• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಫ್ತಾರ್ ಕೂಟದಲ್ಲಿ ಆಹಾರ ಸವಿದು ಖುಷಿ ವ್ಯಕ್ತಪಡಿಸಿದ ಸುಧಾ ಮೂರ್ತಿ!

Tulunadu News Posted On March 21, 2025
0


0
Shares
  • Share On Facebook
  • Tweet It

ಈಗ ರಮ್ಜಾನ್ ತಿಂಗಳು. ಮುಸಲ್ಮಾನರ ಪವಿತ್ರ ಮಾಸ. ಅವರ ಪದ್ಧತಿಯಂತೆ ಎಲ್ಲೆಡೆ ಇಫ್ತಾರ್ ಕೂಟಗಳನ್ನು ಆಯೋಜಿಸಲಾಗುತ್ತದೆ. ಭಾರತದ ರಾಜಧಾನಿ ದೆಹಲಿಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಘಟನೆಯಿಂದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ನಾಯಕರು, ಸಮಾಜವಾದಿ ಪಕ್ಷದ ಪ್ರಮುಖರ ಸಹಿತ ಅನೇಕ ರಾಜಕೀಯ ಪಕ್ಷ, ಕ್ರೀಡಾ ಕ್ಷೇತ್ರ, ಸಿನೆಮಾ ಕ್ಷೇತ್ರದ, ಉದ್ಯಮಿಗಳನ್ನು ಸೇರಿಸಿಕೊಂಡು ಅನೇಕ ಘಟಾನುಘಟಿಗಳು ಭಾಗವಹಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಸಭಾ ಸಂಸದೆ ಶ್ರೀಮತಿ ಸುಧಾ ಮೂರ್ತಿ ಭಾಗವಹಿಸಿ ಆಹಾರವನ್ನು ಸವಿದಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ ” ಎಲ್ಲರಿಗೂ ಶಾಂತಿ, ಸಾಮರಸ್ಯದ ರಂಜಾನ್ ಶುಭಾಶಯಗಳು. ಎಲ್ಲರೂ ಎಲ್ಲಾ ಹಬ್ಬಗಳನ್ನು ಎಂಜಾಯ್ ಮಾಡಬೇಕು. ನನಗೆ ಇಲ್ಲಿ ಪ್ರೀತಿಯಿಂದ ಕರೆದಿದ್ದಾರೆ. ಅದಕ್ಕೆ ಖುಷಿಯಾಗಿದೆ. ಹಾಗೆ ಕರೆದಿದ್ದಕ್ಕೆ ಬಂದಿದ್ದೇನೆ. ನಾಳೆ ನೀವು ಕರೆದ್ರೂ ಬರುತ್ತೇನೆ” ಎಂದು ಹೇಳಿದ್ದಾರೆ.

ಸುಧಾಮೂರ್ತಿಯವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದು ಅವರ ಸ್ವನಿರ್ಧಾರವೋ ಅಥವಾ ಬಿಜೆಪಿ ಹೈಕಮಾಂಡ್ ಅನುಮತಿಯನ್ನು ಪಡೆದಿದ್ದಾರೋ ಎನ್ನುವುದು ಖಚಿತವಾಗಿಲ್ಲ. ನಾನು ಪ್ರೀತಿಯಿಂದ ಯಾರು ಕರೆದರೂ ಹೋಗುತ್ತೇನೆ ಎಂದು ಮಾಧ್ಯಮದವರ ಮುಂದೆ ಹೇಳುವ ಮೂಲಕ ಅವರು ಜಾತ್ಯಾತೀತ ನಿಲುವನ್ನು ತಳೆದಿರಬಹುದು. ಆದರೆ ಬಿಜೆಪಿ ಮುಖಂಡರು ಇದನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

ಸುಧಾ ಮೂರ್ತಿಯವರ ಪತಿ ನಾರಾಯಣ ಮೂರ್ತಿ ಇನ್ಫೋಸಿಸ್ ಸಂಸ್ಥೆಯ ಸ್ಥಾಪಕರಲ್ಲಿ ಪ್ರಮುಖರಾಗಿ ಇತ್ತೀಚೆಗೆ ಯುವಕರು ವಾರಕ್ಕೆ 70 ಗಂಟೆ ದುಡಿದು ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂದು ಹೇಳಿ ಚರ್ಚೆಗೆ ನಾಂದಿ ಹಾಡಿದ್ದರು. ಕಳೆದ ವರ್ಷ ಮಹಿಳಾ ದಿನದಂದು ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

0
Shares
  • Share On Facebook
  • Tweet It




Trending Now
ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
Tulunadu News August 13, 2025
ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
Tulunadu News August 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
  • Popular Posts

    • 1
      ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • 2
      ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • 3
      ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!

  • Privacy Policy
  • Contact
© Tulunadu Infomedia.

Press enter/return to begin your search