• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

“ಎಮರ್ಜೆನ್ಸಿ” ಗಾಂಧಿ ಕುಟುಂಬ ನೋಡುತ್ತಾ ಎಂದು ಕೇಳಿದ್ದಕ್ಕೆ ಕಂಗನಾಳ ಉತ್ತರ?!

Tulunadu News Posted On January 8, 2025


  • Share On Facebook
  • Tweet It

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ, ನಟಿ ಕಂಗನಾ ರಾಣಾವತ್ ಅವರು ತಮ್ಮ ಮೊದಲ ನಿರ್ದೇಶನದ ಹೊಸ ಚಿತ್ರ ಎಮರ್ಜೆನ್ಸಿಯ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಹಂತದಲ್ಲಿ ವಿವಿಧ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಚಿತ್ರದ ಪ್ರೊಮೊಶನ್ ನಡೆಸುತ್ತಿದ್ದಾರೆ. ಪತ್ರಕರ್ತರಿಗೂ ಆಗಾಗ ಮುಖಾಮುಖಿಯಾಗುತ್ತಿದ್ದಾರೆ.

ಈ ಕುರಿತು ಅವರಿಗೆ ಸುದ್ದಿಗೋಷ್ಟಿಯಲ್ಲಿ ವರದಿಗಾರರೊಬ್ಬರು ಪ್ರಶ್ನೆ ಕೇಳಿದಾಗ ರಾಣಾವತ್ ಉತ್ತರ ನೇರವಾಗಿತ್ತು. ನೀವು ಗಾಂಧಿ ಕುಟುಂಬಕ್ಕೆ ಈ ಸಿನೆಮಾ ತೋರಿಸುತ್ತೀರಾ ಎಂದು ಕೇಳಿದ್ದಕ್ಕೆ ನಾನು ಸದನದಲ್ಲಿ ಪ್ರಿಯಾಂಕಾ ಸಿಕ್ಕಿದ್ದಾಗ ಅವರಿಗೆ ನೀವು ಈ ಸಿನೆಮಾವನ್ನು ನೋಡಲೇಬೇಕು ಎಂದು ಹೇಳಿದ್ದೆ. ಅದಕ್ಕೆ ಪ್ರಿಯಾಂಕಾ ” ಓಕೆ, ಮೇ ಬಿ” ಎಂದು ಉತ್ತರ ನೀಡಿದರು ಎಂದು ಕಂಗನಾ ಹೇಳಿದ್ದಾರೆ. ಸಿನೆಮಾದಲ್ಲಿ ತಮ್ಮ ನಟನೆ ಮತ್ತು ಇಂದಿರಾ ಗಾಂಧಿಯವರ ಶೈಲಿಯ ಹೇರ್ ಸ್ಟೈಲ್ ನೋಡಿ ಪ್ರಿಯಾಂಕಾ ಅವರು ಖುಷಿಗೊಂಡಿದ್ದಾರೆ ಎಂದು ಕಂಗನಾ ಹೇಳಿದ್ದಾರೆ. ಒಂದು ವೇಳೆ ಗಾಂಧಿ ಕುಟುಂಬ ಒಂದು ಚೂರಾದರೂ ಎಮರ್ಜೆನ್ಸಿ ಬಗ್ಗೆ ವಾಸ್ತವಾಂಶ ಅರಿಯಲು ಇಷ್ಟಪಟ್ಟರೆ ಈ ಸಿನೆಮಾ ನೋಡಬಹುದು ಎಂದು ಕಂಗನಾ ಹೇಳಿದ್ದಾರೆ.

ಇನ್ನು ಇಂತಹ ಸಿನೆಮಾ ಮಾಡುವಾಗ ತುಂಬಾ ಮುಂಜಾಗ್ರತೆಗಳನ್ನು ತೆಗೆದುಕೊಳ್ಳಬೇಕಾಗಿತ್ತು ಎಂದು ಹೇಳಿದ ಕಂಗನಾ ಈ ಹಿಂದೆ ಕಿಸ್ಸಾ ಕುರ್ಚಿ ಕಾ ಸಿನೆಮಾ ಮಾಡಿದ ನಿರ್ದೇಶಕರಿಗೆ ಯಾವೆಲ್ಲಾ ರೀತಿಯ ಮಾನಸಿಕ ಕಿರುಕುಳ ನೀಡಲಾಗಿತ್ತು ಎಂದರೆ ಕೊನೆಗೆ ಅದನ್ನು ತಡೆಯಲಾರದೇ ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಕಂಗನಾ ಹೇಳಿದರು. ಆದರೆ ಈಗ ದೇಶದಲ್ಲಿ ವಾಕ್ ಸ್ವಾತಂತ್ರ್ಯ ಇದೆ. ಆದ್ದರಿಂದ ಇಂತಹ ಸಿನೆಮಾ ಮಾಡುವ ಧೈರ್ಯ ಬಂದಿದೆ. ಇಲ್ಲದಿದ್ದರೆ ಇಲ್ಲಿಯ ತನಕ ಯಾರಿಗೂ ನೇರವಾಗಿ ಇಂದಿರಾ ಗಾಂಧಿಯವರ ಮೇಲೆ ಸಿನೆಮಾ ಮಾಡಲು ಧೈರ್ಯವೇ ಇರಲಿಲ್ಲ. ನಾವು ಈ ಸಿನೆಮಾ ಬೇರೆ ಬೇರೆ ಕ್ಷೇತ್ರದ ತಜ್ಞರಿಗೆ ತೋರಿಸಿದ್ದೇವೆ. ಅವರು ನೋಡಿದ ನಂತರ ಸೆನ್ಸಾರ್ ಬೋರ್ಡ್ ನಲ್ಲಿಯೂ ಇದಕ್ಕೆ ಕೆಲವು ಸಲಹೆಗಳು ಬಂದವು. ನಂತರವೇ ಈ ಸಿನೆಮಾವನ್ನು ಜಗತ್ತಿಗೆ ತೋರಿಸಲು ನಾವು ಮುಂದೆ ಬಂದಿದ್ದೇವೆ ಎಂದು ಕಂಗನಾ ಹೇಳಿದರು.

ಈ ಬಗ್ಗೆ ಮಾತನಾಡಿದ ಖ್ಯಾತ ನಟ ಅನುಪಮ್ ಖೇರ್ ಮಾತನಾಡಿ ” ದೇಶದಲ್ಲಿ ಎಮರ್ಜೆನ್ಸಿ ಹೇರುವಾಗ ನಾವು ಡ್ರಾಮಾ ಸ್ಕೂಲ್ ನಲ್ಲಿದ್ದೇವು. ಈ ಸಿನೆಮಾದ ಬಗ್ಗೆ ಕಂಗನಾ ಸಾಕಷ್ಟು ತಯಾರಿ ನಡೆಸಿದ್ದಾರೆ. ಅದಕ್ಕಾಗಿ ಅವರ ಪರಿಶ್ರಮವನ್ನು ಮೆಚ್ಚಬೇಕಾಗಿದೆ” ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search