ ಪ್ರಕರಣದಲ್ಲಿ ಅತುಲ್ ತನ್ನ ಆತ್ಮಹತ್ಯೆಗೆ ಸ್ಪಷ್ಟ ಕಾರಣ ನೀಡಿದ ಬಳಿಕವೂ ನಿಖಿತಾ ಸಿಂಘಾನಿಯಾ ಅವರಿಗೆ ಜಾಮೀನು ಸಿಕ್ಕಿದ್ದು ಮತ್ತು ಆದಿತ್ಯ ಪಂಡಿತ್ ಅವರಿಗೆ ಜಾಮೀನು ಸಿಗಲು ತಡವಾಗಿರುವುದು ಎಲ್ಲವನ್ನು ಸಮಚಿತ್ತದಿಂದ ನೋಡಿದಾಗ ಎರಡು ಪ್ರಕರಣಗಳಲ್ಲಿ ಸ್ವಾಮ್ಯತೆ ಇದ್ದರೂ ಆರೋಪಿಗಳ ವಿಷಯದಲ್ಲಿ ಕಾನೂನು ಪ್ರಕ್ರಿಯೆಗಳು ಒಂದೇ ರೀತಿ ಆಗಿದ್ದರೂ ಪರಿಣಾಮ ಹೇಗೆ ಭಿನ್ನವಾಗಿತ್ತು ಎನ್ನುವುದು ತಿಳಿಯುತ್ತದೆ. ಈ ಎರಡು ಪ್ರಕರಣಗಳನ್ನು ಮುಂದಿಟ್ಟು ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಪ್ರತಿಕ್ರಿಯೆಯನ್ನು ನೆಟ್ಟಿಗರು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search