• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೇರಳದ ಬಯೋ ವೇಸ್ಟ್ ಮಂಗಳೂರಿನ ಚರಂಡಿಗಳಲ್ಲಿ..ಕಾದಿದೆ ಅಪಾಯ!

Tulunadu News Posted On February 24, 2025
0


0
Shares
  • Share On Facebook
  • Tweet It

ಮಂಗಳೂರು ನಗರ ಹೊರವಲಯದಲ್ಲಿರುವ ತಲಪಾಡಿ ಕೇರಳದ ಗಡಿಪ್ರದೇಶವಾಗಿದೆ. ಕೇರಳದ ಮಂಜೇಶ್ವರ, ಕಾಸರಗೋಡು ಸಹಿತ ಅಕ್ಕಪಕ್ಕದ ಜಿಲ್ಲೆಗಳ ಜನರು ಉದ್ಯೋಗ, ವ್ಯವಹಾರ, ಶಿಕ್ಷಣ, ವೈದ್ಯಕೀಯ ಸಹಿತ ವಿವಿಧ ಕಾರಣಗಳಿಗಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ನಿತ್ಯ ಸಾವಿರಾರು ಜನ ಉಭಯ ರಾಜ್ಯಗಳಿಗೆ ಹೋಗಿ ಬರುತ್ತಾರೆ. ಇದಿಷ್ಟೇ ಆಗಿದ್ದರೆ ಅದರಲ್ಲಿ ಅಂತಹ ತೊಂದರೆ ಏನೂ ಇರಲಿಲ್ಲ. ಆದರೆ ಕೇರಳ ನಮ್ಮ ಮಂಗಳೂರನ್ನು ಎಷ್ಟರಮಟ್ಟಿಗೆ ಗ್ರಾಟೆಂಡ್ ಆಗಿ ತೆಗೆದುಕೊಂಡಿದೆ ಎಂದರೆ ಅವರು ಶುದ್ಧ ಪರಿಸರದಲ್ಲಿ ಜೀವಿಸಿದರೆ ಸಾಕು, ಮಂಗಳೂರಿನವರು ಹಾಳಾಗಿ ಹೋಗಲಿ ಎಂದು ಧೃಡವಾಗಿ ನಿಶ್ಚಯಿಸಿದ್ದಾರೆ. ಇಲ್ಲಿಯ ತನಕ ಅಲ್ಲಿನ ತ್ಯಾಜ್ಯವನ್ನು ತಂದು ಸೈಲೆಂಟಾಗಿ ಮಂಗಳೂರಿನ ಚರಂಡಿಗಳಲ್ಲಿ ಹಾಕಿ ಹೋಗುತ್ತಿದ್ದವರು ಈಗ ಅಲ್ಲಿನ ಬಯೋ ತ್ಯಾಜ್ಯವಾಗಿರುವ ಆಸ್ಪತ್ರೆಗಳ ಗಲೀಜನ್ನು ಕೂಡ ಇಲ್ಲಿ ತಂದು ಸುರಿಯುತ್ತಿದ್ದಾರೆ. ಇದನ್ನು ಅವರು ಎಷ್ಟು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ ಎಂದರೆ ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಎರಡು ಟ್ಯಾಂಕರ್ ಗಳ ಮೂಲಕ ತಂದು ಅದನ್ನು ಇಲ್ಲಿ ಸುರಿದು ಹೋಗುತ್ತಿದ್ದಾರೆ.

ಕೇರಳದವರಿಗೆ ಮಂಗಳೂರು ಮಹಾನಗರ ಪಾಲಿಕೆಯ ಗಾಡಿ ಹೇಗೆ ಸಿಗುತ್ತದೆ? ಇದರ ಅರ್ಥ ಮಂಗಳೂರು ಪಾಲಿಕೆಯ ಕೆಲವು ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಅವರ ಸಹಕಾರವಿಲ್ಲದಿದ್ದರೆ ಏಕಾಏಕಿ ತ್ಯಾಜ್ಯ ಮಂಗಳೂರಿನ ಒಳಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಇನ್ನು ಕೇರಳಿಗರು ತಮ್ಮ ರಾಜ್ಯದ ವಾಹನಗಳಲ್ಲಿ ತಂದು ಇಲ್ಲಿ ಸುರಿಯಲು ಹೋದರೆ ಸಿಕ್ಕಿಬೀಳುತ್ತೇವೆ ಎಂದು ಗೊತ್ತಿರುವುದರಿಂದ ಇಲ್ಲಿನವರನ್ನೇ ಸೆಟ್ ಮಾಡಿಕೊಂಡು ತಮ್ಮ ಕೆಲಸಗಳನ್ನು ಮುಗಿಸುತ್ತಿದ್ದಾರೆ.

ಕೇರಳದವರು ಬಯೋ ಮೆಡಿಕಲ್ ವೇಸ್ಟ್ ತಂದು ಮಂಗಳೂರಿನ ಸಿಕ್ಕ ಸಿಕ್ಕ ಹಳ್ಳಕ್ಕೆ ಬಿಸಾಕಿ ಹೋಗುವುದರಿಂದ ಆ ತ್ಯಾಜ್ಯ ಇಲ್ಲಿನ ಪರಿಸರದಲ್ಲಿ ರೋಗ ರುಜಿನಗಳ ಉಗಮಕ್ಕೆ ಕಾರಣವಾಗುತ್ತದೆ. ಅದರೊಂದಿಗೆ ಜಲಚರಗಳಿಗೆ ಮತ್ತು ಜೀವರಾಶಿಗಳ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಸದ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಪಾಲಿಕೆಯ ಸಭೆ ನಡೆಸಿ, ತಡೆಗಟ್ಟಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸದ್ಯ ಕೆಲವು ದಿನಗಳ ತನಕ ಕೇರಳದಿಂದ ತ್ಯಾಜ್ಯವಾಗಲೀ, ಬಯೋ ವೇಸ್ಟ್ ಆಗಲಿ ಬರುವುದು ನಿಂತುಹೋಗಬಹುದು. ಆದರೆ ವಿಷಯ ಒಮ್ಮೆ ತಣ್ಣಗಾದ ಮೇಲೆ ಇದು ಮತ್ತೆ ಆರಂಭವಾಗುತ್ತದೆ. ಹಾಗಾದರೆ ಕೇರಳದವರ ಈ ಅಕ್ರಮ ಕಾರ್ಯಗಳಿಗೆ ಶಾಶ್ವತ ತಡೆ ಇಲ್ವಾ? ಮಂಗಳೂರಿನವರು ಏನಾದರೂ ಆಗಿ ಹಾಳಾಗಿ ಹೋಗಲಿ, ನಾವು ಚೆನ್ನಾಗಿರಬೇಕು ಎನ್ನುವ ಕೇರಳದವರ ಧೋರಣೆಗೆ ಅಂಕುಶ ಹಾಕುವುದು ಯಾರು? ಹೇಗೆ?

 

 

 

 

 

 

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search