• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಫ್ತಾರ್ ಕೂಟದಲ್ಲಿ ಆಹಾರ ಸವಿದು ಖುಷಿ ವ್ಯಕ್ತಪಡಿಸಿದ ಸುಧಾ ಮೂರ್ತಿ!

Tulunadu News Posted On March 21, 2025


  • Share On Facebook
  • Tweet It

ಈಗ ರಮ್ಜಾನ್ ತಿಂಗಳು. ಮುಸಲ್ಮಾನರ ಪವಿತ್ರ ಮಾಸ. ಅವರ ಪದ್ಧತಿಯಂತೆ ಎಲ್ಲೆಡೆ ಇಫ್ತಾರ್ ಕೂಟಗಳನ್ನು ಆಯೋಜಿಸಲಾಗುತ್ತದೆ. ಭಾರತದ ರಾಜಧಾನಿ ದೆಹಲಿಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಘಟನೆಯಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ನಾಯಕರು, ಸಮಾಜವಾದಿ ಪಕ್ಷದ ಪ್ರಮುಖರ ಸಹಿತ ಅನೇಕ ರಾಜಕೀಯ ಪಕ್ಷ, ಕ್ರೀಡಾ ಕ್ಷೇತ್ರ, ಸಿನೆಮಾ ಕ್ಷೇತ್ರದ, ಉದ್ಯಮಿಗಳನ್ನು ಸೇರಿಸಿಕೊಂಡು ಅನೇಕ ಘಟಾನುಘಟಿಗಳು ಭಾಗವಹಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಸಭಾ ಸಂಸದೆ ಶ್ರೀಮತಿ ಸುಧಾ ಮೂರ್ತಿ ಭಾಗವಹಿಸಿ ಆಹಾರವನ್ನು ಸವಿದಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ ” ಎಲ್ಲರಿಗೂ ಶಾಂತಿ, ಸಾಮರಸ್ಯದ ರಂಜಾನ್ ಶುಭಾಶಯಗಳು. ಎಲ್ಲರೂ ಎಲ್ಲಾ ಹಬ್ಬಗಳನ್ನು ಎಂಜಾಯ್ ಮಾಡಬೇಕು. ನನಗೆ ಇಲ್ಲಿ ಪ್ರೀತಿಯಿಂದ ಕರೆದಿದ್ದಾರೆ. ಅದಕ್ಕೆ ಖುಷಿಯಾಗಿದೆ. ಹಾಗೆ ಕರೆದಿದ್ದಕ್ಕೆ ಬಂದಿದ್ದೇನೆ. ನಾಳೆ ನೀವು ಕರೆದ್ರೂ ಬರುತ್ತೇನೆ” ಎಂದು ಹೇಳಿದ್ದಾರೆ.

ಸುಧಾಮೂರ್ತಿಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದು ಅವರ ಸ್ವನಿರ್ಧಾರವೋ ಅಥವಾ ಬಿಜೆಪಿ ಹೈಕಮಾಂಡ್ ಅನುಮತಿಯನ್ನು ಪಡೆದಿದ್ದಾರೋ ಎನ್ನುವುದು ಖಚಿತವಾಗಿಲ್ಲ. ನಾನು ಪ್ರೀತಿಯಿಂದ ಯಾರು ಕರೆದರೂ ಹೋಗುತ್ತೇನೆ ಎಂದು ಮಾಧ್ಯಮದವರ ಮುಂದೆ ಹೇಳುವ ಮೂಲಕ ಅವರು ಜಾತ್ಯಾತೀತ ನಿಲುವನ್ನು ತಳೆದಿರಬಹುದು. ಆದರೆ ಬಿಜೆಪಿ ಮುಖಂಡರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

ಸುಧಾ ಮೂರ್ತಿಯವರ ಪತಿ ನಾರಾಯಣ ಮೂರ್ತಿ ಇನ್ಫೋಸಿಸ್ ಸಂಸ್ಥೆಯ ಸ್ಥಾಪಕರಲ್ಲಿ ಪ್ರಮುಖರಾಗಿ ಇತ್ತೀಚೆಗೆ ಯುವಕರು ವಾರಕ್ಕೆ 70 ಗಂಟೆ ದುಡಿದು ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂದು ಹೇಳಿ ಚರ್ಚೆಗೆ ನಾಂದಿ ಹಾಡಿದ್ದರು. ಕಳೆದ ವರ್ಷ ಮಹಿಳಾ ದಿನದಂದು ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search