• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಧುಮೇಹಿಗಳಿಗೆ ಸಿಹಿ ಸುದ್ದಿ! ಇನ್ನು ಮಾತ್ರೆಗೆ ಅಷ್ಟು ಹಣ ಕೊಡಬೇಕಿಲ್ಲ!

Tulunadu News Posted On March 14, 2025
0


0
Shares
  • Share On Facebook
  • Tweet It

ಭಾರತವನ್ನು ಮಧುಮೇಹಿಗಳ ತವರೂರು ಎನ್ನುವ ನೋವಿನ ಹಣೆಪಟ್ಟಿ ಭಾರತೀಯರಿಗೆ ಸಿಕ್ಕಿದೆ. ಡಯಾಬೀಟಿಸ್ ಕಾಯಿಲೆ ಬರದಿರಲಿ ಎಂದು ಬೇಡುವವರಿಗೇನೂ ತೊಂದರೆ ಇಲ್ಲ. ಬಹುತೇಕರು ಈ ಕಾಯಿಲೆಯನ್ನು ನಿಯಂತ್ರಣದಲ್ಲಿಡಲು ಮಾತ್ರೆಗಳನ್ನು ತಿನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ. ಮಧುಮೇಹಿಗಳು ಪ್ರಮುಖವಾಗಿ ಬಳಸುವ ಎಂಪಾಗ್ಲಿಫ್ಲೋಜಿನ್ ಮಾತ್ರೆಗೆ ಈ ಮೊದಲು 60 ರೂಪಾಯಿ ಇತ್ತು. ಆದರೆ ಎಂಪಾಗ್ಲಿಪ್ಲೋಜಿನ್ ಔಷಧದ ತಯಾರಿಕಾ ಕಂಪೆನಿಯಾದ ಬೋರಿಂಜರ್ ಇಂಗ್ಲ್ ಹೈಂ (ಬಿಐ) ಹೊಂದಿದ ಪೇಟೆಂಟ್ ಅವಧಿ ಮಾರ್ಚ್ ಗೆ ಮುಕ್ತಾಯವಾಗಿದೆ.

ಹೀಗಾಗಿ ಹಲವು ಕಂಪೆನಿಗಳು ಇದರ ಜನೆರಿಕ್ ಮಾದರಿಯ ಔಷಧಗಳನ್ನು ತಯಾರಿಸಿ ಸಾರ್ವಜನಿಕರಿಗೆ ಬಿಡುಗಡೆ ಮಾಡಿವೆ. ಇದರ ಪರಿಣಾಮ ಔಷಧಗಳ ಮುಕ್ತ ಮಾರುಕಟ್ಟೆಯಲ್ಲಿ ಸ್ಪರ್ಧೆ ಏರ್ಪಟ್ಟು ದರ ಪಾತಾಳ ತಲುಪಿದೆ. ಪ್ರಸ್ತುತ ಒಂದು ಮಾತ್ರೆಗೆ ಐದು ರೂಪಾಯಿಯಿಂದ ದರ ಆರಂಭವಾಗಿದೆ. ಇದರಿಂದ ಭಾರತದ ಕೋಟ್ಯಾಂತರ ನಾಗರಿಕರಿಗೆ ಉಪಯೋಗವಾಗಲಿದೆ. ಇಲ್ಲಿಯ ತನಕ ಪಾಪದವರ ದುಡಿಯುವ ಗಮನಾರ್ಹ ಮೊತ್ತ ಈ ಮಾತ್ರೆಗಳಿಗೆ ತಗಲುತ್ತಿತ್ತು. ಇನ್ನು ಅದು ಉಳಿತಾಯವಾಗಲಿದೆ. ದೆಹಲಿ ಮೂಲದ ಕಂಪೆನಿ ಮ್ಯಾನ್ ಕ್ಲೈಂಡ್ ಇದರ ಬೆಲೆಯನ್ನು ಐದೂವರೆ ರೂಪಾಯಿಯಿಂದ ಆರಂಭಿಸಿದ್ದರೆ ಮುಂಬೈ ಮೂಲದ ಗ್ಲೆನ್ ಮಾರ್ಕ್ 11 ರೂಪಾಯಿಯಿಂದ ಆರಂಭಿಸಿದೆ. ಇನ್ನು ಆಲ್ಕೆಂ ಕಂಪೆನನಿಯು ಮೂಲ ದರಕ್ಕಿಂತ 80 ಶೇಕಡಾ ಕಡಿಮೆ ದರವನ್ನು ನಿಗದಿಪಡಿಸಿದೆ.

ಒಟ್ಟಿನಲ್ಲಿ ವಿಷಯ ಚಿಕ್ಕದಿದ್ದರೂ ಇದರ ಪ್ರಯೋಜನ ಮಾತ್ರ ದೊಡ್ಡದು. ಒಂದು ಸಂಸ್ಥೆಗೆ ಪೇಟೆಂಟ್ ಇದ್ದರೆ ಅದರ ದರ ಹೇಗಿರುತ್ತದೆ ಮತ್ತು ಪೇಟೆಂಟ್ ಇಲ್ಲದಿದ್ದರೆ ಬಡವರಿಗೆ ಎಷ್ಟು ಲಾಭವಾಗುತ್ತದೆ ಎನ್ನುವುದು ಇದರಿಂದ ಗೊತ್ತಾಗುತ್ತದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search