• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಛಾವಾ ಚಲನಚಿತ್ರಕ್ಕೆ 100% ತೆರಿಗೆ ವಿನಾಯಿತಿ ಘೋಷಿಸಿದ ಗೋವಾ, ಮಧ್ಯಪ್ರದೇಶ ಸರಕಾರ!

Tulunadu News Posted On February 25, 2025


  • Share On Facebook
  • Tweet It

ಮೊಗಲ್ ದೊರೆಗಳ ಅಟ್ಟಹಾಸ ಅಡಗಿಸಿದ್ದ ಛತ್ರಪತಿ ಶಿವಾಜಿ ಮಹಾರಾಜಾರ ಮಗ ಛತ್ರಪತಿ ಸಾಂಬಾಜಿ ಮಹಾರಾಜರ ಜೀವನಚರಿತ್ರೆಯ ಕಥೆಯನ್ನು ಹೊಂದಿರುವ ಛಾವಾ ಹಿಂದಿ ಅವತರಣಿಕೆಯ ಸಿನೆಮಾಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಮ್ಮ ರಾಜ್ಯದಲ್ಲಿ ನೂರು ಶೇಕಡಾ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ದೇಶದ ಚರಿತ್ರೆಯ ಮಹಾಪುರುಷರಾಗಿ ಒಬ್ಬರಾಗಿದ್ದ ಸಾಂಬಾಜಿ ಮಹಾರಾಜರ ಬದುಕೇ ದೇವರು, ದೇಶ ಮತ್ತು ಧರ್ಮಕ್ಕಾಗಿ ಸಮರ್ಪಿತವಾಗಿತ್ತು. ಅದು ತೆರೆಯ ಮೇಲೆ ಅದ್ಭುತವಾಗಿ ಚಿತ್ರಿಕರಿಸಲ್ಪಟ್ಟಿದೆ. ಇತಿಹಾಸದ ಎರಡನೇ ಛತ್ರಪತಿ ಬಿರುದಾಂಕಿತ ಸಾಂಬಾಜಿ ಮಹಾರಾಜರು ಹಿಂದವಿ ಸ್ವರಾಜ್ಯದ ರಕ್ಷಣೆಗಾಗಿ ಮೊಘಲರ, ಪೋರ್ಚುಗೀಸರ ವಿರುದ್ಧ ಕೆಚ್ಚೆದೆಯ ಹೋರಾಟವನ್ನು ಮಾಡಿದ್ದರು. ಅಂತಹ ಮಹಾನ್ ನಾಯಕರ ಜೀವನ ಚರಿತ್ರೆಯನ್ನು ಎಲ್ಲರೂ ನೋಡಬೇಕು ಎನ್ನುವ ಕಾರಣಕ್ಕೆ ಛಾವಾ ಚಿತ್ರಕ್ಕೆ ಏನೂ ತೆರಿಗೆ ಇರಲ್ಲ ಎಂದು ಪ್ರಮೋದ್ ಸಾವಂತ್ ತಮ್ಮ ಏಕ್ಸ್ ಖಾತೆಯಲ್ಲಿ ಘೋಷಿಸಿದ್ದಾರೆ.

ಕೆಲವೇ ದಿನಗಳ ಹಿಂದೆ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ಅವರು ಕೂಡ ಇದೇ ನಡೆಯನ್ನು ಆರಂಭಿಸಿ ಭಾರತೀಯ ಜನತಾ ಪಾರ್ಟಿಯ ಆಡಳಿತವಿರುವ ಉಳಿದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರೇರಣೆ ನೀಡಿದ್ದರು. ಈ ಸಿನೆಮಾ ಈಗಾಗಲೇ 200 ಕೋಟಿ ರೂ ಸಂಗ್ರಹಿಸಿ ಮುನ್ನಡೆಯುತ್ತಿದೆ. ಈ ಸಿನೆಮಾದ ನಾಯಕ ನಟರಾಗಿ ವಿಕ್ಕಿ ಕೌಶಲ್, ಪ್ರಮುಖ ಪಾತ್ರಗಳಲ್ಲಿ ರಶ್ಮಿಕಾ ಮಂದಣ್ಣ, ಅಕ್ಷಯ್ ಖನ್ನಾ ನಟಿಸಿದ್ದರೆ, ನಿರ್ದೇಶನ ಲಕ್ಷ್ಮಣ್ ಉಟ್ಟೇಕರ್ ಮಾಡಿದ್ದಾರೆ. ಸಿನೆಮಾವನ್ನು ಮಡ್ಡೋಕ್ ಫಿಲಂ ಸಂಸ್ಥೆಯ ದಿನೇಶ್ ವಿಜನ್ ನಿರ್ಮಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
Tulunadu News May 30, 2025
ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
Tulunadu News May 30, 2025
Leave A Reply

  • Recent Posts

    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
    • ಕೋವಿಡ್ ಏರಿಕೆ: ಮಕ್ಕಳ, ವೃದ್ಧರ, ಗರ್ಭೀಣಿಯರ ಬಗ್ಗೆ ಸರಕಾರ ಹೇಳಿದ್ದೇನು?
  • Popular Posts

    • 1
      ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • 2
      ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • 3
      ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • 4
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • 5
      ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search