• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಧುಮೇಹಿಗಳಿಗೆ ಸಿಹಿ ಸುದ್ದಿ! ಇನ್ನು ಮಾತ್ರೆಗೆ ಅಷ್ಟು ಹಣ ಕೊಡಬೇಕಿಲ್ಲ!

Tulunadu News Posted On March 14, 2025
0


0
Shares
  • Share On Facebook
  • Tweet It

ಭಾರತವನ್ನು ಮಧುಮೇಹಿಗಳ ತವರೂರು ಎನ್ನುವ ನೋವಿನ ಹಣೆಪಟ್ಟಿ ಭಾರತೀಯರಿಗೆ ಸಿಕ್ಕಿದೆ. ಡಯಾಬೀಟಿಸ್ ಕಾಯಿಲೆ ಬರದಿರಲಿ ಎಂದು ಬೇಡುವವರಿಗೇನೂ ತೊಂದರೆ ಇಲ್ಲ. ಬಹುತೇಕರು ಈ ಕಾಯಿಲೆಯನ್ನು ನಿಯಂತ್ರಣದಲ್ಲಿಡಲು ಮಾತ್ರೆಗಳನ್ನು ತಿನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ. ಮಧುಮೇಹಿಗಳು ಪ್ರಮುಖವಾಗಿ ಬಳಸುವ ಎಂಪಾಗ್ಲಿಫ್ಲೋಜಿನ್ ಮಾತ್ರೆಗೆ ಈ ಮೊದಲು 60 ರೂಪಾಯಿ ಇತ್ತು. ಆದರೆ ಎಂಪಾಗ್ಲಿಪ್ಲೋಜಿನ್ ಔಷಧದ ತಯಾರಿಕಾ ಕಂಪೆನಿಯಾದ ಬೋರಿಂಜರ್ ಇಂಗ್ಲ್ ಹೈಂ (ಬಿಐ) ಹೊಂದಿದ ಪೇಟೆಂಟ್ ಅವಧಿ ಮಾರ್ಚ್ ಗೆ ಮುಕ್ತಾಯವಾಗಿದೆ.

ಹೀಗಾಗಿ ಹಲವು ಕಂಪೆನಿಗಳು ಇದರ ಜನೆರಿಕ್ ಮಾದರಿಯ ಔಷಧಗಳನ್ನು ತಯಾರಿಸಿ ಸಾರ್ವಜನಿಕರಿಗೆ ಬಿಡುಗಡೆ ಮಾಡಿವೆ. ಇದರ ಪರಿಣಾಮ ಔಷಧಗಳ ಮುಕ್ತ ಮಾರುಕಟ್ಟೆಯಲ್ಲಿ ಸ್ಪರ್ಧೆ ಏರ್ಪಟ್ಟು ದರ ಪಾತಾಳ ತಲುಪಿದೆ. ಪ್ರಸ್ತುತ ಒಂದು ಮಾತ್ರೆಗೆ ಐದು ರೂಪಾಯಿಯಿಂದ ದರ ಆರಂಭವಾಗಿದೆ. ಇದರಿಂದ ಭಾರತದ ಕೋಟ್ಯಾಂತರ ನಾಗರಿಕರಿಗೆ ಉಪಯೋಗವಾಗಲಿದೆ. ಇಲ್ಲಿಯ ತನಕ ಪಾಪದವರ ದುಡಿಯುವ ಗಮನಾರ್ಹ ಮೊತ್ತ ಈ ಮಾತ್ರೆಗಳಿಗೆ ತಗಲುತ್ತಿತ್ತು. ಇನ್ನು ಅದು ಉಳಿತಾಯವಾಗಲಿದೆ. ದೆಹಲಿ ಮೂಲದ ಕಂಪೆನಿ ಮ್ಯಾನ್ ಕ್ಲೈಂಡ್ ಇದರ ಬೆಲೆಯನ್ನು ಐದೂವರೆ ರೂಪಾಯಿಯಿಂದ ಆರಂಭಿಸಿದ್ದರೆ ಮುಂಬೈ ಮೂಲದ ಗ್ಲೆನ್ ಮಾರ್ಕ್ 11 ರೂಪಾಯಿಯಿಂದ ಆರಂಭಿಸಿದೆ. ಇನ್ನು ಆಲ್ಕೆಂ ಕಂಪೆನನಿಯು ಮೂಲ ದರಕ್ಕಿಂತ 80 ಶೇಕಡಾ ಕಡಿಮೆ ದರವನ್ನು ನಿಗದಿಪಡಿಸಿದೆ.

ಒಟ್ಟಿನಲ್ಲಿ ವಿಷಯ ಚಿಕ್ಕದಿದ್ದರೂ ಇದರ ಪ್ರಯೋಜನ ಮಾತ್ರ ದೊಡ್ಡದು. ಒಂದು ಸಂಸ್ಥೆಗೆ ಪೇಟೆಂಟ್ ಇದ್ದರೆ ಅದರ ದರ ಹೇಗಿರುತ್ತದೆ ಮತ್ತು ಪೇಟೆಂಟ್ ಇಲ್ಲದಿದ್ದರೆ ಬಡವರಿಗೆ ಎಷ್ಟು ಲಾಭವಾಗುತ್ತದೆ ಎನ್ನುವುದು ಇದರಿಂದ ಗೊತ್ತಾಗುತ್ತದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search