• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶಿಯಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಗಂಗಾಸ್ನಾನ

Tulunadu News Posted On March 15, 2025
0


0
Shares
  • Share On Facebook
  • Tweet It

ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಕಾಶಿಮಠದ ಮೂಲಮಠದಲ್ಲಿ ಮೊಕ್ಕಾಂನಲ್ಲಿರುವ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಮಠದ ಆರಾಧ್ಯ ದೇವರಾಗಿರುವ ಶ್ರೀ ವೇದವ್ಯಾಸ ದೇವರ ಮೂರ್ತಿಯನ್ನು ಹೊತ್ತು ಗಂಗಾಸ್ನಾನವನ್ನು ಮಾಡಿದರು.

ವಾರಣಾಸಿಯಲ್ಲಿರುವ ಮೂಲಮಠದಲ್ಲಿ ವೃಂದಾವನಸ್ಥರಾಗಿರುವ ಕಾಶೀಮಠದ ಗುರುಪರಂಪರೆಯ ಮೂರನೇ ಯತಿ ಶ್ರೀಮದ್ ಉಪೇಂದ್ರ ತೀರ್ಥ ಸ್ವಾಮೀಜಿಯವರ 350 ಪುಣ್ಯತಿಥಿ ಹಾಗೂ ಐದನೇ ಯತಿ ಶ್ರೀಮದ್ ರಾಘವೇಂದ್ರ ತೀರ್ಥ ಸ್ವಾಮೀಜಿಯವರ 300 ನೇ ಪುಣ್ಯತಿಥಿ ಆಚರಣೆಯ ಅಂಗವಾಗಿ ಮೂಲಮಠಕ್ಕೆ ಚಿತ್ತೈಸಿರುವ ಶ್ರೀಗಳು ಮಠದ ದೇವರಿಗೆ ಪೂಜೆಯನ್ನು ಸಲ್ಲಿಸಿ ಭಾರತದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಭಕ್ತರನ್ನು ಅನುಗ್ರಹಿಸಿದರು.

ಕಾಶಿಯ ಬ್ರಹ್ಮಘಾಟ್ ನಲ್ಲಿ ಕಾಶಿಮಠದ ಮೂಲಮಠ ಗಂಗಾನದಿಯ ದಡದಲ್ಲಿದ್ದು, ಇಲ್ಲಿ ಮೊಕ್ಕಾ ಮಾಡುವ ಕಾಶೀಮಠಾಧೀಶರು ಮಠದ ದೇವರ ಸಹಿತ ಗಂಗಾಸ್ನಾನ ಮಾಡುವ ಸಂಪ್ರದಾಯ ಅನಾದಿಕಾಲದಿಂದ ಜಾರಿಯಲ್ಲಿದೆ.

ಇಂತಹ ಪುಣ್ಯ ಸಂದರ್ಭದಲ್ಲಿ ಶ್ರೀಗಳೊಂದಿಗೆ ಗುಜರಾತ್ ಐಎಎಸ್ ಅಧಿಕಾರಿ ಡಾ. ವಿನೋದ್ ರಾವ್, ಮುಂಬೈ ಜಿಎಸ್ ಬಿ ಸೇವಾ ಮಂಡಲದ ಪ್ರಮುಖರಾದ ದೀಪಕ್ ಭಾಸ್ಕರ್ ಶೆಣೈ, ಮಂಗಳೂರು ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಮುಖಂಡರಾದ ನಿತಿನ್ ಪ್ರಭು, ಜಯಂತ ಪ್ರಭು, ರಾಜೀವ್ ವಾದ್ಯಾರ್, ಮನೋಹರ್ ನಾಯಕ್, ಚೆಂಪಿ ಉಮೇಶ್ ಭಟ್, ವೈದಿಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search