• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಲ್ಟಿಪ್ಲೆಕ್ಸ್ ಟಿಕೆಟ್ ದರ ಗರಿಷ್ಟ 200 ರೂಗೆ ಫಿಕ್ಸ್ ಯಾವಾಗ?

Tulunadu News Posted On March 14, 2025
0


0
Shares
  • Share On Facebook
  • Tweet It

ರಾಜ್ಯ ಸರಕಾರವೇನೋ ಬಜೆಟಿನಲ್ಲಿ ಜನಪ್ರಿಯ ಘೋಷಣೆಗಳನ್ನು ಮಾಡುತ್ತದೆ, ಅದನ್ನು ನೋಡಿ ಜನ ಅಂದು, ಮರುದಿನ, ಹೆಚ್ಚೆಂದರೆ ವಾರ ನೆನಪಿನಲ್ಲಿಟ್ಟುಕೊಳ್ಳುತ್ತಾರೆ. ನಂತರ ಇವರ ಹಣೆಬರಹವೇ ಇಷ್ಟು ಎಂದು ಅದನ್ನು ಪಕ್ಕಕ್ಕೆ ಇಟ್ಟು ಮರೆತುಬಿಡುತ್ತಾರೆ. ಮಲ್ಟಿಫ್ಲೆಕ್ಸ್ ನ ವಿಷಯದಲ್ಲಿಯೂ ಹೀಗೆ ಆಗಬಾರದು ಎಂದಾದರೆ ಬಜೆಟಿನಲ್ಲಿ ಘೋಷಣೆ ಮಾಡಿದ್ದನ್ನು ಸರಕಾರ ಶೀಘ್ರ ಈಡೇರಿಕೆಗೆ ಇಚ್ಚಾಶಕ್ತಿ ತೋರಿಸಬೇಕು.

ಮಲ್ಟಿಫ್ಲೆಕ್ಸ್ ನಲ್ಲಿ ಆರಾಮ ಆಸೀನದಲ್ಲಿ ಕುಳಿತು ತಣ್ಣನೆಯ ವಾತಾವರಣದಲ್ಲಿ ಸಿನೆಮಾ ನೋಡಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ಆದರೆ ಮಲ್ಟಿಫ್ಲೆಕ್ಸ್ ಟಿಕೆಟ್ ದರ ಮಧ್ಯಮ ವರ್ಗದವರ ಕೈಗೆ ಎಟಕುವುದೇ ಕಷ್ಟವಾಗಿತ್ತು. ಒಂದೊಂದು ಸಿನೆಮಾದ ಟಿಕೆಟ್ ದರ ನೋಡಿದರೆ ಸಾಮಾನ್ಯ ಜನ ಮಲ್ಟಿಫ್ಲೆಕ್ಸ್ ನಲ್ಲಿ ಸಿನೆಮಾ ನೋಡುವ ಆಸೆಯನ್ನೇ ಕೈಬಿಡುತ್ತಿದ್ದರು. ಆದರೆ ಇಲ್ಲಿನ ಜನರ ಹಣ ಕೊಳ್ಳೆ ಹೊಡೆದು ಪರಭಾಷಿಗರು ಬೆಳೆಯುವುದಕ್ಕೆ ಕಡಿವಾಣ ಹಾಕಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರಕಾರ ಬಜೆಟಿನಲ್ಲಿ ಟಿಕೆಟ್ ದರ ಗರಿಷ್ಟ 200 ರೂ ಮೀರುವಂತಿಲ್ಲ ಎಂದು ಘೋಷಿಸಿದೆ. ಆದರೆ ಘೋಷಿಸಿದ ಕೂಡಲೇ ಅದು ಜಾರಿಗೆ ಬರುವುದಿಲ್ಲ.

ಅದನ್ನು ಕ್ಯಾಬಿನೆಟ್ ನಲ್ಲಿ ಮಂಡಿಸಿ ಅಲ್ಲಿ ಮಂಜೂರಾತಿ ಸಿಕ್ಕಿದ ನಂತರ ಸಂಬಂಧಪಟ್ಟ ಇಲಾಖೆಯು ಆ ಯೋಜನೆಯ ಅನುಷ್ಠಾನಕ್ಕೆ ಬೇಕಾದ ನಿಯಮಗಳನ್ನು ರೂಪಿಸಬೇಕಾಗುತ್ತದೆ. ಈ ಪ್ರಕ್ರಿಯೆ ಮುಗಿದ ನಂತರ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸುತ್ತದೆ. ನಂತರ ಇದು ನಿಯಮವಾಗಿ ಜಾರಿಗೆ ಬರುತ್ತದೆ. ಈ ಅಧಿಸೂಚನೆಯ ಬಳಿಕ ಯಾರಾದರೂ ನ್ಯಾಯಾಲಯಕ್ಕೆ ಹೋದರೆ ಆಗ ಪ್ರಕ್ರಿಯೆಗೆ ತಡೆ ಬಿದ್ದರೂ ಆಶ್ಚರ್ಯವಿಲ್ಲ.
ಕೆಲವು ನಿರ್ಮಾಪಕರು ನಮ್ಮ ಸಿನೆಮಾಗೆ ದೊಡ್ಡ ಬಜೆಟ್ ತಗುಲಿದೆ. ಹಾಗಿರುವಾಗ ನಾವು ಕಡಿಮೆ ರೇಟ್ ಇಟ್ಟರೆ ಅಸಲು ಬರುವುದಿಲ್ಲ ಎಂದು ಹೇಳುತ್ತಾರೆ. ಆದರೆ ಅಂತವರ ವಾದದಲ್ಲಿ ಹುರುಳಿರುವುದಿಲ್ಲ. ಯಾಕೆಂದರೆ ಅಂತಹ ಸಿನೆಮಾಗಳಿಗೆ ಕಡಿಮೆ ದರ ಇದ್ದಲ್ಲಿ ಪ್ರೇಕ್ಷಕರ ಸಂಖ್ಯೆ ಐದು ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ. ಆಗ ಖಂಡಿತವಾಗಿ ಲಾಭ ಬರುತ್ತದೆ. ಆದರೆ ಸಿನೆಮಾದ ಮೇಲೆ ನಂಬಿಕೆ ಇಲ್ಲದೇ ಮೊದಲ ವಾರ ಸಿಕ್ಕಿದ್ದನ್ನು ಬಾಚುವ ಐಡಿಯಾದೊಂದಿಗೆ ಸಿನೆಮಾ ಮಾಡುವ ನಿರ್ಮಾಪಕರಿಗೆ ಸರಕಾರದ ನಿರ್ಧಾರ ಕಸಿವಿಸಿ ಉಂಟುಮಾಡುತ್ತಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search