• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾಗಪುರದ ನಷ್ಟ ಕಟ್ಟಿ, ತಪ್ಪಿದರೆ ಆಸ್ತಿ ಮುಟ್ಟುಗೋಲು – ಪಡ್ನವೀಸ್ ಎಚ್ಚರಿಕೆ!

Tulunadu News Posted On March 22, 2025
0


0
Shares
  • Share On Facebook
  • Tweet It

ಮಹಾರಾಷ್ಟದ ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ನಾಗಪುರದ ಕೋಮು ಗಲಭೆಯ ಬಗ್ಗೆ ತೀಕ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ನಾಗಪುರದಲ್ಲಿ ಅಂಗಡಿ ಮುಂಗಟ್ಟುಗಳಿಗೆ, ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಅದರ ನಷ್ಟವನ್ನು ಅವರೇ ಭರಿಸಬೇಕು. ನಷ್ಟ ಭರಿಸಲು ತಯಾರಿಲ್ಲದವರ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಮತ್ತು ಅಗತ್ಯಬಿದ್ದರೆ ಅಂತವರ ಅಕ್ರಮ ಕಟ್ಟಡಗಳಿಗೆ ಬುಲ್ಡೋಜರ್ ಪ್ರಯೋಗ ಬಳಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಪೊಲೀಸರು 68 ಸೋಶಿಯಲ್ ಮೀಡಿಯಾ ಪೋಸ್ಟ್ ಗಳನ್ನು ಜಾಲಾಡಿದ್ದು, ಅವುಗಳಿಂದಲೇ ಸುಳ್ಳು ಸುದ್ದಿ ಹರಡಿ ಇಷ್ಟೆಲ್ಲಾ ಆವಾಂತರಗಳಿಗೆ ಕಾರಣವಾಯಿತು ಎಂದು ಪತ್ತೆ ಹಚ್ಚಿದ್ದಾರೆ. ಈಗ ಅಂತವರ ವಿರುದ್ಧ ಕಾನೂನು ಪ್ರಕ್ರಿಯೆ ತೀವ್ರಗೊಳಿಸಲು ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇನ್ನು ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗುವ ಪೋಸ್ಟ್ ಗಳನ್ನು ಹಂಚಿಕೊಳ್ಳುವುದನ್ನು ಅಪರಾಧಕ್ಕೆ ಸಮ ಎಂದು ಎಚ್ಚರಿಕೆ ಕೊಟ್ಟಿರುವ ಪೊಲೀಸ್ ಇಲಾಖೆ, ಧಾರ್ಮಿಕ ಸಂದೇಶಗಳಿಂದ ಯಾವುದೇ ದುರ್ಘಟನೆಗಳು ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಜನರ ಮೇಲಿದೆ ಎಂದಿದೆ.

ಈ ಎಲ್ಲಾ ಘಟನೆಗಳ ಹೊರತಾಗಿ ಪ್ರಧಾನಿ ನರೇಂದ್ರ ಮೋದಿಯವರ ನಾಗಪುರ ಭೇಟಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ ಪಡ್ನವೀಸ್ ಅದಕ್ಕಾಗಿ ಎಲ್ಲಾ ಸೂಕ್ತ ಭದ್ರತೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಈ ನಡುವೆ ಆರೋಪಿಗಳನ್ನು ಹೆಡೆಮುರಿ ಕಟ್ಟುವ ಮಹಾರಾಷ್ಟ್ರ ಪೊಲೀಸರ ಕ್ರಮ ಬಿರುಸು ಪಡೆದಿದ್ದು, ಇಲ್ಲಿಯ ತನಕ 100 ವ್ಯಕ್ತಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇನ್ನು ಅಂತವರ ಬ್ಯಾಂಕ್ ಖಾತೆಗಳನ್ನು ಸೀಝ್ ಮಾಡಲಾಗುತ್ತಿದ್ದು, ಅವರ ಆಸ್ತಿಗಳ ಬಗ್ಗೆ ದಾಖಲೆ ಪರಿಶೀಲಿಸುವ ಕಾರ್ಯವೂ ಪ್ರಗತಿಯಲ್ಲಿದೆ.
ಇನ್ನು ಔರಂಗಾಜೇಬನ ಸಮಾಧಿಯ ವಿವಾದದಿಂದ ಕೋಮು ಗಲಭೆ ಬುಗಿಲೆದ್ದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ತರಹೇವಾರಿ ಕಮೆಂಟ್ ಬಗ್ಗೆನೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಸುಳ್ಳು ಸುದ್ದಿ ಹರಡಿಸಿ ಗಲಭೆಗೆ ಕಾರಣವಾಗುವವರ ಬಗ್ಗೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search