• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಾಕ್ ನಲ್ಲಿ ಮತಾಂತರದ ಒತ್ತಡ ಹೇಗಿರುತ್ತೆ ಎಂದು ಮತ್ತೆ ಧ್ವನಿ ಎತ್ತಿದ ಕನೇರಿಯಾ!

Tulunadu News Posted On March 14, 2025


  • Share On Facebook
  • Tweet It

ಕನೇರಿಯಾ ಅವರಿಗೆ ತಮ್ಮ ವೃತ್ತಿ ಬದುಕಿನ ಕರಾಳತೆಯನ್ನು ಮರೆಯಲು ಆಗುತ್ತಿಲ್ಲ. ಸದ್ಯ ಅಮೇರಿಕಾದಲ್ಲಿ ನೆಲೆಸಿರುವ ಕನೇರಿಯಾ ಒಂದು ವೇಳೆ ಹಿಂದೂ ಅಲ್ಲದೇ ಮುಸಲೀಯರಾಗಿದ್ದರೆ ಅವರಿಗೆ ಇನ್ನಷ್ಟು ಅವಕಾಶ ಸಿಗುತ್ತಿತ್ತೇನೋ ಎನ್ನುವುದು ಅವರ ಅಭಿಪ್ರಾಯದಿಂದ ಯಾವಾಗಲೂ ಚರ್ಚೆಯಲ್ಲಿರುವ ಸಂಗತಿ. ಯಾಕೆಂದರೆ ಅವರೇ ಹೇಳುವ ಹಾಗೆ ” ಪಾಕ್ ತಂಡದಲ್ಲಿ ತಾರತಮ್ಯ ನೀತಿಯಿಂದಾಗಿ ನನಗೆ ಸಿಗಬೇಕಾದ ಗೌರವ ಸಿಕ್ಕಿರಲಿಲ್ಲ. ಧರ್ಮದ ಕಾರಣದಿಂದಾಗಿಯೇ ನನ್ನ ಕ್ರಿಕೆಟ್ ಭವಿಷ್ಯ ನಾಶಪಡಿಸಿದರು. ಅಖ್ತರ್, ಅಫ್ರಿದಿ ಸೇರಿದಂತೆ ಹಲವರು ಬಹಳ ತೊಂದರೆ ನೀಡಿದರು. ನನ್ನೊಂದಿಗೆ ಕುಳಿತು ತಿನ್ನಲು ಹಿಂಜರಿಯುತ್ತಿದ್ದರು. ಆಫ್ರಿದಿಯಂತೂ ನನ್ನನ್ನು ಬಹಳ ಬಾರಿ ಮತಾಂತರವಾಗಲು ಒತ್ತಾಯಿಸಿದ್ದ” ಎಂದು ಹೇಳಿದ್ದಾರೆ. ಕನೇರಿಯಾ 2000 ದಿಂದ 2010 ರವರೆಗೆ ಪಾಕ್ ಪರ 61 ಟೆಸ್ಟ್ ಹಾಗೂ 18 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

44 ರ ಹರೆಯದ ಕನೇರಿಯಾ ಈ ವಿಷಯವನ್ನು ಈ ಹಿಂದೆನೂ ಒಮ್ಮೆ ಹೇಳಿದಾಗ ಅವರಿಗೆ ಬೆದರಿಕೆಗಳು ಬಂದಿದ್ದವು. ಆದರೆ ತಮ್ಮ ಮಾತಿಗೆ ಬದ್ಧರಾಗಿರುವ ಕನೇರಿಯಾ ಅವರು ಯಾವ ಕಾರಣಕ್ಕೂ ಧರ್ಮ ಬಿಡುವ ಪ್ರಶ್ನೆಯೇ ಇಲ್ಲ ಎಂದು ಒತ್ತಿ ಹೇಳಿದ್ದರು. ವೃತ್ತಿಗಿಂತ ಧರ್ಮ ಮುಖ್ಯ ಎಂದು ಹೇಳುವ ಕನೇರಿಯಾ ವೃತ್ತಿ ಬೇಕಾದರೂ ತೊರೆಯುತ್ತೇನೆ. ಆದರೆ ಧರ್ಮವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದರು. ಆ ಸಂದರ್ಭದಲ್ಲಿ ಕನೇರಿಯಾ ಭಾರತಕ್ಕೆ ಬಂದು ನೆಲೆಸುತ್ತಾರೆ ಎಂದೇ ಭಾವಿಸಲಾಗಿತ್ತು. ಆದರೆ ಅವರು ಪ್ರಸ್ತುತ ಅಮೇರಿಕಾದಲ್ಲಿ ನೆಲೆಸಿದ್ದಾರೆ.

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search