• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಫ್ತಾರ್ ಕೂಟದಲ್ಲಿ ಆಹಾರ ಸವಿದು ಖುಷಿ ವ್ಯಕ್ತಪಡಿಸಿದ ಸುಧಾ ಮೂರ್ತಿ!

Tulunadu News Posted On March 21, 2025
0


0
Shares
  • Share On Facebook
  • Tweet It

ಈಗ ರಮ್ಜಾನ್ ತಿಂಗಳು. ಮುಸಲ್ಮಾನರ ಪವಿತ್ರ ಮಾಸ. ಅವರ ಪದ್ಧತಿಯಂತೆ ಎಲ್ಲೆಡೆ ಇಫ್ತಾರ್ ಕೂಟಗಳನ್ನು ಆಯೋಜಿಸಲಾಗುತ್ತದೆ. ಭಾರತದ ರಾಜಧಾನಿ ದೆಹಲಿಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಘಟನೆಯಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ನಾಯಕರು, ಸಮಾಜವಾದಿ ಪಕ್ಷದ ಪ್ರಮುಖರ ಸಹಿತ ಅನೇಕ ರಾಜಕೀಯ ಪಕ್ಷ, ಕ್ರೀಡಾ ಕ್ಷೇತ್ರ, ಸಿನೆಮಾ ಕ್ಷೇತ್ರದ, ಉದ್ಯಮಿಗಳನ್ನು ಸೇರಿಸಿಕೊಂಡು ಅನೇಕ ಘಟಾನುಘಟಿಗಳು ಭಾಗವಹಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಸಭಾ ಸಂಸದೆ ಶ್ರೀಮತಿ ಸುಧಾ ಮೂರ್ತಿ ಭಾಗವಹಿಸಿ ಆಹಾರವನ್ನು ಸವಿದಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ ” ಎಲ್ಲರಿಗೂ ಶಾಂತಿ, ಸಾಮರಸ್ಯದ ರಂಜಾನ್ ಶುಭಾಶಯಗಳು. ಎಲ್ಲರೂ ಎಲ್ಲಾ ಹಬ್ಬಗಳನ್ನು ಎಂಜಾಯ್ ಮಾಡಬೇಕು. ನನಗೆ ಇಲ್ಲಿ ಪ್ರೀತಿಯಿಂದ ಕರೆದಿದ್ದಾರೆ. ಅದಕ್ಕೆ ಖುಷಿಯಾಗಿದೆ. ಹಾಗೆ ಕರೆದಿದ್ದಕ್ಕೆ ಬಂದಿದ್ದೇನೆ. ನಾಳೆ ನೀವು ಕರೆದ್ರೂ ಬರುತ್ತೇನೆ” ಎಂದು ಹೇಳಿದ್ದಾರೆ.

ಸುಧಾಮೂರ್ತಿಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದು ಅವರ ಸ್ವನಿರ್ಧಾರವೋ ಅಥವಾ ಬಿಜೆಪಿ ಹೈಕಮಾಂಡ್ ಅನುಮತಿಯನ್ನು ಪಡೆದಿದ್ದಾರೋ ಎನ್ನುವುದು ಖಚಿತವಾಗಿಲ್ಲ. ನಾನು ಪ್ರೀತಿಯಿಂದ ಯಾರು ಕರೆದರೂ ಹೋಗುತ್ತೇನೆ ಎಂದು ಮಾಧ್ಯಮದವರ ಮುಂದೆ ಹೇಳುವ ಮೂಲಕ ಅವರು ಜಾತ್ಯಾತೀತ ನಿಲುವನ್ನು ತಳೆದಿರಬಹುದು. ಆದರೆ ಬಿಜೆಪಿ ಮುಖಂಡರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

ಸುಧಾ ಮೂರ್ತಿಯವರ ಪತಿ ನಾರಾಯಣ ಮೂರ್ತಿ ಇನ್ಫೋಸಿಸ್ ಸಂಸ್ಥೆಯ ಸ್ಥಾಪಕರಲ್ಲಿ ಪ್ರಮುಖರಾಗಿ ಇತ್ತೀಚೆಗೆ ಯುವಕರು ವಾರಕ್ಕೆ 70 ಗಂಟೆ ದುಡಿದು ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂದು ಹೇಳಿ ಚರ್ಚೆಗೆ ನಾಂದಿ ಹಾಡಿದ್ದರು. ಕಳೆದ ವರ್ಷ ಮಹಿಳಾ ದಿನದಂದು ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search