• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಚ ಕೇಳುವವನು ಅವನ ವಂಶದ ಕೊನೆಯ ಸರಕಾರಿ ಉದ್ಯೋಗಿಯಾಗಲಿದ್ದಾನೆ – ಸಿಎಂ ಯೋಗಿ ಆದಿತ್ಯನಾಥ್

Tulunadu News Posted On March 22, 2025
0


0
Shares
  • Share On Facebook
  • Tweet It

ಉತ್ತರ ಪ್ರದೇಶದಲ್ಲಿ ಬಂಡವಾಳ ಹೂಡುವವರು ಯಾವುದೇ ಕಿರಿಕಿರಿ ಇಲ್ಲದೇ ಆರಾಮವಾಗಿ ಮುಂದುವರೆಯಬಹುದು. ಸಿಂಗಲ್ ವೀಂಡೋ ಸಿಸ್ಟಮ್ ಮೂಲಕ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಿ ಕೊಡಲಾಗುವುದು. ಅದರೊಂದಿಗೆ ಯುವಕರಿಗೆ ಸಾಲವನ್ನು ನೀಡಿ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಲಾಗುವುದು. ಈ ಎಲ್ಲಾ ವಿಷಯದಲ್ಲಿ ನಿಮ್ಮಿಂದ ಯಾರಾದರೂ ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ. ಅಂತಹ ಅಧಿಕಾರಿಯ ವಿರುದ್ಧ ತನಿಖೆ ನಡೆಸಿ ಅಂತವರ ವಂಶದಲ್ಲಿಯೇ ಯಾರಿಗೂ ಸರಕಾರಿ ಉದ್ಯೋಗ ಸಿಗದ ಹಾಗೆ ನೋಡುವ ಜವಾಬ್ದಾರಿ ನಮ್ಮದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಭ್ರಷ್ಟಾಚಾರ ಎನ್ನುವುದು ಯಾವುದೇ ವ್ಯವಸ್ಥೆ ಸಮರ್ಪಕವಾಗಿ ನಡೆದು ರಾಜ್ಯ, ದೇಶ ಅಭಿವೃದ್ಧಿಗೊಳ್ಳಲು ಇರುವ ಬಹುದೊಡ್ಡ ಅಡಚಣೆ. ಅದನ್ನು ಬುಡಸಮೇತ ಕಿತ್ತು ಹಾಕಬೇಕಿದೆ. ಅದಕ್ಕೆ ನಮ್ಮ ಸರಕಾರ ಬದ್ಧ ಎಂದು ಸಿಎಂ ಹೇಳಿದರು. ಉತ್ತರ ಪ್ರದೇಶ ರಾಜ್ಯದ ಹಿಂದಿನ ಕೆಟ್ಟ ಇಮೇಜ್ ಕಳಚಿ ಈಗಿನ ಸರಕಾರದಿಂದ ಸಂಪೂರ್ಣ ಇಮೇಜ್ ಬದಲಾವಣೆ ಆಗುತ್ತಿದ್ದು, ಇದು ಪ್ರಸ್ತುತ ದೇಶದ ಎರಡನೇ ಅತೀ ದೊಡ್ಡ ಆರ್ಥಿಕತೆ ಹೊಂದಿರುವ ರಾಜ್ಯವಾಗಿದೆ ಎಂದು ಹೇಳಿದ ಯೋಗಿ ಗೊಂಡಾದಲ್ಲಿ ಮುಖ್ಯಮಂತ್ರಿ ಯುವ ಉದ್ಯಮಿ ವಿಕಾಸ ಅಭಿಯಾನದ ಅಡಿಯಲ್ಲಿ ಆ ಜಿಲ್ಲೆಯ ದೇವಿಪಟ್ಟಣ ವಿಭಾಗದ 1423 ಯುವ ಉದ್ಯಮಿಗಳಿಗೆ 55 ಕೋಟಿ ರೂ ಸಾಲ ವಿತರಿಸಿದರು.

ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ವಿಶ್ವಕರ್ಮ ಶ್ರಮ ಸಮ್ಮಾನ್ ಯೋಜನೆಯಂತಹ ಯೋಜನೆಗಳ ಮೂಲಕ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಯುವಕರಿಗೆ ಕರೆ ನೀಡುತ್ತೇನೆ. ತಾಳ್ಮೆಯಿಂದ ಅದರ ಕಡೆ ಕೆಲಸ ಮಾಡಿ. ಸರಕಾರದ ಏಕಗವಾಕ್ಷಿ ಮತ್ತು ನಿವೇಶ್ ಸಾರಥಿ ಅವರಿಗೆ ಸಹಾಯ ಮಾಡುತ್ತದೆ. ಸಾಲ ಮಂಜೂರು ಮಾಡುವ ಹೆಸರಿನಲ್ಲಿ ಯಾರಾದರೂ ಹಣ ಕೇಳಿದರೆ, ದೂರು ದಾಖಲಿಸಿ. ಸಾಲ ಪಡೆಯುವ ಹೆಸರಿನಲ್ಲಿ ಯಾವುದೇ ವಂಚನೆಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಹೇಳಿದರು.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search