• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಕ್ಷಿಣ ಕನ್ನಡದ ಇಬ್ಬರು, ಉಡುಪಿಯ ಒಬ್ಬರು ಸೇರಿ 18 ಶಾಸಕರನ್ನು ಸಸ್ಪೆಂಡ್ ಮಾಡಿದ ಯು.ಟಿ.ಖಾದರ್!

Tulunadu News Posted On March 21, 2025
0


0
Shares
  • Share On Facebook
  • Tweet It

ಕರ್ನಾಟಕದ ಸದನದಲ್ಲಿ ಭಾರತೀಯ ಜನತಾ ಪಾರ್ಟಿಯ 18 ಶಾಸಕರನ್ನು ಅಮಾನತು ಮಾಡಿ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ ಆದೇಶ ಹೊರಡಿಸಿದ್ದಾರೆ. ಈ 18 ಸದಸ್ಯರನ್ನು ಆರು ತಿಂಗಳವರೆಗೆ ಅಮಾನತು ಮಾಡಿರುವ ಸ್ಪೀಕರ್ ಕ್ರಮದ ವಿರುದ್ಧ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಬಿಜೆಪಿ ಶಾಸಕರ ಅಮಾನತಿಗೆ ಮುಖ್ಯ ಕಾರಣ ಏನು?

ಸದನದಲ್ಲಿ ಬಹಳ ದೊಡ್ಡ ವಿಷಯವಾಗಿ ಚರ್ಚೆಯಲ್ಲಿರುವ ಹನಿಟ್ರಾಪ್ ಹಾಗೂ ಮುಸಲೀಯರಿಗೆ ಗುತ್ತಿಗೆಯಲ್ಲಿ 4 ಶೇಕಡಾ ಮೀಸಲಾತಿ ನೀಡುವುದರ ವಿರುದ್ಧ ಭಾರತೀಯ ಜನತಾ ಪಾರ್ಟಿಯ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದರು. ಇನ್ನು ಈ ವಿಷಯಗಳ ಬಗ್ಗೆ ಚರ್ಚೆಗೆ ಪಟ್ಟು ಹಿಡಿದು ವಿರೋಧ ಪಕ್ಷದ ಶಾಸಕರು ಬೆಳಿಗ್ಗೆಯಿಂದ ಸದನದಲ್ಲಿ ತೀವ್ರ ವಿರೋಧವನ್ನು ವ್ಯಕ್ತಪಡಿಸುತ್ತಿದ್ದರು.

ಈ ವರ್ತನೆಯನ್ನು ಖಂಡಿಸಿ ಸ್ಪೀಕರ್ ಯು. ಟಿ. ಖಾದರ್ ಅವರು ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಮಟ್ಟಿಗೆ ಅಮಾನತು ಮಾಡಿದ್ದಾರೆ. ಈ ಶಾಸಕರುಗಳು 6 ತಿಂಗಳ ತನಕ ವಿಧಾನಸೌಧದ ಒಳಗೆ ಯಾವುದೇ ಸಭೆಯಲ್ಲಿ ಮತ್ತು ಅಧಿವೇಶನ ನಡೆಯುವಾಗ ಪಾಲ್ಗೊಳ್ಳುವಂತಿಲ್ಲ.

ಈ ಹದಿನೆಂಟು ಶಾಸಕರಲ್ಲಿ ದಕ್ಷಿಣ ಕನ್ನಡದ ಇಬ್ಬರು ಶಾಸಕರುಗಳಾದ ಮಂಗಳೂರು ನಗರ ಉತ್ತರದ ಡಾ. ಭರತ್ ಶೆಟ್ಟಿ, ಮೂಲ್ಕಿ-ಮೂಡಬಿದ್ರೆಯ ಉಮಾನಾಥ ಕೋಟ್ಯಾನ್, ಉಡುಪಿಯ ಶಾಸಕ ಯಶಪಾಲ್ ಸುವರ್ಣ ಸೇರಿದ್ದಾರೆ. ಇನ್ನುಳಿದ ಪ್ರಮುಖ ಶಾಸಕರುಗಳಲ್ಲಿ ಅಶ್ವಥ ನಾರಾಯಣ, ಚನ್ನಬಸಪ್ಪ, ಶರಣ್ ಸಲಗರ್, ಹರೀಶ್ ಬಿ.ಪಿ, ಮುನಿರತ್ನ, ಧೀರಜ್ ಮುನಿರಾಜ್, ವಿಶ್ವನಾಥ್, ಸಿ.ಕೆ ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಮತ್ತಿಮೂಡ್, ಚಂದ್ರು ಲಮಾಣಿ ಹಾಗೂ ಇನ್ನಿತರರು ಸೇರಿದ್ದಾರೆ.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search