• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯ ಸರಕಾರ 350 ಕೋಟಿ ಬಾಕಿ ಹಿನ್ನಲೆ; ದಯಾಮರಣ ನೀಡಲು ಮನವಿ!

Tulunadu News Posted On January 14, 2025
0


0
Shares
  • Share On Facebook
  • Tweet It

ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದ ಗುತ್ತಿಗೆದಾರ ಮೊಹಮ್ಮದ್ ಮಜಹರ್ ಅವರು, ತಾವು ಮಾಡಿದ ಕಾಮಗಾರಿಗೆ ಹಣ ಬಿಡುಗಡೆ ಆಗದ ಹಿನ್ನಲೆ ಮುಖ್ಯಮಂತ್ರಿಗೆ ಹಣ ಬಿಡುಗಡೆ ಕೋರಿ ಪತ್ರ ಬರೆದಿದ್ದರು. ಮಾಡಿದ ಕಾಮಗಾರಿಗೆ ನಗರಸಭೆಯವರು ಹಣ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಿದ್ದರು. ಇದರ ನಂತರ ಈಗ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್ ನಿಂದ ದಯಾಮರಣ ಪತ್ರ ಬರೆಯಲಾಗಿದೆ.
ರಾಜ್ಯ ಸರಕಾರದಿಂದ ಸುಮಾರು 350 ಕೋಟಿ ರೂ ಬಿಲ್ ಬಾಕಿ ಉಳಿಸಿಕೊಳ್ಳಲಾಗಿದ್ದು, ಕಳೆದ ಒಂದು ವರ್ಷದಿಂದ ಸರಕಾರಕ್ಕೆ ಮನವಿ ಮಾಡಿದ್ದರೂ, ಬಿಡುಗಡೆ ಮಾಡದ ಹಿನ್ನಲೆಯಲ್ಲಿ ಇದೀಗ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್ ಅಧ್ಯಕ್ಷ ವಸಂತ ಬಂಗೇರಾ ಅವರು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಕಳೆದ ವರ್ಷ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ವೆಂಡರ್ಸ್ ಪ್ರತಿಭಟನೆ ನಡೆಸಿದ್ದರು. ಅನೇಕ ವೆಂಡರ್ಸ್ ಕಷ್ಟದಲ್ಲಿದ್ದಾರೆ. ಇದನ್ನೇ ಆಶ್ರಯಿಸಿಕೊಂಡಿರುವ ಸಾಕಷ್ಟು ಜನ ಈಗಾಗಲೇ ಕೆಲಸ ಕಳೆದುಕೊಂಡಿದ್ದಾರೆ. ಯಾರಾದರೂ ಅಕ್ರಮ ಮಾಡಿದ್ದರೆ ಅವರ ವಿರುದ್ಧ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಲಿ. ಅದನ್ನು ಬಿಟ್ಟು ಎಲ್ಲರ ಬಿಲ್ ಪಾವತಿ ಮಾಡದಿರುವುದು ಸರಿಯಲ್ಲ ಎಂದು ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್ ಅಧ್ಯಕ್ಷ ವಸಂತ ಬಂಗೇರಾ ಪತ್ರ ಬರೆದಿದ್ದಾರೆ.
ರಾಜ್ಯ ಸರಕಾರದಲ್ಲಿ ಹಣದ ಕೊರತೆ ಇದೆಯೋ ಅಥವಾ ಗುತ್ತಿಗೆದಾರರು ಅಕ್ರಮ ಮಾಡಿದ್ದಾರೆ ಎಂದು ಹಣ ಬಿಡುಗಡೆಗೆ ಮೀನಾಮೇಶ ಎಣಿಸಲಾಗುತ್ತಿದೆಯೋ ಅಥವಾ ಇಲ್ಲಿ ಗುತ್ತಿಗೆದಾರರನ್ನು ಸತಾಯಿಸುವ ಉದ್ದೇಶ ಇದೆಯೋ ಎನ್ನುವುದರ ಬಗ್ಗೆ ಯಾವುದೋ ಒಂದು ನಿರ್ಧಾರಕ್ಕೆ ಬರಲು ಯಾರಿಗೂ ಸಾಧ್ಯವಾಗುತ್ತಿಲ್ಲ. ಒಟ್ಟಿನಲ್ಲಿ ಇದರಿಂದ ನ್ಯಾಯಯುತವಾಗಿ ಕಾಮಗಾರಿಗಳನ್ನು ಮಾಡುವವರು ಕೂಡ ಸಂಕಷ್ಟದಲ್ಲಿ ಬಿದ್ದಿದ್ದಾರೆ ಎನ್ನುವುದು ನೂರಕ್ಕೆ ನೂರರಷ್ಟು ನಿಜ.
0
Shares
  • Share On Facebook
  • Tweet It




Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search