• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದುವೆ ಮಾಡಿಸಿ ಇಲ್ಲದಿದ್ದರೆ ಸಾಯುತ್ತೇನೆ ಎಂದವನು ತಕ್ಷಣ ಗೊಟಕ್!

Tulunadu News Posted On March 19, 2025
0


0
Shares
  • Share On Facebook
  • Tweet It

ಗ್ರಾಮೀಣ ಭಾಗದ ಯುವಕರಿಗೆ ಮದುವೆಯಾಗಲು ಸೂಕ್ತ ಹೆಣ್ಣು ಸಿಗುವುದಿಲ್ಲ ಎನ್ನುವ ಸಂಕಷ್ಟ ಯಾವಾಗಲೂ ಇದ್ದೇ ಇದೆ. ಹಳ್ಳಿಗಳಲ್ಲಿ ರೈತರಿಗೆ, ಬಾಣಸಿಗರಿಗೆ, ಅರ್ಚಕರಿಗೆ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಶ್ರಮಪಟ್ಟು ದುಡಿಯುವ ಯುವಕರಿಗೆ ಮದುವೆಯಾಗಲು ಕನ್ಯೆ ಸಿಗದೇ ಅವರು ಒದ್ದಾಡುವ ಘಟನೆಗಳು ಒಂದಲ್ಲ ಒಂದು ಕಡೆ ನೋಡ್ತಾ ಇರಬಹುದು. ಕೆಲವರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡು ಬದುಕನ್ನು ಅಂತ್ಯಗೊಳಿಸಿದ್ದಾರೆ.

ಆತ್ಮಹತ್ಯೆ ಎಲ್ಲದಕ್ಕೂ ಪರಿಹಾರ ಅಲ್ಲ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಕೆಲವರು ಕೇಳುವುದಿಲ್ಲ. ಕೊಳ್ಳೇಗಾಲದ ಯುವಕನೊಬ್ಬನಿಗೆ ಮದುವೆ ಮಾಡಿಸಲು ಮನೆಯವರು ಹೆಣ್ಣು ಹುಡುಕುತ್ತಿದ್ದರು. ಆದರೆ ಸಮಸ್ಯೆ ಏನೆಂದರೆ ಅವನ ಮನೆ ಚಿಕ್ಕದು. ಅದರೊಂದಿಗೆ ಸ್ವಂತ ಜಮೀನಿಲ್ಲ. ಇದರಿಂದಾಗಿ ಯಾರೂ ಹೆಣ್ಣು ಕೊಡಲು ಮುಂದೆ ಬರುತ್ತಿರಲಿಲ್ಲ.

ಈ ನಡುವೆ ಮದುವೆಗೆ ಯಾರೂ ಹೆಣ್ಣುಕೊಡಲ್ಲ ಎಂದು ಮಸಣ ಶೆಟ್ಟಿಗೆ ಸಿಕ್ಕಾಪಟ್ಟೆ ಮನ ನೊಂದಿತ್ತು. ಅದರಿಂದ ಕುಡಿಯಲು ಶುರು ಮಾಡಿದ. ಕುಡಿತದ ಚಟ ಎಷ್ಟಾಗಿತ್ತು ಎಂದರೆ ಮನೆಯವರು ಹೆಣ್ಣು ಹುಡುಕುವುದನ್ನೇ ಬಿಟ್ಟುಬಿಟ್ಟಿದ್ದರು. ಕೊನೆಗೆ ಅದೊಂದು ಬಿಟ್ಟರೆ ಮದುವೆಯಾಗಬಹುದು ಎಂದು ಸಂಬಂಧಿಕರು ಹೇಳಿದ್ದರಿಂದ ಅದನ್ನು ಬಿಟ್ಟಿದ್ದ. ಆದರೆ ಆಗಲೂ ಮದುವೆಗೆ ಹುಡುಗಿ ಸಿಗುತ್ತಿಲ್ಲ, ಇನ್ನು ವಧು ಸಿಗದಿದ್ದರೆ ಜೀವನ ಅಂತ್ಯಗೊಳಿಸುತ್ತೇನೆ ಎಂದು ತಾಯಿಗೆ ಹೆದರಿಸಲು ಒಂದು ಕೆಟ್ಟ ಪ್ಲಾನ್ ಮಾಡಿದ. ಊರಿನ ಹೈಟೆನ್ಷನ್ ಕಂಬ ಏರಿಬಿಟ್ಟ.

ಅಲ್ಲಿಯೇ ನಿಂತು ಮದುವೆಗೆ ಹುಡುಗಿ ಸಿಗದಿದ್ದರೆ ಇಲ್ಲಿಯೇ ಸಾಯುತ್ತೇನೆ ಎಂದು ಹೆದರಿಸಿದ. ಅವನ ಮನೆಯಲ್ಲಿ ತಾಯಿಗೆ ಯಾರೋ ವಿಷಯ ತಿಳಿಸಿದರು. ಅವರು ಓಡೋಡಿ ಬಂದರು. ಇಳಿಯೋ ಎಂದು ಅಂಗಲಾಚಿದರು. ಎಷ್ಟು ಬೇಡಿದರೂ ಇವನು ಇನ್ನಷ್ಟು ಹೆದರಿಸಲು ಶುರು ಮಾಡಿಕೊಂಡ. ಈ ಗಡಿಬಿಡಿಯಲ್ಲಿ ಹೈಟೆನ್ಷನ್ ತಂತಿಯನ್ನು ಹಿಡಿಯಲು ಹೋಗಿ ಅದರಲ್ಲಿ ಹರಿಯುತ್ತಿದ್ದ ವಿದ್ಯುತ್ ಪ್ರವಹಿಸಿ ಅಲ್ಲಿಯೇ ಕೊನೆಯುಸಿರೆಳೆದುಕೊಂಡ. ಈ ಮೂಲಕ 27 ವರ್ಷದ ಮಸಣ ಶೆಟ್ಟಿಯ ಬಾಳು ಅಂತ್ಯವಾಯಿತು.

0
Shares
  • Share On Facebook
  • Tweet It




Trending Now
ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
Tulunadu News July 14, 2025
ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
Tulunadu News July 14, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
  • Popular Posts

    • 1
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 2
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 3
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • 4
      ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • 5
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!

  • Privacy Policy
  • Contact
© Tulunadu Infomedia.

Press enter/return to begin your search