• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶಿಯಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಗಂಗಾಸ್ನಾನ

Tulunadu News Posted On March 15, 2025
0


0
Shares
  • Share On Facebook
  • Tweet It

ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಕಾಶಿಮಠದ ಮೂಲಮಠದಲ್ಲಿ ಮೊಕ್ಕಾಂನಲ್ಲಿರುವ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಮಠದ ಆರಾಧ್ಯ ದೇವರಾಗಿರುವ ಶ್ರೀ ವೇದವ್ಯಾಸ ದೇವರ ಮೂರ್ತಿಯನ್ನು ಹೊತ್ತು ಗಂಗಾಸ್ನಾನವನ್ನು ಮಾಡಿದರು.

ವಾರಣಾಸಿಯಲ್ಲಿರುವ ಮೂಲಮಠದಲ್ಲಿ ವೃಂದಾವನಸ್ಥರಾಗಿರುವ ಕಾಶೀಮಠದ ಗುರುಪರಂಪರೆಯ ಮೂರನೇ ಯತಿ ಶ್ರೀಮದ್ ಉಪೇಂದ್ರ ತೀರ್ಥ ಸ್ವಾಮೀಜಿಯವರ 350 ಪುಣ್ಯತಿಥಿ ಹಾಗೂ ಐದನೇ ಯತಿ ಶ್ರೀಮದ್ ರಾಘವೇಂದ್ರ ತೀರ್ಥ ಸ್ವಾಮೀಜಿಯವರ 300 ನೇ ಪುಣ್ಯತಿಥಿ ಆಚರಣೆಯ ಅಂಗವಾಗಿ ಮೂಲಮಠಕ್ಕೆ ಚಿತ್ತೈಸಿರುವ ಶ್ರೀಗಳು ಮಠದ ದೇವರಿಗೆ ಪೂಜೆಯನ್ನು ಸಲ್ಲಿಸಿ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಭಕ್ತರನ್ನು ಅನುಗ್ರಹಿಸಿದರು.

ಕಾಶಿಯ ಬ್ರಹ್ಮಘಾಟ್ ನಲ್ಲಿ ಕಾಶಿಮಠದ ಮೂಲಮಠ ಗಂಗಾನದಿಯ ದಡದಲ್ಲಿದ್ದು, ಇಲ್ಲಿ ಮೊಕ್ಕಾ ಮಾಡುವ ಕಾಶೀಮಠಾಧೀಶರು ಮಠದ ದೇವರ ಸಹಿತ ಗಂಗಾಸ್ನಾನ ಮಾಡುವ ಸಂಪ್ರದಾಯ ಅನಾದಿಕಾಲದಿಂದ ಜಾರಿಯಲ್ಲಿದೆ.

ಇಂತಹ ಪುಣ್ಯ ಸಂದರ್ಭದಲ್ಲಿ ಶ್ರೀಗಳೊಂದಿಗೆ ಗುಜರಾತ್ ಐಎಎಸ್ ಅಧಿಕಾರಿ ಡಾ. ವಿನೋದ್ ರಾವ್, ಮುಂಬೈ ಜಿಎಸ್ ಬಿ ಸೇವಾ ಮಂಡಲದ ಪ್ರಮುಖರಾದ ದೀಪಕ್ ಭಾಸ್ಕರ್ ಶೆಣೈ, ಮಂಗಳೂರು ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಮುಖಂಡರಾದ ನಿತಿನ್ ಪ್ರಭು, ಜಯಂತ ಪ್ರಭು, ರಾಜೀವ್ ವಾದ್ಯಾರ್, ಮನೋಹರ್ ನಾಯಕ್, ಚೆಂಪಿ ಉಮೇಶ್ ಭಟ್, ವೈದಿಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search