• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಲಂಚ ಕೇಳುವವನು ಅವನ ವಂಶದ ಕೊನೆಯ ಸರಕಾರಿ ಉದ್ಯೋಗಿಯಾಗಲಿದ್ದಾನೆ – ಸಿಎಂ ಯೋಗಿ ಆದಿತ್ಯನಾಥ್

Tulunadu News Posted On March 22, 2025
0


0
Shares
  • Share On Facebook
  • Tweet It

ಉತ್ತರ ಪ್ರದೇಶದಲ್ಲಿ ಬಂಡವಾಳ ಹೂಡುವವರು ಯಾವುದೇ ಕಿರಿಕಿರಿ ಇಲ್ಲದೇ ಆರಾಮವಾಗಿ ಮುಂದುವರೆಯಬಹುದು. ಸಿಂಗಲ್ ವೀಂಡೋ ಸಿಸ್ಟಮ್ ಮೂಲಕ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಿ ಕೊಡಲಾಗುವುದು. ಅದರೊಂದಿಗೆ ಯುವಕರಿಗೆ ಸಾಲವನ್ನು ನೀಡಿ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಲಾಗುವುದು. ಈ ಎಲ್ಲಾ ವಿಷಯದಲ್ಲಿ ನಿಮ್ಮಿಂದ ಯಾರಾದರೂ ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ. ಅಂತಹ ಅಧಿಕಾರಿಯ ವಿರುದ್ಧ ತನಿಖೆ ನಡೆಸಿ ಅಂತವರ ವಂಶದಲ್ಲಿಯೇ ಯಾರಿಗೂ ಸರಕಾರಿ ಉದ್ಯೋಗ ಸಿಗದ ಹಾಗೆ ನೋಡುವ ಜವಾಬ್ದಾರಿ ನಮ್ಮದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

ಭ್ರಷ್ಟಾಚಾರ ಎನ್ನುವುದು ಯಾವುದೇ ವ್ಯವಸ್ಥೆ ಸಮರ್ಪಕವಾಗಿ ನಡೆದು ರಾಜ್ಯ, ದೇಶ ಅಭಿವೃದ್ಧಿಗೊಳ್ಳಲು ಇರುವ ಬಹುದೊಡ್ಡ ಅಡಚಣೆ. ಅದನ್ನು ಬುಡಸಮೇತ ಕಿತ್ತು ಹಾಕಬೇಕಿದೆ. ಅದಕ್ಕೆ ನಮ್ಮ ಸರಕಾರ ಬದ್ಧ ಎಂದು ಸಿಎಂ ಹೇಳಿದರು. ಉತ್ತರ ಪ್ರದೇಶ ರಾಜ್ಯದ ಹಿಂದಿನ ಕೆಟ್ಟ ಇಮೇಜ್ ಕಳಚಿ ಈಗಿನ ಸರಕಾರದಿಂದ ಸಂಪೂರ್ಣ ಇಮೇಜ್ ಬದಲಾವಣೆ ಆಗುತ್ತಿದ್ದು, ಇದು ಪ್ರಸ್ತುತ ದೇಶದ ಎರಡನೇ ಅತೀ ದೊಡ್ಡ ಆರ್ಥಿಕತೆ ಹೊಂದಿರುವ ರಾಜ್ಯವಾಗಿದೆ ಎಂದು ಹೇಳಿದ ಯೋಗಿ ಗೊಂಡಾದಲ್ಲಿ ಮುಖ್ಯಮಂತ್ರಿ ಯುವ ಉದ್ಯಮಿ ವಿಕಾಸ ಅಭಿಯಾನದ ಅಡಿಯಲ್ಲಿ ಆ ಜಿಲ್ಲೆಯ ದೇವಿಪಟ್ಟಣ ವಿಭಾಗದ 1423 ಯುವ ಉದ್ಯಮಿಗಳಿಗೆ 55 ಕೋಟಿ ರೂ ಸಾಲ ವಿತರಿಸಿದರು.

ಒಂದು ಜಿಲ್ಲೆ, ಒಂದು ಉತ್ಪನ್ನ ಅಥವಾ ವಿಶ್ವಕರ್ಮ ಶ್ರಮ ಸಮ್ಮಾನ್ ಯೋಜನೆಯಂತಹ ಯೋಜನೆಗಳ ಮೂಲಕ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಯುವಕರಿಗೆ ಕರೆ ನೀಡುತ್ತೇನೆ. ತಾಳ್ಮೆಯಿಂದ ಅದರ ಕಡೆ ಕೆಲಸ ಮಾಡಿ. ಸರಕಾರದ ಏಕಗವಾಕ್ಷಿ ಮತ್ತು ನಿವೇಶ್ ಸಾರಥಿ ಅವರಿಗೆ ಸಹಾಯ ಮಾಡುತ್ತದೆ. ಸಾಲ ಮಂಜೂರು ಮಾಡುವ ಹೆಸರಿನಲ್ಲಿ ಯಾರಾದರೂ ಹಣ ಕೇಳಿದರೆ, ದೂರು ದಾಖಲಿಸಿ. ಸಾಲ ಪಡೆಯುವ ಹೆಸರಿನಲ್ಲಿ ಯಾವುದೇ ವಂಚನೆಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಹೇಳಿದರು.

0
Shares
  • Share On Facebook
  • Tweet It




Trending Now
ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
Tulunadu News July 19, 2025
ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
Tulunadu News July 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ
    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
  • Popular Posts

    • 1
      ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!
    • 2
      ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!
    • 3
      ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!
    • 4
      ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು...
    • 5
      ಮೋದಿ ಮಾತ್ರ ವಾರಕ್ಕೆ 100 ಗಂಟೆ ಕೆಲಸ ಮಾಡ್ತಾರೆ- ಸಂಸದ ತೇಜಸ್ವಿಗೆ ಹೇಳಿದ ನಾರಾಯಣ್ ಮೂರ್ತಿ

  • Privacy Policy
  • Contact
© Tulunadu Infomedia.

Press enter/return to begin your search