• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಫ್ತಾರ್ ಕೂಟದಲ್ಲಿ ಆಹಾರ ಸವಿದು ಖುಷಿ ವ್ಯಕ್ತಪಡಿಸಿದ ಸುಧಾ ಮೂರ್ತಿ!

Tulunadu News Posted On March 21, 2025
0


0
Shares
  • Share On Facebook
  • Tweet It

ಈಗ ರಮ್ಜಾನ್ ತಿಂಗಳು. ಮುಸಲ್ಮಾನರ ಪವಿತ್ರ ಮಾಸ. ಅವರ ಪದ್ಧತಿಯಂತೆ ಎಲ್ಲೆಡೆ ಇಫ್ತಾರ್ ಕೂಟಗಳನ್ನು ಆಯೋಜಿಸಲಾಗುತ್ತದೆ. ಭಾರತದ ರಾಜಧಾನಿ ದೆಹಲಿಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಘಟನೆಯಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ನಾಯಕರು, ಸಮಾಜವಾದಿ ಪಕ್ಷದ ಪ್ರಮುಖರ ಸಹಿತ ಅನೇಕ ರಾಜಕೀಯ ಪಕ್ಷ, ಕ್ರೀಡಾ ಕ್ಷೇತ್ರ, ಸಿನೆಮಾ ಕ್ಷೇತ್ರದ, ಉದ್ಯಮಿಗಳನ್ನು ಸೇರಿಸಿಕೊಂಡು ಅನೇಕ ಘಟಾನುಘಟಿಗಳು ಭಾಗವಹಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಸಭಾ ಸಂಸದೆ ಶ್ರೀಮತಿ ಸುಧಾ ಮೂರ್ತಿ ಭಾಗವಹಿಸಿ ಆಹಾರವನ್ನು ಸವಿದಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ ” ಎಲ್ಲರಿಗೂ ಶಾಂತಿ, ಸಾಮರಸ್ಯದ ರಂಜಾನ್ ಶುಭಾಶಯಗಳು. ಎಲ್ಲರೂ ಎಲ್ಲಾ ಹಬ್ಬಗಳನ್ನು ಎಂಜಾಯ್ ಮಾಡಬೇಕು. ನನಗೆ ಇಲ್ಲಿ ಪ್ರೀತಿಯಿಂದ ಕರೆದಿದ್ದಾರೆ. ಅದಕ್ಕೆ ಖುಷಿಯಾಗಿದೆ. ಹಾಗೆ ಕರೆದಿದ್ದಕ್ಕೆ ಬಂದಿದ್ದೇನೆ. ನಾಳೆ ನೀವು ಕರೆದ್ರೂ ಬರುತ್ತೇನೆ” ಎಂದು ಹೇಳಿದ್ದಾರೆ.

ಸುಧಾಮೂರ್ತಿಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದು ಅವರ ಸ್ವನಿರ್ಧಾರವೋ ಅಥವಾ ಬಿಜೆಪಿ ಹೈಕಮಾಂಡ್ ಅನುಮತಿಯನ್ನು ಪಡೆದಿದ್ದಾರೋ ಎನ್ನುವುದು ಖಚಿತವಾಗಿಲ್ಲ. ನಾನು ಪ್ರೀತಿಯಿಂದ ಯಾರು ಕರೆದರೂ ಹೋಗುತ್ತೇನೆ ಎಂದು ಮಾಧ್ಯಮದವರ ಮುಂದೆ ಹೇಳುವ ಮೂಲಕ ಅವರು ಜಾತ್ಯಾತೀತ ನಿಲುವನ್ನು ತಳೆದಿರಬಹುದು. ಆದರೆ ಬಿಜೆಪಿ ಮುಖಂಡರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

ಸುಧಾ ಮೂರ್ತಿಯವರ ಪತಿ ನಾರಾಯಣ ಮೂರ್ತಿ ಇನ್ಫೋಸಿಸ್ ಸಂಸ್ಥೆಯ ಸ್ಥಾಪಕರಲ್ಲಿ ಪ್ರಮುಖರಾಗಿ ಇತ್ತೀಚೆಗೆ ಯುವಕರು ವಾರಕ್ಕೆ 70 ಗಂಟೆ ದುಡಿದು ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂದು ಹೇಳಿ ಚರ್ಚೆಗೆ ನಾಂದಿ ಹಾಡಿದ್ದರು. ಕಳೆದ ವರ್ಷ ಮಹಿಳಾ ದಿನದಂದು ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search