• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಲ್ ಗಳಲ್ಲಿ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳುವಂತಿಲ್ಲ!

TNN Correspondent Posted On September 4, 2017
0


0
Shares
  • Share On Facebook
  • Tweet It

ನೀವು ಮಂಗಳೂರಿನ ಸಿಟಿ ಸೆಂಟರ್ ಗೆ ಮುಂದಿನ ಬಾರಿ ಹೋದಾಗ ನಿಮ್ಮ ವಾಹನ ಮಾಲ್ ಒಳಗೆ ಪಾರ್ಕ್ ಮಾಡಲು ಹೋಗುವಾಗ ಯಾವುದೇ ಹಣ ಕೊಡುವ ಅಗತ್ಯ ಇಲ್ಲ. ಕಾರಣ ಹಾಗೆ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳುವುದು ಕಾನೂನು ಪ್ರಕಾರ ತಪ್ಪು ಎಂದು ಹೈದ್ರಾಬಾದ್ ನಲ್ಲಿರುವ ಆಂದ್ರಪ್ರದೇಶ ಉಚ್ಚ ನ್ಯಾಯಾಲಯ 2003, ಮೇ 2 ರಂದು ಮದನ್ ಮೋಹನ್ ಮತ್ತು ಇತರರು ವಿರುದ್ಧ ಹೈದ್ರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಕೇಸಿನಲ್ಲಿ ಹೇಳಿದೆ.

ತನ್ನಿಂದ ಹೈದ್ರಾಬಾದ್ ನ ಮಾಲ್ ಒಂದರಲ್ಲಿ ಪಾರ್ಕಿಂಗ್ ಫೀಸ್ ತೆಗೆದುಕೊಳ್ಳಲಾಗಿದೆ ಎಂದು ವಿಜಯ್ ಗೋಪಾಲ ಎನ್ನುವವರು ಪೊಲೀಸ್ ಸ್ಟೇಶನ್ ನಲ್ಲಿ ದೂರು ನೀಡಿದ್ದರು. ಅವರ ದೂರಿನ ಮೇಲೆ ಪ್ರಥಮ ಮಾಹಿತಿ ವರದಿಯಲ್ಲಿ ಪೊಲೀಸರು ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ಸೆಕ್ಷನ್ 188, 418, 420 ಬಳಸಿ ಮಾಲ್ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಯಾವುದೇ ವಸತಿ ಸಮುಚ್ಚಯ ಅಥವಾ ವಾಣಿಜ್ಯ ಸಂಕೀರ್ಣ ನಿರ್ಮಿಸುವಾಗ ಅದರಲ್ಲಿ ಹೊರಗಿನಿಂದ ಅಲ್ಲಿ ಭೇಟಿ ಕೊಡುವ ವ್ಯಕ್ತಿಗಳ ವಾಹನ ನಿಲ್ಲಿಸಲು ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಇರಬೇಕು ಎಂದು ನಿಯಮ ಇದೆ. ಹಾಗೆ ಮಾಲ್ ಗಳಿಗೆ ಭೇಟಿ ಕೊಡುವ ಗ್ರಾಹಕರಿಗಾಗಿ ಇರುವ ಪಾರ್ಕಿಂಗ್ ವ್ಯವಸ್ಥೆ ಕಡ್ಡಾಯವಾಗಿದ್ದು ಅಲ್ಲಿ ಯಾವುದೇ ರೀತಿಯ ಶುಲ್ಕವನ್ನು ಸ್ವೀಕರಿಸಬಾರದು ಎನ್ನುವ ನಿಯಮ ಇದೆ. ಆ ನಿಯಮ ಮೀರಿ ಆ ಮಾಲ್ ನ ಆಡಳಿತ ಮಂಡಳಿ ಶುಲ್ಕ ಸ್ವೀಕರಿಸುತ್ತಿದ್ದರೆ ಅವರ ವಿರುದ್ಧ ದೂರು ದಾಖಲಿಸಬಹುದು.

ಇಲ್ಲಿಯ ತನಕ ಈ ನಿಯಮ ಯಾರಿಗೂ ಗೊತ್ತಿರಲಿಲ್ಲ. ಆಂಧ್ರ ಪ್ರದೇಶ ಹೈಕೋರ್ಟ್ ಆದೇಶ ನೀಡಿದ ನಂತರ ಇದರ ಬಗ್ಗೆ ಎಲ್ಲೆಡೆ ಜಾಗೃತಿ ಮೂಡಿದೆ. ಕೆಲವು ರಾಜ್ಯಗಳಲ್ಲಿ ಹೆಚ್ಚೆಂದರೆ 5 ರೂಪಾಯಿ ಪಾರ್ಕಿಂಗ್ ಫೀಸ್ ಪಡೆಯುವ ಅವಕಾಶ ಇರುವುದು ಹೌದು. ಒಟ್ಟಿನಲ್ಲಿ ಕರಾವಳಿಯ ಯಾವುದೇ ಮಾಲ್ ಗಳಲ್ಲಿ ನೀವು ಇನ್ನು ಮುಂದೆ ವಾಹನ ಪಾರ್ಕ್ ಮಾಡಿ ಆರಾಮಾಗಿ ಮಾಲ್ ಸುತ್ತಾಡಿ ಬರಬಹುದು. ಅಲ್ಲಿ ಹಣ ಕೇಳಿದರೆ ಕೊಡಲ್ಲ ಎನ್ನಿ, ಕಾನೂನು ಗ್ರಾಹಕರ ಪರವಾಗಿ ಇದೆ

0
Shares
  • Share On Facebook
  • Tweet It


mallparking fess


Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search